ಬೆಂಗಳೂರು: ಹೈಕಮಾಂಡ್ ನನ್ನನ್ನು ಪರಿಗಣಿಸಿದ್ರೆ ರಾಜ್ಯಾಧ್ಯಕ್ಷ ಆಗೋಕೆ ನಾನು ಸಿದ್ಧ ಎಂದು ಯತ್ನಾಳ್ ಟೀಂನ ಮಾಜಿ ಸಚಿವ ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷ ಸ್ಥಾನದ ಆಸೆ ಹೊರಹಾಕಿದ್ದಾರೆ.
ಬೆಂಗಳೂರಿನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತಾಡಿದರು. ಈ ವೇಳೆ, ಬಂಗಾರಪ್ಪ ಮಗ ಆಗಿದ್ದಕ್ಕೆ ನನಗೆ ಅಧ್ಯಕ್ಷ ಸ್ಥಾನ ಕೊಡ್ತಾರೆ ಅಂದರೆ ಯಡಿಯೂರಪ್ಪ ಮಗ ಅಂತ ವಿಜಯೇಂದ್ರಗೆ ಕೊಟ್ಟ ಹಾಗೇ ಆಗುತ್ತದೆ. ದೊಡ್ಡವರ ಮಕ್ಕಳಾಗಿ ಹುಟ್ಟಿದ ಮಾತ್ರಕ್ಕೆ ನಾವು ದೊಡ್ಡವರಾಗಲ್ಲ. ಕಲಿಬೇಕು, ಸಂಯಮ ಬೇಕು, ಜನ ಸಾಮಾನ್ಯರ ಜೊತೆ ಇರಬೇಕು. ಎಲ್ಲರ ಅಭಿಪ್ರಾಯ ಕೇಳುವ ತಾಳ್ಮೆ ಇರಬೇಕು. ಆದರೆ ಈಗ ಅದು ಆಗಿಲ್ಲ ಅನ್ನೋದು ನಮ್ಮ ವಾದ ಎಂದು ವಿಜಯೇಂದ್ರ ವಿರುದ್ಧ ಕಿಡಿಕಾರಿದ್ದಾರೆ.
ಬಿಜೆಪಿಯಲ್ಲಿ ಹಿಂದುಳಿದ ವರ್ಗಗಳಿಗೆ ಸ್ವಲ್ಪ ಅವಕಾಶದಲ್ಲಿ ಹಿಂದಿದೆ. ಇದು ಕಾಂಗ್ರೆಸ್ಗೆ ಅನುಕೂಲ ಆಗಿದೆ .ಹಿಂದುಳಿದ ಮತ್ತು SC-STಗೆ ಅವಕಾಶ ಕೊಡಬೇಕು. ಕುಮಾರ್ ಬಂಗಾರಪ್ಪ ಅಂತ ಅಲ್ಲ ಯಾರೇ ಹಿಂದುಳಿದ ವರ್ಗ ಅಥವಾ SC-STಗೆ ಕೊಟ್ಟರೆ ಅನುಕೂಲ ಆಗುತ್ತದೆ ಎಂದಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…