ಬೆಂಗಳೂರು : ರಾಜ್ಯದಲ್ಲಿ ಸಭೆ, ಸಮಾರಂಭ, ಸಮಾವೇಶದಲ್ಲಿ ಹೆಚ್ಚಿನ ಜನರು ಸೇರುತ್ತಾ ಇದ್ದಾರೆ. ಹೀಗಾಗಿ ಮುಂಜಾಗ್ರತೆ ತೆಗೆದುಕೊಳ್ಳಲೇಬೇಕು. ಮಾರ್ಗಸೂಚಿಗೆ ವಿರುದ್ಧವಾಗಿ ನಡೆಯುತ್ತಿವೆ. ಮದುವೆ ಸಮಾರಂಭಗಳು ಹಾಗೆ ನಡೆಯುತ್ತಿವೆ. ಮಾಸ್ಕ್ ಹಾಕುವುದನ್ನೇ ಬಿಟ್ಟಿದ್ದಾರೆ. ಜನ, ವಿಐಪಿ, ವಿವಿಐಪಿಗಳು ಹಾಕ್ತಿಲ್ಲ. ಇದು ನಿಜಕ್ಕೂ ಅಪಾಯಕಾರಿ. ಹೀಗಾಗಿ ಮದುವೆ ಸಮಾರಂಭಕ್ಕೆ ಮಾರ್ಷಲ್ ಹಾಕ್ತೇವೆ. ಇಂದು ಅಧಿಕೃತ ಸುತ್ತೋಲೆ ಹೊರಡಿಸ್ತೇವೆ. ಫುಡ್ ಮಾಡುವವರು, ಹಂಚುವವರ ಮೇಲೆ ನಿಗಾ ವಹಿಸಲಾಗುತ್ತದೆ. ಇವರೆಲ್ಲರಿಗೆ ಕೊರೋನಾ ಟೆಸ್ಟ್ ಕಡ್ಡಾಯ ಮಾಡ್ತೇವೆ ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಈ ಕುರಿತಂತೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಡಿಸಿ, ಎಸ್ಪಿ, ಸಿಇಒ, ಆರೋಗ್ಯಾಧಿಕಾರಿಗಳ ಜೊತೆಗೆ ವಿಡಿಯೋ ಸಂವಾದವನ್ನ ಮಾಡಿದ್ದೇವೆ. ಕೇರಳ, ಮಹಾರಾಷ್ಟ್ರದಲ್ಲಿ ಸೋಂಕು ಹೆಚ್ಚಾಗ್ತಿದೆ. ಹೀಗಾಗಿ ಗಡಿಯಲ್ಲಿ ಮತ್ತಷ್ಟು ನಿಗಾವಹಿಸಿದ್ದೇವೆ. ಆರ್ ಟಿಪಿಸಿಆರ್ ಟೆಸ್ಟ್ ಮಾಡಲಾಗುತ್ತಿದೆಯೇ.? ಯಾವ ರೀತಿ ಟೆಸ್ಟ್ ನಡೆದಿದೆ, ಪ್ರಮಾಣ ಇದರ ಚರ್ಚೆಯಾಗಿದೆ ಎಂದರು.
ರಾಜ್ಯದಲ್ಲಿ 2 ಲಕ್ಷ 90 ಸಾವಿರ ಸಿಬ್ಬಂದಿಗಳಿಗೆ ಲಸಿಕೆ ನೀಡಲಾಗಿದೆ. ಕಂದಾಯ, ಗ್ರಾಮೀಣಾಭಿವೃದ್ಧಿ, ಗೃಹ, ನಗರಾಭಿವೃದ್ಧಿ ಇಲಾಖೆ ಸಿಬ್ಬಂದಿ ಸೇರಿದಂತೆ ಆರೋಗ್ಯ ಇಲಾಖೆಯಲ್ಲಿ 4 ಲಕ್ಷದ 22 ಸಾವಿರಜನರಿಗೆ ಕೊಟ್ಟಿದ್ದೇವೆ. ಮೊದಲ ಹಂತದ ಡೋಸ್ ಕೊಟ್ಟಿದ್ದೇವೆ. ನಾವು 8 ಲಕ್ಷ ಗುರಿಯನ್ನ ಇಟ್ಟುಕೊಂಡಿದ್ದೆವು. ಇದೇ 28 ರೊಳಗೆ ಗುರಿ ತಲುಪುವಂತೆ ಸೂಚನೆಯನ್ನು ಜಿಲ್ಲೆಯ ಎಲ್ಲ ಅಧಿಕಾರಿಗಳಿಗೆ ಕೊಟ್ಟಿದ್ದೇವೆ. ಲಸಿಕೆಯನ್ನ ಕೊಡುವ ಗುರಿ ಮುಟ್ಟುವಂತೆ ತಿಳಿಸಿದ್ದೇವೆ. ನಾಳೆ, ನಾಡಿದ್ದು ಫ್ರಂಟ್ ಲೈನ್ ವರ್ಕರ್ಸ್ ಪಡೆದುಕೊಳ್ಳಬೇಕು ಎಂದರು.
ರಾಜ್ಯದಲ್ಲಿ ಸಭೆ, ಸಮಾರಂಭ, ಸಮಾವೇಶದಲ್ಲಿ ಹೆಚ್ಚಿನ ಜನ ಸೇರುತ್ತಿದ್ದಾರೆ. ಹೀಗಾಗಿ ಮುಂಜಾಗ್ರತೆ ತೆಗೆದುಕೊಳ್ಳಲೇಬೇಕು. ಮಾರ್ಗಸೂಚಿಗೆ ವಿರುದ್ಧವಾಗಿ ನಡೆಯುತ್ತಿವೆ. ಮದುವೆ ಸಮಾರಂಭಗಳು ಹಾಗೆ ನಡೆಯುತ್ತಿವೆ. ಮಾಸ್ಕ್ ಹಾಕುವುದನ್ನೇ ಬಿಟ್ಟಿದ್ದಾರೆ. ಜನ, ವಿಐಪಿ, ವಿವಿಐಪಿಗಳು ಹಾಕ್ತಿಲ್ಲ. ಇದು ನಿಜಕ್ಕೂ ಅಪಾಯಕಾರಿ. ಹೀಗಾಗಿ ಮದುವೆ ಸಮಾರಂಭಕ್ಕೆ ಮಾರ್ಷಲ್ ಹಾಕ್ತೇವೆ. ಇಂದು ಅಧಿಕೃತ ಸುತ್ತೋಲೆ ಹೊರಡಿಸ್ತೇವೆ ಎಂದು ತಿಳಿಸಿದರು.
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ ಕೊಲ್ಲೂರು: ಕೇರಳಂ…
ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ ಪಡುಬಿದ್ರಿ: ಪಡುಬಿದ್ರಿಯ ದೀನ್ಸ್ಟ್ರೀಟ್ ನಿವಾಸಿ, ದಿ. ಇದಿನಬ್ಬ ಅವರ ಪುತ್ರ ರಿಯಾಝ್…
ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ…
ಉಡುಪಿ : ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ನೀಡಿ ಅರ್ಜಿಗಳನ್ನು ವಿತರಿಸಲು ಮತ್ತು ಸಂಗ್ರಹಿಸಲು ಸೂಚಿಸಲಾಗಿದೆ : ಡಿಸಿ ಸ್ವರೂಪ…
ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ಬಸ್ ಕಂಡಕ್ಟರ್ ಬಂಧನ ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ…
ಮಂಗಳೂರಿನಲ್ಲಿ ತೈಲ ಸಂಗ್ರಹಾಗಾರ ಸ್ಥಾಪನೆಗೆ ONGC ಅನುಮೋದನೆ ನವದೆಹಲಿ: ಇರಾನ್-ಅಮೆರಿಕ ಸಂಘರ್ಷದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿರುವ ಹೊತ್ತಿನಲ್ಲೇ,…