ಹಾಸನ: ಶುಕ್ರವಾರ ಸಂಭವಿಸಲಿರುವ ಚಂದ್ರ ಗ್ರಹಣದಿಂದಾಗಿ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲವಾಗಲಿದ್ದು, ಎಚ್.ಡಿ.ರೇವಣ್ಣನವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನುವ ಅರ್ಥವಿರುವ ಭವಿಷ್ಯವನ್ನು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ನುಡಿದಿದ್ದಾರೆ.
ತಾಳೆಗರಿ ನೋಡಿ ಭವಿಷ್ಯ ಹೇಳುವ ಶ್ರೀಗಳು `ಅರಸನ ಆಯಸ್ಸು ಉಸಿರಲ್ಲಿ ನಿಂತೀತು, ಪರಸಕ್ಕೆ ಭಂಗ ಪ್ರಸಂಗಕ್ಕೆ ಹಾನಿ, ಭಾತೃ ಬೆಂಕಿ ಹಿಡಿದಾನು’ ಎಂದು ಒಗಟಾಗಿ ತಿಳಿಸಿದ್ದಾರೆ. ಅಂದರೆ `ಸಹೋದರ ಬೆಂಕಿ ಹಿಡಿದಾನು ಎಂದರೆ ಸಿಎಂ ಎಚ್.ಡಿ.ಕುಮಾರಸ್ವಾಮಿಯವರ ಸಹೋದರ ಎಚ್.ಡಿ.ರೇವಣ್ಣ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಈ ಭವಿಷ್ಯ ಅರ್ಥ ಮೂಡಿಸುತ್ತದೆ.
ಪ್ರಾಕೃತಿಕ ಸಂಪನ್ಮೂಲಗಳು ನಾಶವಾಗಲಿದ್ದು, ಮುಂದಿನ ದಿನಗಳಲ್ಲಿ ಭೂಕಂಪನವಾಗಲಿದೆ. ಇನ್ನೂ ಹೆಚ್ಚು ಮಳೆಯಾಗಲಿದ್ದು, ಬರುವ ವಿಶೇಷ ದಿನಗಳು ಕಷ್ಟಕರವಾಗಲಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದ್ದಾರೆ.
ವಿಧಾನಸಭಾ ಚುನಾವಣೆಗೂ ಮುನ್ನ “ಬಿತ್ತಿದ ಬೆಳಸು ಪೈರು ಕುಯ್ದಾರು, ಬಿತ್ತಿದ ಬೀಜ ಒಂದು ಬೆಳೆದ ಪೈರೋಂದು” ಎಂದು ಭವಿಷ್ಯ ನುಡಿದಿದ್ದರು. ಅಂದರೆ ಮುಂದಿನ ಚುನಾವಣೆ ಫಲಿತಾಂಶದಲ್ಲಿ ಅನಿರೀಕ್ಷಿತ ಬದಲಾವಣೆಗಳಾಗುವ ಸಾಧ್ಯತೆ ಇದೆ. ಯಾರೋ ಹಾಕಿದ ಶ್ರಮದ ಫಲವನ್ನ ಇನ್ನೊಬರು ಅನುಭವಿಸಲಿದ್ದಾರೆ. ಹಾಗೇ ಅನಿರೀಕ್ಷಿತ ಅಧಿಕಾರ ಚುಕ್ಕಾಣಿ ಹಿಡಿಯುವ ಸನ್ನಿವೇಶಗಳಿವೆ ಅನ್ನೊದನ್ನ ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…