ಹಾಸನ: ಶುಕ್ರವಾರ ಸಂಭವಿಸಲಿರುವ ಚಂದ್ರ ಗ್ರಹಣದಿಂದಾಗಿ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲವಾಗಲಿದ್ದು, ಎಚ್.ಡಿ.ರೇವಣ್ಣನವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನುವ ಅರ್ಥವಿರುವ ಭವಿಷ್ಯವನ್ನು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ನುಡಿದಿದ್ದಾರೆ.
ತಾಳೆಗರಿ ನೋಡಿ ಭವಿಷ್ಯ ಹೇಳುವ ಶ್ರೀಗಳು `ಅರಸನ ಆಯಸ್ಸು ಉಸಿರಲ್ಲಿ ನಿಂತೀತು, ಪರಸಕ್ಕೆ ಭಂಗ ಪ್ರಸಂಗಕ್ಕೆ ಹಾನಿ, ಭಾತೃ ಬೆಂಕಿ ಹಿಡಿದಾನು’ ಎಂದು ಒಗಟಾಗಿ ತಿಳಿಸಿದ್ದಾರೆ. ಅಂದರೆ `ಸಹೋದರ ಬೆಂಕಿ ಹಿಡಿದಾನು ಎಂದರೆ ಸಿಎಂ ಎಚ್.ಡಿ.ಕುಮಾರಸ್ವಾಮಿಯವರ ಸಹೋದರ ಎಚ್.ಡಿ.ರೇವಣ್ಣ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಈ ಭವಿಷ್ಯ ಅರ್ಥ ಮೂಡಿಸುತ್ತದೆ.
ಪ್ರಾಕೃತಿಕ ಸಂಪನ್ಮೂಲಗಳು ನಾಶವಾಗಲಿದ್ದು, ಮುಂದಿನ ದಿನಗಳಲ್ಲಿ ಭೂಕಂಪನವಾಗಲಿದೆ. ಇನ್ನೂ ಹೆಚ್ಚು ಮಳೆಯಾಗಲಿದ್ದು, ಬರುವ ವಿಶೇಷ ದಿನಗಳು ಕಷ್ಟಕರವಾಗಲಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದ್ದಾರೆ.
ವಿಧಾನಸಭಾ ಚುನಾವಣೆಗೂ ಮುನ್ನ “ಬಿತ್ತಿದ ಬೆಳಸು ಪೈರು ಕುಯ್ದಾರು, ಬಿತ್ತಿದ ಬೀಜ ಒಂದು ಬೆಳೆದ ಪೈರೋಂದು” ಎಂದು ಭವಿಷ್ಯ ನುಡಿದಿದ್ದರು. ಅಂದರೆ ಮುಂದಿನ ಚುನಾವಣೆ ಫಲಿತಾಂಶದಲ್ಲಿ ಅನಿರೀಕ್ಷಿತ ಬದಲಾವಣೆಗಳಾಗುವ ಸಾಧ್ಯತೆ ಇದೆ. ಯಾರೋ ಹಾಕಿದ ಶ್ರಮದ ಫಲವನ್ನ ಇನ್ನೊಬರು ಅನುಭವಿಸಲಿದ್ದಾರೆ. ಹಾಗೇ ಅನಿರೀಕ್ಷಿತ ಅಧಿಕಾರ ಚುಕ್ಕಾಣಿ ಹಿಡಿಯುವ ಸನ್ನಿವೇಶಗಳಿವೆ ಅನ್ನೊದನ್ನ ಹೇಳಿದ್ದಾರೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]