Featured

ರಾಜ್ಯ ಬಜೆಟ್‌ನಲ್ಲಿ ರೂಪಾಯಿ ಚಿಹ್ನೆ ಬದಲಾಯಿಸಿದ ತಮಿಳುನಾಡು ಸರ್ಕಾರ – vishwanews24

ರಾಜ್ಯ ಬಜೆಟ್‌ನಲ್ಲಿ ರೂಪಾಯಿಯ ಅಧಿಕೃತ ಚಿಹ್ನೆ ‘₹’ ಕೈ ಬಿಟ್ಟ ತಮಿಳುನಾಡು ಸರ್ಕಾರ

ಚೆನ್ನೈ : ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ 2025-26 ರ ರಾಜ್ಯ ಬಜೆಟ್‌‌ನಲ್ಲಿ ರೂಪಾಯಿಯ ಅಧಿಕೃತ ಚಿಹ್ನೆ ‘₹’ ಕೈ ಬಿಟ್ಟಿದ್ದು ಬದಲಿಗೆ ‘ರುಬಾಯಿ’ (ತಮಿಳಿನಲ್ಲಿ ರೂಪಾಯಿ) ಯಿಂದ ‘ರು’ ಅನ್ನು ಆಯ್ಕೆ ಮಾಡಿಕೊಂಡು ಹೊಸ ಚರ್ಚೆಗೆ ವೇದಿಕೆಯಾಗಿದೆ.

ನಾಳೆ ರಾಜ್ಯ ವಿಧಾನಸಭೆಯಲ್ಲಿ ಮಂಡಿಸಲಾಗುವ ರಾಜ್ಯ ಬಜೆಟ್‌ನ ಲೋಗೋವನ್ನು ಅನ್ನು ಸ್ಟಾಲಿನ್ ತಮ್ಮ X ಖಾತೆಯಲ್ಲಿ ಹಂಚಿಕೊಂಡಿದ್ದು, ಸಮಾಜದ ಎಲ್ಲಾ ವರ್ಗಗಳಿಗೆ ಅನುಕೂಲವಾಗುವ, ತಮಿಳುನಾಡಿನ ವ್ಯಾಪಕ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳುವ ಬಜೆಟ್ ಎಂದು ಬರೆದುಕೊಂಡಿದ್ದಾರೆ.

ಹಿಂದಿನ ಎರಡು ಬಜೆಟ್‌ಗಳಲ್ಲಿ, ರಾಜ್ಯವು ತನ್ನ ಲೋಗೋಗಳಿಗಾಗಿ ರೂಪಾಯಿ ಚಿಹ್ನೆಯನ್ನು ಬಳಸಿತ್ತು. 2023-24ರ ಬಜೆಟ್‌ನಲ್ಲಿಯೂ ಸಹ ಈ ಚಿಹ್ನೆಯನ್ನು ಪ್ರಮುಖವಾಗಿ ತೋರಿಸಲಾಗಿತ್ತು, ಇದನ್ನು ಐಐಟಿ-ಗುವಾಹಟಿಯ ಪ್ರಾಧ್ಯಾಪಕರೊಬ್ಬರು ವಿನ್ಯಾಸಗೊಳಿಸಿದ್ದರು. ‘₹’ ಯಲ್ಲಿ ಹಿಂದಿಯ ‘ರಾ’ ಹೋಲಿಕೆ ಇರುವ ಹಿನ್ನೆಲೆಯಲ್ಲಿ ಬಳಸದಿರಲು ಸರ್ಕಾರ ನಿರ್ಧರಿಸಿದೆ. ರಾಷ್ಟ್ರೀಯ ಕರೆನ್ಸಿ ಚಿಹ್ನೆಯನ್ನು ರಾಜ್ಯವೊಂದು ತಿರಸ್ಕರಿಸಿರುವುದು ಇದೇ ಮೊದಲು.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ತ್ರಿಭಾಷಾ ಒತ್ತಾಯದ ಮೂಲಕ ‘ಹಿಂದಿ ಹೇರಿಕೆ’ ಕುರಿತು ಬಿಜೆಪಿ ನೇತೃತ್ವದ ಕೇಂದ್ರದೊಂದಿಗೆ ಆಡಳಿತಾರೂಢ ಡಿಎಂಕೆ ಹೋರಾಟದ ಮಧ್ಯೆ ಕರೆನ್ಸಿ ಚಿಹ್ನೆಯನ್ನು ಬದಲಾಯಿಸುವ ನಿರ್ಧಾರ ಬಂದಿದೆ.

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

1 day ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

1 day ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

1 day ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

1 day ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

1 day ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

1 day ago