Featured

ರಾಜ್ಯ ಬಜೆಟ್ ನಲ್ಲಿ ಕರಾವಳಿ ಮೀನುಗಾರಿಕೆ ಬಗ್ಗೆ ರಾಜ್ಯ ಸರ್ಕಾರದ ದಿವ್ಯ ನಿರ್ಲಕ್ಷ್ಯ : ಯಶ್ಪಾಲ್ ಸುವರ್ಣ – vishwanews24

ರಾಜ್ಯ ಬಜೆಟ್ ನಲ್ಲಿ ಕರಾವಳಿ ಮೀನುಗಾರಿಕೆ ಬಗ್ಗೆ ರಾಜ್ಯ ಸರ್ಕಾರದ ದಿವ್ಯ ನಿರ್ಲಕ್ಷ್ಯ ..

ಮೀನುಗಾರಿಕಾ ಬಂದರಿನ ಅಭಿವೃದ್ಧಿ ಕಾಮಗಾರಿಗಳಿಗೆ ಯಾವುದೇ ಅನುದಾನ ಮಂಜೂರು ಮಾಡಿಲ್ಲ: ಯಶ್ಪಾಲ್ ಸುವರ್ಣ

ಉಡುಪಿ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ಕರಾವಳಿ ಭಾಗದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡುತ್ತಿರುವ ಮೀನುಗಾರಿಕೆ ಅಭಿವೃದ್ಧಿಗೆ ಈ ಬಾರಿಯ ಬಜೆಟ್ ನಲ್ಲಿ ಯಾವುದೇ ಅನುದಾನ, ಯೋಜನೆಗಳನ್ನು ಘೋಷಣೆ ಮಾಡದೇ ತನ್ನ ದಿವ್ಯ ನಿರ್ಲಕ್ಷ್ಯವನ್ನು ಮುಂದುವರೆಸಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.

ಈ ಬಾರಿಯ ಬಜೆಟ್ ನಲ್ಲಿ ಕರಾವಳಿ ಭಾಗದ ಮೀನುಗಾರಿಕಾ ಬಂದರಿನ ಅಭಿವೃದ್ಧಿ ಕಾಮಗಾರಿಗಳಿಗೆ ಯಾವುದೇ ಅನುದಾನ ಮಂಜೂರು ಮಾಡಿಲ್ಲ, ಮೀನುಗಾರಿಕೆ ಮೂಲಕ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಲಕ್ಷಾಂತರ ಮಂದಿಗೆ ಉದ್ಯೋಗ ಕಲ್ಪಿಸಿ ಮೀನುಗಾರಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮೀನುಗಾರರ ಬೇಡಿಕೆಯಾದ ಡೀಸೆಲ್ ಸಬ್ಸಿಡಿ ಮಿತಿ ಹೆಚ್ಚಳ, ಮೀನುಗಾರಿಕೆ ಸಂಬಂಧಿತ ಕೈಗಾರಿಕೆಗಳಿಗೆ ಪ್ರೋತ್ಸಾಹ, ಬಂದರುಗಳ ಹೂಳು ತೆರವು, ಮೀನುಗಾರಿಕಾ ಚಟುವಟಿಕೆಗೆ ಶೂನ್ಯ ಬಡ್ಡಿದರದ ಸಾಲ ಯೋಜನೆ, ಮಹಿಳಾ ಮೀನುಗಾರರ ಸಾಲ ಮನ್ನಾ, ಕಡಲ್ಕೊರೆತ ಶಾಶ್ವತ ಪರಿಹಾರ,.ಮೀನುಗಾರಿಕೆ ರಸ್ತೆಗಳ ಅಭಿವೃದ್ಧಿ, ಮತ್ಯಾಶ್ರಯ ವಸತಿ ಯೋಜನೆಯ ಸಹಾಯಧನ 5 ಲಕ್ಷಕ್ಕೆ ಹೆಚ್ಚಳದಂತಹ ಯಾವುದೇ ಬೇಡಿಕೆಗಳಿಗೆ ಈ ಬಾರಿಯ ಬಜೆಟ್ ನಲ್ಲಿ ಕ್ರಮ ವಹಿಸಿಲ್ಲ.

ಇದನ್ನೂ ಓದಿ:

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಹಾಗೂ ಸಾಗರಮಾಲಾ ಯೋಜನೆ ಮೂಲಕ ರಾಜ್ಯದ ಮೀನುಗಾರಿಕಾ ಬಂದರು ಹಾಗೂ ಮೀನುಗಾರಿಕೆಯ ಸಮಗ್ರ ಅಭಿವೃದ್ಧಿಗೆ ವಿಪುಲ ಅವಕಾಶಗಳಿದ್ದರೂ ರಾಜ್ಯ ಸರ್ಕಾರ ಪೂರಕ ಸ್ಪಂದನೆ ನೀಡದೆ ಮೀನುಗಾರರ ಬಗ್ಗೆ ಅಸಡ್ಡೆ ಮುಂದುವರೆಸಿದೆ.

ಈ ಬಗ್ಗೆ ಮೀನುಗಾರರ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ಜಿಲ್ಲೆಯ ಕಾಂಗ್ರೆಸ್ ಮುಖಂಡರು ತುಟಿ ಬಿಚ್ಚುತ್ತಿಲ್ಲ, ಮಲ್ಪೆ ಬಂದರಿನಲ್ಲಿ ಮೀನುಗಾರರು ಹಗಲಿರುಳು ಶ್ರಮಿಸಿ ತಂದ ಮೀನುಗಳನ್ನು ಕದ್ದ ಕಳ್ಳರ ಪರವಾಗಿ ಪ್ರತಿಭಟನೆ ನಡೆಸುವ ಸಂಘಟನೆಯ ಮುಖಂಡರು ಯಾವುದೇ ಚಕಾರ ಎತ್ತುತ್ತಿಲ್ಲ.

ಕರಾವಳಿ ಮೀನುಗಾರರ ಬೇಡಿಕೆಯನ್ನು ಕಡೆಗಣಿಸಿ ತಾಳ್ಮೆ ಪರೀಕ್ಷಿಸುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ:

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

20 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

21 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

21 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

23 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

23 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

23 hours ago