ಬೆಂಗಳೂರು: ನಾಳೆಯಿಂದ 7ನೇ ವೇತನ ಆಯೋಗದ ಶಿಫಾರಸ್ಸುಗಳ ಜಾರಿ, ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೇ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿಗೊಳಿಸುವಂತೆ ಒತ್ತಾಯಿಸಿ, ರಾಜ್ಯ ಸರ್ಕಾರಿ ನೌಕರರು ಮುಷ್ಕರ ನಡೆಸಲಿದ್ದಾರೆ.
ಈ ಹಿನ್ನಲೆಯಲ್ಲಿ ನಾಳೆಯಿಂದ ರಾಜ್ಯಾಧ್ಯಂತ ಸರ್ಕಾರಿ ಸೇವೆಯಲ್ಲಿ ಭಾರೀ ವ್ಯತ್ತಯ ಉಂಟಾಗೋ ಸಾಧ್ಯತೆ ಇದೆ.
ನಾಳೆ 7ನೇ ವೇತನ ಆಯೋಗದ ಶಿಫಾರಸ್ಸು ಜಾರಿ, ಎನ್ ಪಿಎಸ್ ( NPS ) ರದ್ದುಗೊಳಿಸಿ ಹಳೇ ಪಿಂಚಣಿ ವ್ಯವಸ್ಥೆ ( OPS ) ಜಾರಿಗೊಳಿಸಿ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿಯ ಮುಷ್ಕರ ನಡೆಸಲಿದ್ದಾರೆ. ಈ ಮುಷ್ಕರದಲ್ಲಿ ಸಚಿವಾಲಯ ಸೇರಿ ಗ್ರಾಮ ಪಂಚಾಯ್ತಿಯಿಂದ ಹಿಡಿದು, ವಿಧಾನಸೌಧದವರೆಗಿನ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರಾಗಲಿದ್ದಾರೆ. ಈ ಹಿನ್ನಲೆಯಲ್ಲಿ ಸರ್ಕಾರಿ ಸೇವೆಗಳಲ್ಲಿ ವ್ಯತ್ಯ ಸಾಧ್ಯತೆ ಇದೆ.
ಸರ್ಕಾರಿ ನೌಕರರ ಸಂಘಕ್ಕೆ ಮುಷ್ಕರ ಕೈಬಿಡುವಂತೆ ಸರ್ಕಾರ ಮನವಿ ಮಾಡಿದ್ದರೂ, ತಮ್ಮ ಹೋರಾಟವನ್ನು ಕೈಬಿಡೋದಿಲ್ಲ ಎಂಬುದಾಗಿ ನೌಕರರ ಸಂಘವು ತಿಳಿಸಿದೆ. ಸರ್ಕಾರಿ ನೌಕರರ ಸಂಘದ ಪ್ರತಿಭಟನೆ ರಾಜ್ಯ ರಸ್ತೆ ಸಾರಿಗೆ ನೌಕರರಿಂದಲೂ ಸಾಥ್ ನೀಡಲಾಗಿದೆ. ಅಲ್ಲದೇ ಆರೋಗ್ಯ ಇಲಾಖೆಯ ನೌಕರರು ಬೆಂಬಲ ನೀಡಿದ್ದಾರೆ. ಹೀಗಾಗಿ ರಾಜ್ಯಾಧ್ಯಂತ ಆರೋಗ್ಯ ಸೇವೆಯಲ್ಲಿ ತೀವ್ರ ವ್ಯತ್ಯಯವಾಗುವ ಸಾಧ್ಯತೆಗಳಿವೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…