Featured

ರಾಜ್ಯ ಬಜೆಟ್ ನಲ್ಲಿ ಕರಾವಳಿ ಮೀನುಗಾರಿಕೆ ಬಗ್ಗೆ ರಾಜ್ಯ ಸರ್ಕಾರದ ದಿವ್ಯ ನಿರ್ಲಕ್ಷ್ಯ : ಯಶ್ಪಾಲ್ ಸುವರ್ಣ – vishwanews24

ರಾಜ್ಯ ಬಜೆಟ್ ನಲ್ಲಿ ಕರಾವಳಿ ಮೀನುಗಾರಿಕೆ ಬಗ್ಗೆ ರಾಜ್ಯ ಸರ್ಕಾರದ ದಿವ್ಯ ನಿರ್ಲಕ್ಷ್ಯ ..

ಮೀನುಗಾರಿಕಾ ಬಂದರಿನ ಅಭಿವೃದ್ಧಿ ಕಾಮಗಾರಿಗಳಿಗೆ ಯಾವುದೇ ಅನುದಾನ ಮಂಜೂರು ಮಾಡಿಲ್ಲ: ಯಶ್ಪಾಲ್ ಸುವರ್ಣ

ಉಡುಪಿ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ಕರಾವಳಿ ಭಾಗದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡುತ್ತಿರುವ ಮೀನುಗಾರಿಕೆ ಅಭಿವೃದ್ಧಿಗೆ ಈ ಬಾರಿಯ ಬಜೆಟ್ ನಲ್ಲಿ ಯಾವುದೇ ಅನುದಾನ, ಯೋಜನೆಗಳನ್ನು ಘೋಷಣೆ ಮಾಡದೇ ತನ್ನ ದಿವ್ಯ ನಿರ್ಲಕ್ಷ್ಯವನ್ನು ಮುಂದುವರೆಸಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.

ಈ ಬಾರಿಯ ಬಜೆಟ್ ನಲ್ಲಿ ಕರಾವಳಿ ಭಾಗದ ಮೀನುಗಾರಿಕಾ ಬಂದರಿನ ಅಭಿವೃದ್ಧಿ ಕಾಮಗಾರಿಗಳಿಗೆ ಯಾವುದೇ ಅನುದಾನ ಮಂಜೂರು ಮಾಡಿಲ್ಲ, ಮೀನುಗಾರಿಕೆ ಮೂಲಕ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಲಕ್ಷಾಂತರ ಮಂದಿಗೆ ಉದ್ಯೋಗ ಕಲ್ಪಿಸಿ ಮೀನುಗಾರಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮೀನುಗಾರರ ಬೇಡಿಕೆಯಾದ ಡೀಸೆಲ್ ಸಬ್ಸಿಡಿ ಮಿತಿ ಹೆಚ್ಚಳ, ಮೀನುಗಾರಿಕೆ ಸಂಬಂಧಿತ ಕೈಗಾರಿಕೆಗಳಿಗೆ ಪ್ರೋತ್ಸಾಹ, ಬಂದರುಗಳ ಹೂಳು ತೆರವು, ಮೀನುಗಾರಿಕಾ ಚಟುವಟಿಕೆಗೆ ಶೂನ್ಯ ಬಡ್ಡಿದರದ ಸಾಲ ಯೋಜನೆ, ಮಹಿಳಾ ಮೀನುಗಾರರ ಸಾಲ ಮನ್ನಾ, ಕಡಲ್ಕೊರೆತ ಶಾಶ್ವತ ಪರಿಹಾರ,.ಮೀನುಗಾರಿಕೆ ರಸ್ತೆಗಳ ಅಭಿವೃದ್ಧಿ, ಮತ್ಯಾಶ್ರಯ ವಸತಿ ಯೋಜನೆಯ ಸಹಾಯಧನ 5 ಲಕ್ಷಕ್ಕೆ ಹೆಚ್ಚಳದಂತಹ ಯಾವುದೇ ಬೇಡಿಕೆಗಳಿಗೆ ಈ ಬಾರಿಯ ಬಜೆಟ್ ನಲ್ಲಿ ಕ್ರಮ ವಹಿಸಿಲ್ಲ.

ಇದನ್ನೂ ಓದಿ:

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಹಾಗೂ ಸಾಗರಮಾಲಾ ಯೋಜನೆ ಮೂಲಕ ರಾಜ್ಯದ ಮೀನುಗಾರಿಕಾ ಬಂದರು ಹಾಗೂ ಮೀನುಗಾರಿಕೆಯ ಸಮಗ್ರ ಅಭಿವೃದ್ಧಿಗೆ ವಿಪುಲ ಅವಕಾಶಗಳಿದ್ದರೂ ರಾಜ್ಯ ಸರ್ಕಾರ ಪೂರಕ ಸ್ಪಂದನೆ ನೀಡದೆ ಮೀನುಗಾರರ ಬಗ್ಗೆ ಅಸಡ್ಡೆ ಮುಂದುವರೆಸಿದೆ.

ಈ ಬಗ್ಗೆ ಮೀನುಗಾರರ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ಜಿಲ್ಲೆಯ ಕಾಂಗ್ರೆಸ್ ಮುಖಂಡರು ತುಟಿ ಬಿಚ್ಚುತ್ತಿಲ್ಲ, ಮಲ್ಪೆ ಬಂದರಿನಲ್ಲಿ ಮೀನುಗಾರರು ಹಗಲಿರುಳು ಶ್ರಮಿಸಿ ತಂದ ಮೀನುಗಳನ್ನು ಕದ್ದ ಕಳ್ಳರ ಪರವಾಗಿ ಪ್ರತಿಭಟನೆ ನಡೆಸುವ ಸಂಘಟನೆಯ ಮುಖಂಡರು ಯಾವುದೇ ಚಕಾರ ಎತ್ತುತ್ತಿಲ್ಲ.

ಕರಾವಳಿ ಮೀನುಗಾರರ ಬೇಡಿಕೆಯನ್ನು ಕಡೆಗಣಿಸಿ ತಾಳ್ಮೆ ಪರೀಕ್ಷಿಸುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ:

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

12 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

12 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

12 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

15 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

16 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

16 hours ago