Featured

ರಾಜ್ಯ ಬಿಜೆಪಿಯಿಂದ ಸಾಲು- ಸಾಲು ಕಾರ್ಯಕ್ರಮಗಳಿಗೆ ಪ್ರಧಾನಿಗೆ ಆಹ್ವಾನ : ಇನ್ನೆರಡು ತಿಂಗಳು ರಾಜ್ಯದಲ್ಲಿ ಮೋದಿ ಹವಾ – Vishwanews24

ರಾಜ್ಯ ಬಿಜೆಪಿಯಿಂದ ಸಾಲು- ಸಾಲು ಕಾರ್ಯಕ್ರಮಗಳಿಗೆ ಪ್ರಧಾನಿಗೆ ಆಹ್ವಾನ : ಇನ್ನೆರಡು ತಿಂಗಳು ರಾಜ್ಯದಲ್ಲಿ ಮೋದಿ ಹವಾ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ದಿನೇ ದಿನೇ ಕಾವು ಹೆಚ್ಚಾಗ್ತಿದೆ. ಮುಂದಿನ ಎರಡು ತಿಂಗಳು ರಾಜ್ಯ ಬಿಜೆಪಿಗೆ ಮಹತ್ವಪೂರ್ಣ ಕಾಲಾವಧಿಯಾಗಿದೆ.

ಪ್ರಧಾನಿ ಮೋದಿಯವರು ಮುಂದಿನ ಎರಡು ತಿಂಗಳು ಮಹತ್ವದ ರಾಜ್ಯ ಪ್ರವಾಸಗಳನ್ನು ಕೈಗೊಳ್ಳಲಿದ್ದಾರೆ. ಚುನಾವಣೆ ಘೋಷಣೆಗೆ ಮೊದಲು ಪ್ರಧಾನಿ  ಕೈಗೊಳ್ಳುತ್ತಿರುವ ಪ್ರವಾಸದಲ್ಲಿ ವಿಕಾಸದ ಕಾರ್ಯಸೂಚಿಯೇ ಮುನ್ನೆಲೆಯಲ್ಲಿರಲಿದೆ. ಅದಕ್ಕಾಗಿಯೇ ಸಾಲು- ಸಾಲು ಕಾರ್ಯಕ್ರಮಗಳಿಗೆ ಪ್ರಧಾನಿ ಅವರನ್ನೇ ಆಹ್ವಾನಿಸಲಾಗ್ತಿದೆ.

ಪ್ರಧಾನಿಯವರು ಯಾವಾಗ ಭೇಟಿ ನೀಡಿದರೂ ಅಭಿವೃದ್ಧಿಯ ಅಜೆಂಡಾ ಹಿಡಿದುಕೊಂಡೇ ಬರುತ್ತಾರೆ. ಮುಂದುವರಿದ ಭಾಗವಾಗಿ ಜನವರಿ, ಫೆಬ್ರವರಿಯಲ್ಲಿ ಮತ್ತಷ್ಟು ಯೋಜನೆಗಳಿಗೆ ಪ್ರಧಾನಿ ಹಸಿರು ನಿಶಾನೆ ತೋರಲಿದ್ದಾರೆ. ಈ ಅವಧಿಯಲ್ಲಿ ಡಬಲ್ ಇಂಜಿನ್ ಸರ್ಕಾರಗಳ ಹಲವು ಜನಪರ, ಜನಪ್ರಿಯ ಯೋಜನೆ, ಕಾಮಗಾರಿಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲು ಬಿಜೆಪಿ ಪ್ಲಾನ್ ಮಾಡಿಕೊಂಡಿದೆ.

ಇದೇ ತಿಂಗಳ ಜನವರಿ 19ರಂದು ಕಲಬುರಗಿಯಲ್ಲಿ ಪ್ರಧಾನಿ ನೇತೃತ್ವದಲ್ಲಿ ದೊಡ್ಡ ಸಮಾವೇಶ ನಡೆಯಲಿದೆ. ಲಂಬಾಣಿ ಸಮಾಜದ ಫಲಾನುಭವಿಗಳಿಗೆ ಪ್ರಧಾನಿ ಅವರು ಹಕ್ಕು ಪತ್ರ ವಿತರಿಸಲಿದ್ದಾರೆ. ಫೆಬ್ರವರಿ 12ರಂದು ಶಿವಮೊಗ್ಗದಲ್ಲಿ ನೂತನ ವಿಮಾನ ನಿಲ್ದಾಣವನ್ನು ಪ್ರಧಾನಿ ಅವರು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಾರ್ವಜನಿಕ ಸಭೆ ನಡೆಸಲು ಉದ್ದೇಶಿಸಲಾಗಿದೆ.

ಫೆಬ್ರವರಿ 13ರಂದು ಬೆಂಗಳೂರಿನಲ್ಲಿ ಏರೋ ಇಂಡಿಯಾ-2023ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆ. ಫೆಬ್ರವರಿ ಅಂತ್ಯದಲ್ಲಿ ಧಾರವಾಡ ಐಐಟಿ ಉದ್ಘಾಟನೆಗೂ ಪ್ರಧಾನಿ ಆಗಮಿಸಲಿದ್ದಾರೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಕಾರಿಡಾರ್ ಉದ್ಘಾಟನೆಗೂ ಪ್ರಧಾನಿ ಬರುತ್ತಿದ್ದು ದಿನಾಂಕ ಇನ್ನಷ್ಟೇ ನಿಗದಿಯಾಗಬೇಕಿದೆ.

ಅಭಿವೃದ್ಧಿ ಯೋಜನೆಗಳ ಬಳಿಕ ಮುಂದಿನ ಹಂತದಲ್ಲಿ ಪ್ರಚಾರ ಸಭೆ, ರ‍್ಯಾಲಿ, ರೋಡ್ ಶೋಗಳ ಆಯೋಜನೆಗೆ ಪ್ಲಾನ್ ರೂಪಿಸಲಾಗುತ್ತದೆ. ಈ ಎರಡೂ ಸಂದರ್ಭಗಳಲ್ಲೂ ಪ್ರಖ್ಯಾತ ಮಠ, ದೇವಸ್ಥಾನಗಳಿಗೂ ಭೇಟಿ ಕೊಡಲು ಪ್ರಧಾನಿ ಪ್ಲಾನ್ ಮಾಡ್ಕೊಂಡಿದ್ದಾರೆ. ಒಟ್ಟಿನಲ್ಲಿ ಚುನಾವಣಾ ಅಧಿಸೂಚನೆ ಪ್ರಕಟವಾಗೋವರೆಗೂ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆಯ ಭರಾಟೆ ಇರಲಿದೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

9 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

9 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago