ರಾಯಚೂರು: ಶಾಸಕರ ಅನರ್ಹತೆಗೆ ಸಂಬಂಧಿಸಿ ಸ್ಪೀಕರ್ ಆದೇಶವನ್ನು ಸುಪ್ರೀಂಕೋರ್ಟು ಎತ್ತಿ ಹಿಡಿದಿರುವುದರಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ.
ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟು ಸ್ಪೀಕರ್ ಆದೇಶ ಎತ್ತಿ ಹಿಡಿದಿದ್ದು, ನೈತಿಕತೆಗೆ ಗೆಲುವು. ತೀರ್ಪನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತದೆ ಎಂದರು.
ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸರಕಾರಕ್ಕೆ ಅಧಿಕಾರದಲ್ಲಿ ಉಳಿಯುವ ನೈತಿಕತೆಯಿಲ್ಲ. ಸ್ಪೀಕರ್ ನಿರ್ಧಾರ ಸರಿ ಎಂಬುದನ್ನು ತೀರ್ಪು ಬಯಲುಗೊಳಿಸಿದೆ. ಕುದುರೆ ವ್ಯಾಪಾರ ನಡೆದಿರುವುದು ಸಾಬೀತಾಗಿದೆ. ಶೀಘ್ರ ರಾಷ್ಟ್ರಪತಿ ಭೇಟಿ ಮಾಡಿ ರಾಜ್ಯ ಸರಕಾರದ ವಿರುದ್ಧ ದೂರು ನೀಡಲಾಗುವುದು. ಸರಕಾರವನ್ನು ವಜಾಗೊಳಿಸಲು ಒತ್ತಾಯ ಮಾಡಲು ನಿರ್ಧರಿಸಲಾಗಿದೆ ಎಂದರು.
ಬಿಜೆಪಿಗೆ ನೈತಿಕತೆಯಿದ್ದರೆ ಉಪ ಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಸ್ಪರ್ಧೆಗೆ ಅವಕಾಶ ನೀಡಬಾರದು ಎಂದವರು ಒತ್ತಾಯಿಸಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…