ಉಡುಪಿ: ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಭೂಸ್ವಾಧೀನ ಕಾಯ್ದೆ, ಕಾರ್ಮಿಕರ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಜನಧ್ವನಿ ಅಭಿಯಾನದ ಮೂಲಕ ಉಡುಪಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಕಾಂಗ್ರೆಸ್ ಭವನದಿಂದ ತಾಲೂಕು ಕಚೇರಿಯ ವರೆಗೆ ಮೆರೆವಣಿಗೆಯ ಮೂಲಕ ತೆರಳಿದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಈ ವೇಲೆ ಮಾತನಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಕರ್ನಾಟಕದ ಬಿಜೆಪಿ ಸರ್ಕಾರವು ರೈತ ವಿರೋಧಿ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಸುಗ್ರಿವಾಜ್ಞೇ ಮೂಲಕ ಜಾರಿಗೆ ಗೊಳಿಸಿದೆ. ಇಡೀ ಮನುಕುಲವನ್ನೇ ಆತಂಕಕ್ಕೀಡು ಮಾಡಿರುವ ಕೋವಿಡ್-19 ವೈರಾಣು ನಿಯಂತ್ರಣ ಕಾರ್ಯಕ್ರಮದಲ್ಲಿ ವ್ಯಾಪಕವಾದ ಭ್ರಷ್ಟಾಚಾರ ನಡೆಸಿದೆ. ಅಲ್ಲದೆ ರಾಜ್ಯದ ಬಹುಭಾಗವನ್ನು ಭಾಧಿಸುತ್ತಿರುವ ಅತಿವೃಷ್ಟಿಗೆ ಪರಿಹಾರ ಒದಗಿಸುವಲ್ಲಿ ಕೂಡ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದರು.
ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಶಾಸಕ ಯು ಆರ್ ಸಭಾಪತಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ನಗರಸಭಾ ಸದಸ್ಯರಾದ ರಮೇಶ್ ಕಾಂಚನ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹರೀಶ್ ಕಿಣಿ, ಕಾಂಗ್ರೆಸ್ ನಾಯಕರಾದ ವೆರೋನಿಕಾ ಕರ್ನೆಲಿಯೋ, ಯತೀಶ್ ಕರ್ಕೆರಾ, ಜನಾರ್ಧನ ಭಂಡಾರ್ಕರ್, ಡಾ ಸುನೀತಾ ಶೆಟ್ಟಿ, ರೋಶನಿ ಒಲಿವರ್, ಹಬೀಬ್ ಆಲಿ, ಪ್ರಶಾಂತ್ ಪೂಜಾರಿ, ಭಾಸ್ಕರ್ ರಾವ್ ಕಿದಿಯೂರು, ನರಸಿಂಹ ಮೂರ್ತಿ ಹಾಗೂ ಇತರರು ಉಪಸ್ಥಿತರಿದ್ದರು
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…