Featured

ರಾಜ್ಯ ಮತ್ತು ಇಲ್ಲಿನ ಜನ ಉಳಿಯಬೇಕು ಎಂಬ ಕಾರಣಕ್ಕೆ ನಾವು ಗೆಲ್ಲಬೇಕಾಗಿದೆ : ಸಿದ್ದರಾಮಯ್ಯ – Vishwanews24

ಬಿಜೆಪಿಯವರು ವಾಮ ಮಾರ್ಗದಿಂದ ಅಧಿಕಾರಕ್ಕೆ ಬಂದು ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದಾರೆ..

ಬೆಂಗಳೂರು: 2023ರ ಏಪ್ರಿಲ್- ಮೇಗೆ ವಿಧಾನಸಭಾ ಚುನಾವಣೆ ಬರುತ್ತದೆ, ಈ ಚುನಾವಣೆಯನ್ನು ನಾವು ಗೆಲ್ಲಲೇಬೇಕು. ಇದು ನಮ್ಮ ಮುಂದಿರುವ ಸವಾಲು. ನಾವು ಅಧಿಕಾರಕ್ಕೆ ಬರಬೇಕು ಎನ್ನುವ ಕಾರಣಕ್ಕೆ ಚುನಾವಣೆ ಗೆಲ್ಲುವುದಲ್ಲ, ರಾಜ್ಯ ಮತ್ತು ಇಲ್ಲಿನ ಜನ ಉಳಿಯಬೇಕು ಎಂಬ ಕಾರಣಕ್ಕೆ ನಾವು ಗೆಲ್ಲಬೇಕಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದ ಚಿಂತನಾ ಶಿಬಿರದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ವಾಮ ಮಾರ್ಗದಿಂದ ಅಧಿಕಾರಕ್ಕೆ ಬಂದು ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದಾರೆ. ನಮ್ಮ ಪಕ್ಷ 6 ಕಮಿಟಿಗಳನ್ನು ಮಾಡಿದೆ, ಇವುಗಳು ಸುದೀರ್ಘ ಚರ್ಚೆ ನಡೆಸಿ ತನ್ನ ನಿರ್ಣಯಗಳನ್ನು ಮಾಡಿ, ಪಕ್ಷದ ನಿಲುವನ್ನು ಸ್ಪಷ್ಟಪಡಿಸಬೇಕಾಗುತ್ತದೆ. 2024ಕ್ಕೆ ಲೋಕಸಭಾ ಚುನಾವಣೆ ಇದೆ, ಕರ್ನಾಟಕದಲ್ಲಿ 2023ರಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡಯಲಿದೆ. ಇವುಗಳ ಜೊತೆಗೆ ಜಿಲ್ಲಾ ಮತ್ತು ತಾಲೂಕು ಪಂಚಾಯತ್‍ಗಳಿಗೆ, ಮಹಾನಗರ ಪಾಲಿಕೆ ಚುನಾವಣೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ನವ ಸಂಕಲ್ಪ ಚಿಂತನಾ ಶಿಬಿರ ಆಯೋಜಿಸಲಾಗಿದೆ. ಪಕ್ಷ ಬೂತ್ ಮಟ್ಟದಿಂದ ಕೆಪಿಸಿಸಿ ಮಟ್ಟದ ವರೆಗೆ ಸಂಘಟಿತಗೊಂಡರೆ ಚುನಾವಣೆಗಳ ಗೆಲುವು ಕಷ್ಟದ ಕೆಲಸವಲ್ಲ. ಇಂತಹ ಹಲವು ಚುನಾವಣೆಗಳನ್ನು ಯಶಸ್ವಿಯಾಗಿ ಪಕ್ಷ ಈಗಾಗಲೇ ಎದುರಿಸಿದೆ ಎಂದರು.

ಪಕ್ಷವನ್ನು ಬಲಪಡಿಸಲು ಅನೇಕ ಕ್ರಮಗಳನ್ನು ಎಐಸಿಸಿ ಹಾಗೂ ಕೆಪಿಸಿಸಿ ತೆಗೆದುಕೊಳ್ಳಲು ಆರಂಭ ಮಾಡಿದೆ. ಅದರ ಭಾಗವಾಗಿ ಈ ಸಭೆಯೂ ನಡೆಯುತ್ತಿದೆ. ತಾಲೂಕು ಹಾಗೂ ಜಿಲ್ಲಾ ಪಂಚಾಯತ್‍ಗಳಿಗೆ ಚುನಾವಣೆ ನಡೆಸಬೇಕು ಎಂಬ ಆದೇಶವಾಗಿದೆ. ಸುಪ್ರೀಂ ಕೋರ್ಟ್ ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶ ಸರ್ಕಾರದ ಮೀಸಲಾತಿ ಬಗ್ಗೆ ಒಂದು ತೀರ್ಪನ್ನು ನೀಡಿದೆ. ತೀರ್ಪಿನ ಪ್ರಕಾರ ಹಿಂದುಳಿದ ಜಾತಿಗಳಿಗೆ ಮೀಸಲಾತಿ ನೀಡುವಾಗ ಒಂದು ನಂಬಿಕಾರ್ಹ ಮಾಹಿತಿ ಇರಬೇಕು ಮತ್ತು ಮೀಸಲಾತಿ ಪ್ರಮಾಣ 50% ಮೀರಬಾರದು ಎಂದು ಹೇಳಿದೆ. ಇದು 2021 ಏಪ್ರಿಲ್‍ನಲ್ಲಿ ನೀಡಿದ ತೀರ್ಪಾಗಿದೆ. ಆದರೆ ರಾಜ್ಯ ಬಿಜೆಪಿ ಸರ್ಕಾರ ಈ ತೀರ್ಪು ಬಂದ ಮೇಲೆ ಯಾವ ಕ್ರಮ ಕೈಗೊಂಡಿಲ್ಲ, ಇತ್ತೀಚೆಗೆ ಭಕ್ತವತ್ಸಲಂ ಅವರ ಸಮಿತಿ ರಚನೆ ಮಾಡಿದೆ, ಆ ಸಮಿತಿ ಇನ್ನು ವರದಿ ನೀಡಿಲ್ಲ. ಹತ್ತು ವಾರದಲ್ಲಿ ಚುನಾವಣೆ ನಡೆಸಬೇಕು ಎಂದು ಕೋರ್ಟ್ ಹೇಳಿದೆ. ನಮ್ಮ ಪಕ್ಷವು ಸರ್ವ ಪಕ್ಷ ಸಭೆಯಲ್ಲಿ ಬಹಳ ಸ್ಪಷ್ಟವಾಗಿ ಹಿಂದುಳಿದ ಜಾತಿಗಳಿಗೆ ಮೀಸಲಾತಿ ಇಲ್ಲದೆ ಚುನಾವಣೆ ನಡೆಸಬಾರದು ಎಂದು ಹೇಳಿದೆ. ಹಿಂದುಳಿದ ಜಾತಿಗಳಿಗೆ, ಮಹಿಳೆಯರಿಗೆ ಮೀಸಲಾತಿ ನೀಡಿದ್ದು ರಾಜೀವ್ ಗಾಂಧಿ ಅವರು ಸಂವಿಧಾನಕ್ಕೆ 73 ಹಾಗೂ 74ನೇ ತಿದ್ದುಪಡಿ ಮಾಡಿದ ನಂತರ. ಮಹಿಳೆಯರಿಗೆ 50%, ಹಿಂದುಳಿದ ಜಾತಿಗಳಿಗೆ 33% ಮೀಸಲಾತಿ ನೀಡಿದ್ದು. ಇದರಲ್ಲಿ ಅಲ್ಪಸಂಖ್ಯಾತರು ಹಾಗೂ ಇನ್ನಿತರೆ ಜಾತಿಗಳು ಸೇರುತ್ತವೆ. ಕಾಂಗ್ರೆಸ್ ಪಕ್ಷ ರಾಜಕೀಯ ಮೀಸಲಾತಿ ನೀಡಿದ್ದು ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ನುಡಿದರು.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

5 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

5 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

5 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

5 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

5 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago