ರಾಯಚೂರು: ಶಾಸಕರ ಅನರ್ಹತೆಗೆ ಸಂಬಂಧಿಸಿ ಸ್ಪೀಕರ್ ಆದೇಶವನ್ನು ಸುಪ್ರೀಂಕೋರ್ಟು ಎತ್ತಿ ಹಿಡಿದಿರುವುದರಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ.
ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟು ಸ್ಪೀಕರ್ ಆದೇಶ ಎತ್ತಿ ಹಿಡಿದಿದ್ದು, ನೈತಿಕತೆಗೆ ಗೆಲುವು. ತೀರ್ಪನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತದೆ ಎಂದರು.
ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸರಕಾರಕ್ಕೆ ಅಧಿಕಾರದಲ್ಲಿ ಉಳಿಯುವ ನೈತಿಕತೆಯಿಲ್ಲ. ಸ್ಪೀಕರ್ ನಿರ್ಧಾರ ಸರಿ ಎಂಬುದನ್ನು ತೀರ್ಪು ಬಯಲುಗೊಳಿಸಿದೆ. ಕುದುರೆ ವ್ಯಾಪಾರ ನಡೆದಿರುವುದು ಸಾಬೀತಾಗಿದೆ. ಶೀಘ್ರ ರಾಷ್ಟ್ರಪತಿ ಭೇಟಿ ಮಾಡಿ ರಾಜ್ಯ ಸರಕಾರದ ವಿರುದ್ಧ ದೂರು ನೀಡಲಾಗುವುದು. ಸರಕಾರವನ್ನು ವಜಾಗೊಳಿಸಲು ಒತ್ತಾಯ ಮಾಡಲು ನಿರ್ಧರಿಸಲಾಗಿದೆ ಎಂದರು.
ಬಿಜೆಪಿಗೆ ನೈತಿಕತೆಯಿದ್ದರೆ ಉಪ ಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಸ್ಪರ್ಧೆಗೆ ಅವಕಾಶ ನೀಡಬಾರದು ಎಂದವರು ಒತ್ತಾಯಿಸಿದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…