ಬೆಂಗಳೂರು: ಕೃಷಿ ಇಲಾಖೆಯ ನೂತನ ರಾಯಭಾರಿಯಾಗಿ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಲಾಗಿದೆ.
ಈ ಕುರಿತು ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ‘ಕೃಷಿ ಇಲಾಖೆಯು ರೈತರ ಹಿತಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಲು ಹಾಗೂ ಕೃಷಿಕರಲ್ಲಿ ಸ್ಪೂರ್ತಿ ತುಂಬಲು ಕನ್ನಡ ಚಲನಚಿತ್ರರಂಗದ ಖ್ಯಾತ ನಟರಾದ ಶ್ರೀ ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯಾಗಿ ನೇಮಿಸಬಹುದಾಗಿದೆಯೆಂದು ಹಾಗೂ ಸದರಿ ಅವರು ಯಾವುದೇ ಸಂಭಾವನೆ ಇಲ್ಲದೆ ಈ ಕೆಲಸವನ್ನು ನಿರ್ವಹಿಸುವುದಾಗಿ ಒಪ್ಪಿಕೊಂಡಿರುತ್ತಾರೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕರ್ನಾಟಕದಲ್ಲಿರುವುದು ಬಿ.ಎಸ್. ಯಡಿಯೂರಪ್ಪನವರ ಕುಟುಂಬದ ಸರ್ಕಾರ : ಹೆಚ್.ಡಿ. ಕುಮಾರಸ್ವಾಮಿ -Vishwanews24
ಈ ಹಿಂದೆ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರು ನಟ ದರ್ಶನ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು. ಈ ವೇಳೆ ನಟ ದರ್ಶನ್ ಜೊತೆ ಕೃಷಿ ಇಲಾಖೆಯ ರಾಯಭಾರಿ ವಿಚಾರದ ಕುರಿತು ಚರ್ಚಿಸಲು ಅವರನ್ನು ಒಪ್ಪಿಸಲು ಯಶಸ್ವಿಯಾಗಿದ್ದರು. ಅದರಂತೆ ನಟ ದರ್ಶನ್ ಈ ಕೆಲಸಕ್ಕ ಯಾವುದೇ ಸಂಭಾವನೆ ಪಡೆಯದಿರಲು ನಿರ್ಧರಿಸಿದ್ದರು. ಈ ಹಿನ್ನೆಲೆ ಇದೀಗ ದರ್ಶನ್ ಅವರನ್ನು ರಾಜ್ಯ ಕೃಷಿ ಇಲಾಖೆಗೆ ನೂತನ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ.
ಬ್ರಹ್ಮಾವರ : ಮಹಿಳೆಯ ಅನೈತಿಕ ಸಂಬಂಧದ ಬಗ್ಗೆ ಪ್ರಶ್ನಿಸಿದ್ದ ವ್ಯಕ್ತಿಯ ಹತ್ಯೆ ; ಓರ್ವನ ಬಂಧನ -Vishwanews24
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…