Featured

ರಾಜ್ಯಾದ್ಯಂತ ನಾಳೆಯಿಂದ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭ – vishwanews24

ರಾಜ್ಯಾದ್ಯಂತ ನಾಳೆಯಿಂದ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭ

ಬೆಂಗಳೂರು : ನಾಳೆಯಿಂದ ನವರಾತ್ರಿ ಶುರುವಾಗುತ್ತಿದೆ. ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ಸದ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20ರ ತನಕ ದಸರಾ ರಜೆ ಘೋಷಿಸಿದ್ದು  ನಾಳೆಯಿಂದಲೇ ಮಕ್ಕಳಿಗೆ ದಸರಾ ರಜೆ ಆರಂಭವಾಗಲಿದೆ. ಒಟ್ಟು 17 ದಿನ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಇರಲಿದೆ.

2024-25ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅಕ್ಟೋಬರ್ 3 ರಿಂದ 20 ರವರೆಗೆ ಇರಲಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಇದ್ದು, ಕಾರ್ಯಕ್ರಮದ ನಂತರ ರಜೆಗಳು ಆರಂಭವಾಗಲಿದೆ. ಇನ್ನು ದಸರಾ ರಜೆ ಬಳಿಕ ಅಕ್ಟೋಬ‌ರ್ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ಶಾಲೆ ನಡೆಯಲಿದೆ. 2024- 2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.

ಕರ್ನಾಟಕದಲ್ಲಿ 2024-25ರ ಶೈಕ್ಷಣಿಕ ವರ್ಷವು ಮೇ 29ರಿಂದ ಪ್ರಾರಂಭವಾಗಿದ್ದು, ಮೊದಲ ಅವಧಿಯು ಅಕ್ಟೋಬರ್​​ 2ರ ತನಕ ಇತ್ತು. ಸೆಪ್ಟೆಂಬರ್​ 23ರಿಂದ ಮಧ್ಯಂತರ ಪರೀಕ್ಷೆಗಳು ಶುರುವಾಗಿ ಸೆಪ್ಟೆಂಬರ್​ 30ರ ತನಕ ನಡೆದಿವೆ. ಆ ಬಳಿಕ ಸರ್ಕಾರಿ ಮತ್ತು ಖಾಸಗಿ ಶಾಲಾ ಮಕ್ಕಳಿಗೆ ದಸರಾ ರಜೆ ಪ್ರಕ್ರಿಯೆ ಶುರುವಾಗಿದೆ. ಅಕ್ಟೋಬರ್​ 2ರಂದು ಎಲ್ಲಾ ಶಾಲೆಗಳಲ್ಲೂ ಗಾಂಧಿ ಜಯಂತಿ ಆಚರಿಸಿದ ಮರು ದಿನದಿಂದ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗಿದೆ. ಅಕ್ಟೋಬರ್​ ತಿಂಗಳಲ್ಲಿ ಕೇವಲ 11 ದಿನಗಳು ತರಗತಿಗಳು ನಡೆಯಲಿವೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

15 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

15 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

15 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

15 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

16 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

16 hours ago