Featured

ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಆರ್ ಸಿ ನಾರಾಯಣ ರೆಂಜ ನೇಮಕ – Vishwanews24

ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಆರ್ ಸಿ ನಾರಾಯಣ ರೆಂಜ ನೇಮಕ

ಪುತ್ತೂರು : ಕರ್ನಾಟಕ ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಆರ್ ಸಿ ನಾರಾಯಣ ರೆಂಜ ಆಯ್ಕೆಯಾಗಿದ್ದಾರೆ.ಎಂದು ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯಾ ಘೋಷಿಸಿದ್ದಾರೆ.

36ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷರಾಗಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲಿ ನಂ ವನ್ ಜಿಲ್ಲೆಯಾಗಿ ಸಂಘಟನೆಯಲ್ಲಿ ಮುಂಚೂಣಿಯಲ್ಲಿತ್ತು. ಬೂತ್ ನಿಂದ ರಾಜ್ಯಮಟ್ಟದವರೆಗೆ ತನ್ನ ಸಂಘಟನೆ ಕಾರ್ಯಶೈಲಿಯಿಂದ ಬಿಜೆಪಿಗೆ ಬಲ ತುಂಬಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕನಾಗಿ, ಎಬಿವಿಪಿಯಲ್ಲಿ ತಾಲೂಕು ಅಧ್ಯಕ್ಷರಾಗಿ ನಂತರ ಬಿಜೆಪಿ ಮಂಡಲ ಉಪಾಧ್ಯಕ್ಷರಾಗಿ, ಮಾಧ್ಯಮ ವಕ್ತರಾರಾಗಿ, ಬಿಜೆಪಿ ಯುವಮೋರ್ಚಾದ ಮಂಡಲ ಉಪಾಧ್ಯಕ್ಷರಾಗಿ ನಂತರ ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಮಾಧ್ಯಮ ಪ್ರಮುಖರಾಗಿ, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಣೆ ಮಾಡಿದ್ದಾರೆ.

ಜೇಸಿಸ್ ಅಧ್ಯಕ್ಷರಾಗಿ, ರೋಟರಿಯಾಕ್ಟ್ ಪದಾಧಿಕಾರಿಯಾಗಿ ಹಾಗು ಅನೇಕ ಸಂಘ ಸಂಸ್ಥೆಗಳಲ್ಲಿ ಸಮಾಜಸಸೇವಕರಾಗಿ ಕೆಲಸ ನಿರ್ವಹಿಸಿದ್ದಾರೆ,ಪುತ್ತೂರು ಬಿಲ್ಲವ ಸಂಘಟನೆಯಲ್ಲಿ ಪ್ರಮುಖ ಪಾತ್ರವಹಿಸಿರುವ ಇವರು ಗ್ರಾಮ ಸಂಚಲನ ಸಮಿತಿ ಸದಸ್ಯರಾಗಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದಾರೆ,ಪುತ್ತೂರು ನಾರಾಯಣ ಗುರು ಮಂದಿರದ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದರು, ಕುಂಬ್ರ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹಾಗು ಜಿಲ್ಲಾ ಮೂರ್ತೆದಾರರ ಮಹಾಮಂಡಳದ ನಿರ್ದೇಶಕರಾಗಿ ಸಹಕಾರಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.ಇವರ ಸಂಘಟನಾ ಕಾರ್ಯಕ್ಕೆ ರಾಜ್ಯಮಟ್ಟದ ಜವಾಬ್ದಾರಿ ಒಲಿದು ಬಂದಿದೆ.

Vishwa News 24

Recent Posts

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ – vishwanews24

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ…

5 hours ago

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ – ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ ; ಯುವಕ ವಶಕ್ಕೆ – vishwanews24

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ - ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ…

5 hours ago

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ – vishwanews24

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ ಮಂಗಳೂರು: ಮಂಗಳೂರು ನಗರ ಪೊಲೀಸ್…

6 hours ago

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ ಅಳವಡಿಕೆ – vishwanews24

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ…

6 hours ago

ಚಿಕನ್ ಪ್ರಿಯರಿಗೆ ಶಾಕ್ : ದಾಖಲೆಯ ಏರಿಕೆ ಕಂಡ ಚಿಕನ್, ಮೊಟ್ಟೆ ದರ – vishwanews24

ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಶಾಕ್: ದಾಖಲೆ ಬರೆದ ದರ ಬೆಂಗಳೂರು: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ…

6 hours ago

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ – vishwanews24

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ ಮಂಗಳೂರು:  ಸರ್ಕಾರಿ ಕಾಲೇಜಿನ ಬಿಬಿಎ…

7 hours ago