ರಾಮನಗರ: ರಾಜ್ಯದಲ್ಲಿ 2023ರಲ್ಲಿ ನಡೆಯುವ ವಿಧಾನಸಭಾ ಚುನಾವಣೆ ನನ್ನ ಜೀವನದ ಕೊನೆಯ ಹೋರಾಟ. ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವಂತೆ ಪಕ್ಷ ಸಂಘಟಿಸಲು ಸಂಕ್ರಾಂತಿ ಮರುದಿನ ರಾಮನಗರ ಕ್ಷೇತ್ರದಿಂದಲೇ ಚಾಲನೆ ನೀಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ನಗರದ ವಿಶ್ವನಾಥ ಕಲ್ಯಾಣ ಮಂಟಪದಲ್ಲಿ ರಾಮನಗರ ಕ್ಷೇತ್ರ ವ್ಯಾಪ್ತಿಯ ಗ್ರಾಪಂ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ರಾಮನಗರ ನನಗೆ ರಾಜಕೀಯವಾಗಿ ಪುನರ್ ಜನ್ಮ ನೀಡಿದ ಕ್ಷೇತ್ರ. ಹೀಗಾಗಿ ಜಾಲಮಂಗಲದ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ನನ್ನಿಂದಾಗಿರುವ ಅಪಚಾರ ಮನ್ನಿಸುವಂತೆ ಕುಟುಂಬ ಸಮೇತಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹೊಸ ರಾಜಕೀಯ ಆರಂಭಿಸುತ್ತೇನೆ ಎಂದರು.
ಬದಲಾದ ರಾಜಕೀಯ ಸನ್ನಿವೇಶದಲ್ಲಿ ವಿಧಿಯಿಲ್ಲದೆ ಕಾಂಗ್ರೆಸ್ ಜತೆ ಕೈಜೋಡಿಸಿ ಮೈತ್ರಿ ಸರ್ಕಾರ ರಚಿಸಿದೆವು. ದೋಸ್ತಿ ಸರ್ಕಾರ ಅಧಿಕಾರಕ್ಕೆ ಬಂದ ಒಂದೇ ತಿಂಗಳಲ್ಲಿ ನಾನು ವೇದಿಕೆಯಲ್ಲಿ ಸಾರ್ವಜನಿಕವಾಗಿ ಕಣ್ಣೀರು ಹಾಕುವ ಸನ್ನಿವೇಶ ಬಂತು. ಬಹುಶಃ ರಾಜಕೀಯ ಇತಿಹಾಸದಲ್ಲಿ ಮುಖ್ಯಮಂತ್ರಿಯಾದ ಒಂದೇ ತಿಂಗಳಲ್ಲಿ ಕಣ್ಣೀರು ಹಾಕಿದವನು ನಾನೊಬ್ಬನೇ ಇರಬೇಕು. ಕಾಂಗ್ರೆಸ್ ಜತೆ ಕೈಜೋಡಿಸಿ ಮೈತ್ರಿ ಸರ್ಕಾರ ರಚಿಸಿದ್ದರಿಂದಾದ ತಪ್ಪಿನ ಅರಿವಾಗಿದೆ. ದೋಸ್ತಿ ಸರ್ಕಾರಕ್ಕೆ ಬಂಡೆ ರೀತಿ ಆಸರೆಯಾಗಿ ನಿಂತಿದ್ದೇವೆಂದು ಪರೋಪಕಾರ ಮಾಡಿದವರಂತೆ ಪ್ರಚಾರ ಪಡೆದವರೇ ನನ್ನ ಮೇಲೆ ಕಲ್ಲು ಚಪ್ಪಡಿ ಎಳೆದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು ಕುಮಾರಸ್ವಾಮಿ.
ಜೆಡಿಎಸ್ ಬಲಿಷ್ಠವಾಗಿದ್ದ ಕ್ಷೇತ್ರಗಳಲ್ಲೇ ಮೈತ್ರಿ ಸರ್ಕಾರದ ಅವಧಿ ದುರುಪಯೋಗ ಪಡಿಸಿಕೊಂಡ ಕಾಂಗ್ರೆಸ್ ಪ್ರಾಬಲ್ಯ ಕಂಡುಕೊಳ್ಳಲು ವೇದಿಕೆ ಸಿದ್ಧಪಡಿಸಿಕೊಂಡಿತು. ಇದೇ ಕಾರಣಕ್ಕೆ ಪಕ್ಷಕ್ಕೆ ಚುನಾವಣೆಗಳಲ್ಲಿ ಹಿನ್ನಡೆಯಾಗುತ್ತಿದೆ. ನಾವು ಮಾಡಿದ ಲೋಪಗಳಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ದೋಷಿಗಳಿಲ್ಲ. ನನ್ನಿಂದಾಗಿರುವ ತಪ್ಪಿನ ಆತ್ಮಾವಲೋಕನ ಮಾಡಿಕೊಳ್ಳುತ್ತಿದ್ದೇನೆ ಎಂದರು.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…