ರಾಜ್ಯಾಧ್ಯಂತ ನಾಳೆಯಿಂದ ‘ಸರ್ಕಾರಿ ನೌಕರ’ರ ಮುಷ್ಕರ: ‘ಸರ್ಕಾರಿ ಸೇವೆ’ಯಲ್ಲಿ ಭಾರೀ ವ್ಯತ್ಯಯ – Vishwanews24

Featured, ರಾಜ್ಯ ನ್ಯೂಸ್

ರಾಜ್ಯಾಧ್ಯಂತ ನಾಳೆಯಿಂದ ‘ಸರ್ಕಾರಿ ನೌಕರ’ರ ಮುಷ್ಕರ: ‘ಸರ್ಕಾರಿ ಸೇವೆ’ಯಲ್ಲಿ ಭಾರೀ ವ್ಯತ್ಯಯ

ಬೆಂಗಳೂರು: ನಾಳೆಯಿಂದ 7ನೇ ವೇತನ ಆಯೋಗದ ಶಿಫಾರಸ್ಸುಗಳ ಜಾರಿ, ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೇ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿಗೊಳಿಸುವಂತೆ ಒತ್ತಾಯಿಸಿ, ರಾಜ್ಯ ಸರ್ಕಾರಿ ನೌಕರರು  ಮುಷ್ಕರ ನಡೆಸಲಿದ್ದಾರೆ.

ಈ ಹಿನ್ನಲೆಯಲ್ಲಿ ನಾಳೆಯಿಂದ ರಾಜ್ಯಾಧ್ಯಂತ ಸರ್ಕಾರಿ ಸೇವೆಯಲ್ಲಿ  ಭಾರೀ ವ್ಯತ್ತಯ ಉಂಟಾಗೋ ಸಾಧ್ಯತೆ ಇದೆ.

ಕಾಪು : ಮಾ. 21 ಮತ್ತು 22 ರಂದು ಇತಿಹಾಸ ಪ್ರಸಿದ್ಧ ಕಾಪು ಸುಗ್ಗಿ ಮಾರಿಪೂಜೆ – ಮೂರು ಮಾರಿಗುಡಿಯ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ  – Vishwanews24

ನಾಳೆ 7ನೇ ವೇತನ ಆಯೋಗದ ಶಿಫಾರಸ್ಸು ಜಾರಿ, ಎನ್ ಪಿಎಸ್ ( NPS ) ರದ್ದುಗೊಳಿಸಿ ಹಳೇ ಪಿಂಚಣಿ ವ್ಯವಸ್ಥೆ ( OPS ) ಜಾರಿಗೊಳಿಸಿ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿಯ ಮುಷ್ಕರ ನಡೆಸಲಿದ್ದಾರೆ. ಈ ಮುಷ್ಕರದಲ್ಲಿ ಸಚಿವಾಲಯ ಸೇರಿ ಗ್ರಾಮ ಪಂಚಾಯ್ತಿಯಿಂದ ಹಿಡಿದು, ವಿಧಾನಸೌಧದವರೆಗಿನ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರಾಗಲಿದ್ದಾರೆ. ಈ ಹಿನ್ನಲೆಯಲ್ಲಿ ಸರ್ಕಾರಿ ಸೇವೆಗಳಲ್ಲಿ ವ್ಯತ್ಯ ಸಾಧ್ಯತೆ ಇದೆ.

ಸರ್ಕಾರಿ ನೌಕರರ ಸಂಘಕ್ಕೆ ಮುಷ್ಕರ ಕೈಬಿಡುವಂತೆ ಸರ್ಕಾರ ಮನವಿ ಮಾಡಿದ್ದರೂ, ತಮ್ಮ ಹೋರಾಟವನ್ನು ಕೈಬಿಡೋದಿಲ್ಲ ಎಂಬುದಾಗಿ ನೌಕರರ ಸಂಘವು ತಿಳಿಸಿದೆ. ಸರ್ಕಾರಿ ನೌಕರರ ಸಂಘದ ಪ್ರತಿಭಟನೆ ರಾಜ್ಯ ರಸ್ತೆ ಸಾರಿಗೆ ನೌಕರರಿಂದಲೂ ಸಾಥ್ ನೀಡಲಾಗಿದೆ. ಅಲ್ಲದೇ ಆರೋಗ್ಯ ಇಲಾಖೆಯ ನೌಕರರು ಬೆಂಬಲ ನೀಡಿದ್ದಾರೆ. ಹೀಗಾಗಿ ರಾಜ್ಯಾಧ್ಯಂತ ಆರೋಗ್ಯ ಸೇವೆಯಲ್ಲಿ ತೀವ್ರ ವ್ಯತ್ಯಯವಾಗುವ ಸಾಧ್ಯತೆಗಳಿವೆ.

ಸುರತ್ಕಲ್: ಮಾದಕ ವ್ಯಸನಿ ದುಷ್ಕರ್ಮಿಗಳಿಂದ ತಲವಾರು ದಾಳಿ ಪ್ರಕರಣ :  ಮೂವರ ಬಂಧನ – Vishwanews24

 

Leave a Reply