Featured

ರಾಜ್ಯ ಪ್ರವಾಸದಲ್ಲಿ ಪ್ರಧಾನಿ – ಜ.19ರಂದು ಯಾದಗಿರಿ, ಕಲಬುರಗಿಗೆ ಆಗಮನ – Vishwanews24

ರಾಜ್ಯ ಪ್ರವಾಸದಲ್ಲಿ ಪ್ರಧಾನಿ – ಜ.19ರಂದು ಯಾದಗಿರಿ, ಕಲಬುರಗಿಗೆ ಆಗಮನ

ಯಾದಗಿರಿ: ಜನವರಿ 19ರಂದು ಪ್ರಧಾನಿ ನರೇಂದ್ರ ಮೋದಿಯವರು ಯಾದಗಿರಿ ಮತ್ತು ಕಲಬುರಗಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವೇಳಾಪಟ್ಟಿ ಇಲ್ಲಿದೆ.

ಪ್ರಧಾನಿ ನರೇಂದ್ರ ಮೋದಿ ಜ.19 ಬೆಳಗ್ಗೆ 11ಕ್ಕೆ ನವದೆಹಲಿಯಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ.

ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೆಕಲ್​ ಗ್ರಾಮದ ಹೆಲಿಪ್ಯಾಡ್​ಗೆ ತೆರಳಲಿದ್ದಾರೆ. ನಂತರ ಮಧ್ಯಾಹ್ನ 12 ಗಂಟೆಗೆ ಕೊಡೆಕಲ್​ ಗ್ರಾಮದಲ್ಲಿ ನಾರಾಯಣಪುರ ಎಡದಂಡೆ ಕಾಲುವೆ ಜಾಲದ ವಿಸ್ತರಣೆ ಮತ್ತು ನಾರಾಯಣಪುರ ಎಡದಂಡೆ ಕಾಲುವೆಯ ಆಧುನೀಕರಣ, ಸೂರತ್-ಚೆನ್ನೈ ಎಕ್ಸ್​​ಪ್ರೆಸ್ ವೇ ಪ್ಯಾಕೇಜ್-3 ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಇನ್ನು ಕೊಡೆಕಲ್​ ಗ್ರಾಮದಿಂದ ಮಧ್ಯಾಹ್ನ 01.05ಕ್ಕೆ ನಿರ್ಗಮಿಸಿ, 01.10 ಕ್ಕೆ ಕೊಡೆಕಲ್ ಹೆಲಿಪ್ಯಾಡ್​ನಿಂದ ಹೆಲಿಕಾಪ್ಟರ್ ಮೂಲಕ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಹೆಲಿಪ್ಯಾಡ್​ನಲ್ಲಿ ಮಧ್ಯಾಹ್ನ 2 ಗಂಟೆಗೆ ಬರಲಿದ್ದಾರೆ. ಮಳಖೇಡನಲ್ಲಿ ಮಧ್ಯಾಹ್ನ 02.15ಕ್ಕೆ ನಡೆಯುವ ಕಾರ್ಯಕ್ರಮ ಸ್ಥಳಕ್ಕೆ ಆಗಮಿಸಿ, ನೂತನವಾಗಿ ರಚಿಸಲಾಗಿರುವ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಮಳಖೇಡ ಕಾರ್ಯಕ್ರಮ ಸ್ಥಳದಿಂದ ನಿರ್ಗಮಿಸಿ, 03.05ಕ್ಕೆ ಹೆಲಿಕಾಪ್ಟರ್ ಮೂಲಕ ಕಲಬುರಗಿ ಏರ್​ಪೋರ್ಟ್​​ಗೆ ಹೋಗುತ್ತಾರೆ. ಅಲ್ಲಿಂದ 03.35ಕ್ಕೆ ಕಲಬುರಗಿ ಏರ್​ಪೋರ್ಟ್​​ನಿಂದ ದೆಹಲಿಗೆ ವಾಪಾಸ್‌ ಆಗಲಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

19 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

19 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago