ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಬಜೆಟ್ ಅನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಿದರು. ಇದು ಅವರು ಮಂಡಿಸುತ್ತಿರುವ ದಾಖಲೆಯ 17ನೇ ಆಯವ್ಯಯವಾಗಿದ್ದು, ಈ ಬಾರಿಯ ಒಟ್ಟು ಬಜೆಟ್ ಗಾತ್ರ 4.48 ಲಕ್ಷ ಕೋಟಿ ರೂ.ಗಳಾಗಿದೆ.
ಮೀನುಗಾರರಿಗೆ ಉಚಿತವಾಗಿ ನೀಡುವ ಮೀನುಗಾರಿಕೆ ಸಲಕರಣೆ ಕಿಟ್ ಮೌಲ್ಯದ ದರವನ್ನು 10,000 ರೂ.ಗಳಿಂದ 20,000 ರೂ.ಗಳಿಗೆ ಹೆಚ್ಚಿಸಿ ಮೀನುಗಾರಿಕೆ ಚಟುವಟಿಕೆಗಳನ್ನು ಉತ್ತೇಜಿಸಲಾಗುವುದು.
ಜೈವಿಕ ತಂತ್ರಜ್ಞಾನದ ಉದ್ಯಮಗಳು, ನವೀನ ತಂತ್ರಜ್ಞಾನದ ಅಭಿವೃದ್ಧಿ ಮತ್ತು ಸಮುದ್ರ ಕೃಷಿಯನ್ನು ಪ್ರೋತ್ಸಾಹಿಸಲು ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ Centre of Excellence ಸ್ಥಾಪಿಸಲಾಗುವುದು.
ಇದನ್ನೂ ಓದಿ:
ಮೀನು ಆಹಾರದ ಸೇವನೆಯನ್ನು ಉತ್ತೇಜಿಸುವ ಹಾಗೂ ಸಾರ್ವಜನಿಕರಿಗೆ ಸ್ವಚ್ಛ ಮತ್ತು ಗುಣಮಟ್ಟದ ಮೀನು ಉತ್ಪನ್ನಗಳು ಲಭ್ಯವಾಗುವಂತೆ ಮಾಡಲು ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಮತ್ತು ಚಿಕ್ಕಮಗಳೂರಿನಲ್ಲಿ ಮತ್ಸ್ಯದರ್ಶಿನಿಗಳನ್ನು ಸ್ಥಾಪಿಸಲಾಗುವುದು.
ಮೀನು ಮಾರಾಟ ಮಾಡಲು ಸುಸಜ್ಜಿತ ಮೀನು ಮಾರುಕಟ್ಟೆಗಳ ಅವಶ್ಯಕತೆ ಇರುವುದರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮೀನು ಮಾರುಕಟ್ಟೆಯನ್ನು ನಿರ್ಮಿಸಲಾಗುವುದು.
ರಾಜ್ಯದಲ್ಲಿ ಮೀನುಗಾರಿಕೆ ಕೊಂಡಿ ರಸ್ತೆಗಳ ನಿರ್ವಹಣೆಗಾಗಿ 20 ಕೋಟಿ ರೂ.ಗಳನ್ನು ಒದಗಿಸಲಾಗುವುದು.
ಒಳನಾಡು ಮೀನುಗಾರಿಕೆಯು ಗ್ರಾಮೀಣ ಜೀವನೋಪಾಯ ಮತ್ತು ಆಹಾರ ಭದ್ರತೆಗೆ ಮಹತ್ವವಾಗಿದೆ. ಮೀನುಗಾರಿಕೆಯಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ನದಿ, ಕೆರೆ, ಕೃಷಿ ಹೊಂಡ ಹಾಗೂ ಜಲಾಶಯಗಳಲ್ಲಿ ಮೀನು ಉತ್ಪಾದನೆ ಹೆಚ್ಚಿಸಲು ಮೀನುಗಾರರಿಗೆ ತರಬೇತಿ ನೀಡಿ ಸ್ಥಿರ ಆದಾಯ ಗಳಿಕೆಗೆ ಅವಕಾಶ ಕಲ್ಪಿಸಲಾಗುವುದು.
ಇದನ್ನೂ ಓದಿ:
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…