Featured

ರಾಜ್ಯ ಕೃಷಿ ಇಲಾಖೆಗೆ ನೂತನ ರಾಯಭಾರಿಯಾಗಿ ನಟ ದರ್ಶನ್‌ ಆಯ್ಕೆ -Vishwanews24

ರಾಜ್ಯ ಕೃಷಿ ಇಲಾಖೆಗೆ ನೂತನ ರಾಯಭಾರಿಯಾಗಿ ನಟ ದರ್ಶನ್‌ ಆಯ್ಕೆ -Vishwanews24

ಈ ಕೆಲಸಕ್ಕೆ ಯಾವುದೇ ಸಂಭಾವನೆ ಪಡೆಯದೆ ಇರಲು ನಟ ದರ್ಶನ್‌ ನಿರ್ಧಾರ..

ಬೆಂಗಳೂರು: ಕೃಷಿ ಇಲಾಖೆಯ ನೂತನ ರಾಯಭಾರಿಯಾಗಿ ಚಾಲೆಂಜಿಂಗ್ ಸ್ಟಾರ್‌ ನಟ ದರ್ಶನ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಲಾಗಿದೆ.

ಈ ಕುರಿತು ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ‘ಕೃಷಿ ಇಲಾಖೆಯು ರೈತರ ಹಿತಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಲು ಹಾಗೂ ಕೃಷಿಕರಲ್ಲಿ ಸ್ಪೂರ್ತಿ ತುಂಬಲು ಕನ್ನಡ ಚಲನಚಿತ್ರರಂಗದ ಖ್ಯಾತ ನಟರಾದ ಶ್ರೀ ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯಾಗಿ ನೇಮಿಸಬಹುದಾಗಿದೆಯೆಂದು ಹಾಗೂ ಸದರಿ ಅವರು ಯಾವುದೇ ಸಂಭಾವನೆ ಇಲ್ಲದೆ ಈ ಕೆಲಸವನ್ನು ನಿರ್ವಹಿಸುವುದಾಗಿ ಒಪ್ಪಿಕೊಂಡಿರುತ್ತಾರೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕದಲ್ಲಿರುವುದು ಬಿ.ಎಸ್. ಯಡಿಯೂರಪ್ಪನವರ ಕುಟುಂಬದ ಸರ್ಕಾರ : ಹೆಚ್.ಡಿ. ಕುಮಾರಸ್ವಾಮಿ -Vishwanews24

ಈ ಹಿಂದೆ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರು ನಟ ದರ್ಶನ್‌ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು. ಈ ವೇಳೆ ನಟ ದರ್ಶನ್‌ ಜೊತೆ ಕೃಷಿ ಇಲಾಖೆಯ ರಾಯಭಾರಿ ವಿಚಾರದ ಕುರಿತು ಚರ್ಚಿಸಲು ಅವರನ್ನು ಒಪ್ಪಿಸಲು ಯಶಸ್ವಿಯಾಗಿದ್ದರು. ಅದರಂತೆ ನಟ ದರ್ಶನ್‌ ಈ ಕೆಲಸಕ್ಕ ಯಾವುದೇ ಸಂಭಾವನೆ ಪಡೆಯದಿರಲು ನಿರ್ಧರಿಸಿದ್ದರು. ಈ ಹಿನ್ನೆಲೆ ಇದೀಗ ದರ್ಶನ್‌ ಅವರನ್ನು ರಾಜ್ಯ ಕೃಷಿ ಇಲಾಖೆಗೆ ನೂತನ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ.

ಬ್ರಹ್ಮಾವರ : ಮಹಿಳೆಯ ಅನೈತಿಕ ಸಂಬಂಧದ ಬಗ್ಗೆ ಪ್ರಶ್ನಿಸಿದ್ದ ವ್ಯಕ್ತಿಯ ಹತ್ಯೆ ; ಓರ್ವನ ಬಂಧನ -Vishwanews24

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

14 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

15 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

15 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

18 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

18 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

18 hours ago