ಬೆಂಗಳೂರು : ಕೋವಿಡ್ ನಂತರದ ದಿನಗಳಲ್ಲಿ ರಾಜ್ಯದ ಹಣಕಾಸು ವ್ಯವಸ್ಥೆಯನ್ನು ಸುಸ್ಥಿತಿಯಲ್ಲಿ ಹಿಡಿದಿಡುವ ಮೂಲಕ ಸುಮಾರು 402ಕೋಟಿ ರೂ. ರಾಜಸ್ವ ಹೆಚ್ಚಳದ ಬಜೆಟ್ ಮಂಡನೆ ಮಾಡುವ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯದ ಅಭಿವೃದ್ಧಿಗೆ ಪೂರಕವಾದ ಆಯವ್ಯಯ ಮಂಡಿಸಿದ್ದಾರೆ ಎಂದು ಇಂಧನ ಹಾಗೂ ಕನ್ನಡ ಸಂಸ್ಕ್ರತಿ ಸಚಿವ ವಿ ಸುನಿಲ್ ಕುಮಾರ್ ಹೇಳಿದ್ದಾರೆ.
ರಾಜಸ್ವ ವೆಚ್ಚ, ಬಂಡವಾಳ ವೆಚ್ಚ ಹಾಗೂ ಸಾಲ ಮರುಪಾವತಿ ಸೇರಿದಂತೆ ೩, ೦೯, ೧೮೨ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ದಾರೆ. ವಿತ್ತೀಯ ಹೊಣೆಗಾರಿಕೆ ಮಿತಿಯಲ್ಲೇ ರಾಜ ಸ್ವ ಹೆಚ್ಚಳದ ಬಜೆಟ್ ಮಂಡನೆ ಮೂಲಕ ಬೊಮ್ಮಾಯಿ ಸೈ ಎನಿಸಿಕೊಂಡಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯದ ರೈತ ಸಮುದಾಯಕ್ಕೆ ಈ ಬಾರಿಯ ಬಜೆಟ್ ನಲ್ಲಿ ವಿಶೇಷ ಕೊಡುಗೆ ನೀಡಲಾಗಿದೆ. ಸಹಕಾರ ಬ್ಯಾಂಕ್ ಗಳ ಮೂಲಕ ನೀಡಲಾಗುತ್ತಿದ್ದ ಶೂನ್ಯ ಬಡ್ಡಿ ಸಾಲ ಪ್ರಮಾಣವನ್ನು 3ರಿಂದ 5 ಲಕ್ಷ ರೂಗೆ ಹೆಚ್ಚಳಮಾಡಲಾಗಿದೆ. 30 ಲಕ್ಷ ರೈತರಿಗೆ ಇದರಿಂದ ಅನುಕೂಲವಾಗಲಿದೆ. 56 ಲಕ್ಷ ಸಣ್ಣ ಹಾಗೂ ಅತಿಸಣ್ಣ ರೈತ ಕುಟುಂಬಗಳಿಗೆ ವಿಮಾ ಯೋಜನೆ ಕಲ್ಪಿಸಿರುವುದು ಶ್ಲಾಘನೀಯ.
ಸ್ತ್ರೀಯರ ಸಬಲೀಕರಣಕ್ಕಾಗಿ ಒಂದು ಲಕ್ಷ ಮಹಿಳೆಯರಿಗೆ ಕೌಶಲ್ಯ ತರಬೇತಿ, ಮಹಿಳಾ ಕಾರ್ಮಿಕರಿಗೆ 500ರೂ. ಸಹಾಯ ಧನ, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಸಣ್ಣ ಮತ್ತು ಅತಿ ಸಣ್ಣ ಕುಟುಂಬಗಳಿಗೆ ಜೀವನ್ ಜ್ಯೋತಿ ವಿಮಾ ಯೋಜನೆ, ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಸೇರಿದಂತೆ ಜನ ಸಾಮಾನ್ಯರಿಗೆ ಹೊರೆಯಾಗದಂತೆ ಮುಖ್ಯಮಂತ್ರಿಗಳು ಯೋಜನೆ ರೂಪಿಸಿದ್ದಾರೆ.
ಇಂಧನ ಕ್ಷೇತ್ರದ ಸುಧಾರಣೆಗಾಗಿ ಗುರುಚರಣ್ ಸಮಿತಿ ವರದಿ ಅನುಷ್ಢಾನದ ಬಗ್ಗೆ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ಇಂಧನ ಕಂಪನಿಗಳಿಗೆವ 12,743 ಕೋಟಿ ರೂ.ಅನುದಾನ ನೀಡುವ ಭರವಸೆ ನೀಡಲಾಗಿರುವುದು ಶ್ಲಾಘನೀಯ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಬೊಮ್ಮಾಯಿ ಉದಾರ ಹೃದಯ ತೋರಿದ್ದಾರೆ ಎಂದು ಬಣ್ಣಿಸಿದ್ದಾರೆ.
ಮೀನುಗಾರರಿಗೆ ವಸತಿ ಸೌಲಭ್ಯ ಕಲ್ಪಿಸಲು ನಮ್ಮ ಸರ್ಕಾರ ಆದ್ಯತೆ ನೀಡಿದ್ದು, ಪ್ರಸಕ್ತ ಸಾಲಿನಲ್ಲಿ ಹತ್ತು ಸಾವಿರ ವಸತಿ ರಹಿತ ಮೀನುಗಾರರಿಗೆ ಸೂರು ಕಲ್ಪಿಸಲಾಗುತ್ತದೆ. ಮೀನುಗಾರಿಕಾ ದೋಣಿಗಳಿಗೆ ೨ ಲಕ್ಷ ಕಿ ಲೀಟರ್ ಡೀಸೆಲ್ ನೀಡಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಸರ್ಕಾರ 250 ಕೋಟಿ ರೂ. ವಿನಿಯೋಗಿಸಲಿದೆ. ಸೀಗಡಿ ರಫ್ತು ಪ್ರೋತ್ಸಾಹಿಸಲು ಸೀಗಡಿ ಕೃಷಿ ಕ್ಕಸ್ಟರ್ ಸ್ಥಾಪನೆಗೆ ಮುಂದಾಗಿರುವುದು ಸ್ವಾಗತಾರ್ಹ.
ಪಶ್ಚಿಮವಾಹಿನಿ ಎರಡನೇ ಹಂತದಲ್ಲಿ 378 ಕೋಟಿ ರೂ. ಮೊತ್ತದ ಕಾಮಗಾರಿ ಅನುಷ್ಠಾನಕ್ಕೆ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ಆಳಸಮುದ್ರ ಮೀನುಗಾರಿಕೆಯನ್ನು ಉತ್ತೇಜಿಸಲು 100 ಆಳ ಸಮುದ್ರ ಮೀನುಗಾರಿಕಾ ದೋಣಿಗಳಿಗೆ ಮತ್ಸ್ಯ ಸಿರಿ ಯೋಜನೆ ಸಂಯೋಜನೆ ಮಾಡಲು ಮುಂದಾಗಿರುವ ಮೂಲಕ ಮತ್ಸ್ಯೋದ್ಯಮಕ್ಕೆ ಆದ್ಯತೆ ನೀಡಲಾಗಿದೆ. ಒಟ್ಟಾರೆಯಾಗಿ ಇದು ಎಲ್ಲರನ್ನು ಒಳಗೊಳ್ಳುವ ಅಮೃತ ಕಾಲದ ಬಜೆಟ್ ಎಂದು ಬಣ್ಣಿಸಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್ನ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್ಗೆ…
ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…
ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್ ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…
ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…