Featured

ರಾಜ್ಯ ಬಿಜೆಪಿಯಿಂದ ನಾಳೆಯಿಂದ ಮೂರು ದಿನ ಗ್ರಾಮ ಚಲೋ ಅಭಿಯಾನ : ಬಿ.ವೈ. ವಿಜಯೇಂದ್ರ – Vishwanews24

ರಾಜ್ಯ ಬಿಜೆಪಿಯಿಂದ ನಾಳೆಯಿಂದ ಮೂರು ದಿನ ಗ್ರಾಮ ಚಲೋ ಅಭಿಯಾನ : ಬಿ.ವೈ. ವಿಜಯೇಂದ್ರ

ಬೆಂಗಳೂರು: ರಾಜ್ಯ ಬಿಜೆಪಿಯಿಂದ ನಾಳೆಯಿಂದ ಮೂರು ದಿನ ಗ್ರಾಮ ಚಲೋ ಅಭಿಯಾನ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ಹೆಚ್. ಗೊಲ್ಲಹಳ್ಳಿ ಗ್ರಾಮದಲ್ಲಿ ‘ಗ್ರಾಮ ಚಲೋ’ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾಜೀ ಮತ್ತು ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರ ಅಪೇಕ್ಷೆಯಂತೆ ‘ಗ್ರಾಮ ಚಲೋ’ ಅಭಿಯಾನಕ್ಕೆ ಚಾಲನೆ ನೀಡಿದ್ದೇವೆ. ರಾಜ್ಯದಲ್ಲಿ 28 ಸಾವಿರಕ್ಕೂ ಹೆಚ್ಚು ಹಳ್ಳಿಗಳು, 19 ಸಾವಿರ ನಗರ ಬೂತ್‍ಗಳಲ್ಲಿ ಒಟ್ಟಾರೆಯಾಗಿ 42 ಸಾವಿರ ಕಾರ್ಯಕರ್ತರು ಮೂರು ದಿನಗಳ ಕಾಲ ನಿರಂತರವಾಗಿ ಈ ಅಭಿಯಾನದಲ್ಲಿ ಭಾಗವಹಿಸುತ್ತಾರೆ ಎಂದು ವಿವರಿಸಿದರು.

ಇದನ್ನೂ ಓದಿ:

2047ನೇ ಇಸವಿಗೆ ಭಾರತವು ‘ವಿಕಸಿತ ಭಾರತ’ವಾಗಿ ಪರಿವರ್ತನೆ ಹೊಂದಬೇಕು; ಭಾರತವು ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪರಿವರ್ತನೆ ಕಾಣಬೇಕೆಂಬ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರ ಕನಸು ನನಸಾಗಲು ಗ್ರಾಮಗಳೂ ಅಭಿವೃದ್ಧಿ ಹೊಂದಬೇಕಿದೆ ಎಂದು ವಿಶ್ಲೇಷಿಸಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸವಲತ್ತುಗಳು ಸಿಗಬೇಕು. ಈ ನಿಟ್ಟಿನಲ್ಲಿ ‘ಗ್ರಾಮ ಚಲೋ’ ಅಭಿಯಾನವು ಉತ್ತಮ ಅಭಿಯಾನ ಆಗಲಿದೆ. ಈ ಅಭಿಯಾನದ ಮೂಲಕ ಪ್ರತಿ ಗ್ರಾಮ, ಪ್ರತಿ ಮನೆಗೂ ಬಿಜೆಪಿ ಕಾರ್ಯಕರ್ತರು ತಲುಪಲಿದ್ದು, ಕೇಂದ್ರ ಸರಕಾರವು ನರೇಂದ್ರ ಮೋದಿಜೀ ಅವರ ನೇತೃತ್ವದಲ್ಲಿ ಕೊಟ್ಟ ಜನಪರ ಯೋಜನೆಗಳನ್ನು ಮನೆಮನೆಗೆ ತಲುಪಿಸಲಾಗುತ್ತದೆ ಎಂದು ತಿಳಿಸಿದರು.

ಈ ಅಭಿಯಾನವು ಬಿಜೆಪಿಗೆ ದೊಡ್ಡ ಶಕ್ತಿಯಾಗಲಿದೆ. ‘ಮೋದಿ ಮತ್ತೊಮ್ಮೆ’ ಎಂಬ ವಿಚಾರವನ್ನು ಮುಂದಿಟ್ಟುಕೊಂಡು, ಮೋದಿಜೀ ಅವರು 3ನೇ ಬಾರಿಗೆ ಪ್ರಧಾನಿ ಆಗಬೇಕೆಂಬ ಆಶಯವನ್ನು ಹೊಂದಿ ಗೋಡೆ ಬರಹ ಬರೆಯಲಾಗುವುದು. ಕಳೆದ 10 ವರ್ಷಗಳಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳು ದೇಶದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕೆಂಬ ನಿಟ್ಟಿನಲ್ಲಿ ಈ ಅಭಿಯಾನ ನಡೆಯುತ್ತಿದೆ. ದೇಶದ ಪ್ರತಿಯೊಬ್ಬ ನಾಗರಿಕರೂ ಮೋದಿಜೀ ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಆಶಿಸುತ್ತಿದ್ದಾರೆ ಎಂದು ನುಡಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮದಲ್ಲಿ ಕೊಂಚ ಬದಲಾವಣೆ ಆಗಿದೆ. ಇದೇ 10 ರಂದು ರಾತ್ರಿ ನೇರವಾಗಿ ದೆಹಲಿಯಿಂದ ಮೈಸೂರಿಗೆ ತಲುಪುತ್ತಾರೆ. 11ರ ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿಯ ದರ್ಶನ ಪಡೆದುಕೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ. ಸಂಜೆ ಸುತ್ತೂರು ಜಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ. ಸಂಜೆ ಬಿಜೆಪಿ ಕಾರ್ಯಕರ್ತರ ಸಭೆಯೂ ನಡೆಯಲಿದೆ ಎಂದು ವಿಜಯೇಂದ್ರ ತಿಳಿಸಿದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

8 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago