Featured

ರಾಜ್ಯ ಬಿಜೆಪಿಯಿಂದ ಸಾಲು- ಸಾಲು ಕಾರ್ಯಕ್ರಮಗಳಿಗೆ ಪ್ರಧಾನಿಗೆ ಆಹ್ವಾನ : ಇನ್ನೆರಡು ತಿಂಗಳು ರಾಜ್ಯದಲ್ಲಿ ಮೋದಿ ಹವಾ – Vishwanews24

ರಾಜ್ಯ ಬಿಜೆಪಿಯಿಂದ ಸಾಲು- ಸಾಲು ಕಾರ್ಯಕ್ರಮಗಳಿಗೆ ಪ್ರಧಾನಿಗೆ ಆಹ್ವಾನ : ಇನ್ನೆರಡು ತಿಂಗಳು ರಾಜ್ಯದಲ್ಲಿ ಮೋದಿ ಹವಾ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ದಿನೇ ದಿನೇ ಕಾವು ಹೆಚ್ಚಾಗ್ತಿದೆ. ಮುಂದಿನ ಎರಡು ತಿಂಗಳು ರಾಜ್ಯ ಬಿಜೆಪಿಗೆ ಮಹತ್ವಪೂರ್ಣ ಕಾಲಾವಧಿಯಾಗಿದೆ.

ಪ್ರಧಾನಿ ಮೋದಿಯವರು ಮುಂದಿನ ಎರಡು ತಿಂಗಳು ಮಹತ್ವದ ರಾಜ್ಯ ಪ್ರವಾಸಗಳನ್ನು ಕೈಗೊಳ್ಳಲಿದ್ದಾರೆ. ಚುನಾವಣೆ ಘೋಷಣೆಗೆ ಮೊದಲು ಪ್ರಧಾನಿ  ಕೈಗೊಳ್ಳುತ್ತಿರುವ ಪ್ರವಾಸದಲ್ಲಿ ವಿಕಾಸದ ಕಾರ್ಯಸೂಚಿಯೇ ಮುನ್ನೆಲೆಯಲ್ಲಿರಲಿದೆ. ಅದಕ್ಕಾಗಿಯೇ ಸಾಲು- ಸಾಲು ಕಾರ್ಯಕ್ರಮಗಳಿಗೆ ಪ್ರಧಾನಿ ಅವರನ್ನೇ ಆಹ್ವಾನಿಸಲಾಗ್ತಿದೆ.

ಪ್ರಧಾನಿಯವರು ಯಾವಾಗ ಭೇಟಿ ನೀಡಿದರೂ ಅಭಿವೃದ್ಧಿಯ ಅಜೆಂಡಾ ಹಿಡಿದುಕೊಂಡೇ ಬರುತ್ತಾರೆ. ಮುಂದುವರಿದ ಭಾಗವಾಗಿ ಜನವರಿ, ಫೆಬ್ರವರಿಯಲ್ಲಿ ಮತ್ತಷ್ಟು ಯೋಜನೆಗಳಿಗೆ ಪ್ರಧಾನಿ ಹಸಿರು ನಿಶಾನೆ ತೋರಲಿದ್ದಾರೆ. ಈ ಅವಧಿಯಲ್ಲಿ ಡಬಲ್ ಇಂಜಿನ್ ಸರ್ಕಾರಗಳ ಹಲವು ಜನಪರ, ಜನಪ್ರಿಯ ಯೋಜನೆ, ಕಾಮಗಾರಿಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲು ಬಿಜೆಪಿ ಪ್ಲಾನ್ ಮಾಡಿಕೊಂಡಿದೆ.

ಇದೇ ತಿಂಗಳ ಜನವರಿ 19ರಂದು ಕಲಬುರಗಿಯಲ್ಲಿ ಪ್ರಧಾನಿ ನೇತೃತ್ವದಲ್ಲಿ ದೊಡ್ಡ ಸಮಾವೇಶ ನಡೆಯಲಿದೆ. ಲಂಬಾಣಿ ಸಮಾಜದ ಫಲಾನುಭವಿಗಳಿಗೆ ಪ್ರಧಾನಿ ಅವರು ಹಕ್ಕು ಪತ್ರ ವಿತರಿಸಲಿದ್ದಾರೆ. ಫೆಬ್ರವರಿ 12ರಂದು ಶಿವಮೊಗ್ಗದಲ್ಲಿ ನೂತನ ವಿಮಾನ ನಿಲ್ದಾಣವನ್ನು ಪ್ರಧಾನಿ ಅವರು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಾರ್ವಜನಿಕ ಸಭೆ ನಡೆಸಲು ಉದ್ದೇಶಿಸಲಾಗಿದೆ.

ಫೆಬ್ರವರಿ 13ರಂದು ಬೆಂಗಳೂರಿನಲ್ಲಿ ಏರೋ ಇಂಡಿಯಾ-2023ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆ. ಫೆಬ್ರವರಿ ಅಂತ್ಯದಲ್ಲಿ ಧಾರವಾಡ ಐಐಟಿ ಉದ್ಘಾಟನೆಗೂ ಪ್ರಧಾನಿ ಆಗಮಿಸಲಿದ್ದಾರೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಕಾರಿಡಾರ್ ಉದ್ಘಾಟನೆಗೂ ಪ್ರಧಾನಿ ಬರುತ್ತಿದ್ದು ದಿನಾಂಕ ಇನ್ನಷ್ಟೇ ನಿಗದಿಯಾಗಬೇಕಿದೆ.

ಅಭಿವೃದ್ಧಿ ಯೋಜನೆಗಳ ಬಳಿಕ ಮುಂದಿನ ಹಂತದಲ್ಲಿ ಪ್ರಚಾರ ಸಭೆ, ರ‍್ಯಾಲಿ, ರೋಡ್ ಶೋಗಳ ಆಯೋಜನೆಗೆ ಪ್ಲಾನ್ ರೂಪಿಸಲಾಗುತ್ತದೆ. ಈ ಎರಡೂ ಸಂದರ್ಭಗಳಲ್ಲೂ ಪ್ರಖ್ಯಾತ ಮಠ, ದೇವಸ್ಥಾನಗಳಿಗೂ ಭೇಟಿ ಕೊಡಲು ಪ್ರಧಾನಿ ಪ್ಲಾನ್ ಮಾಡ್ಕೊಂಡಿದ್ದಾರೆ. ಒಟ್ಟಿನಲ್ಲಿ ಚುನಾವಣಾ ಅಧಿಸೂಚನೆ ಪ್ರಕಟವಾಗೋವರೆಗೂ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆಯ ಭರಾಟೆ ಇರಲಿದೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

3 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

4 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

5 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

5 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

5 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago