ಹಾಸನ: ಶುಕ್ರವಾರ ಸಂಭವಿಸಲಿರುವ ಚಂದ್ರ ಗ್ರಹಣದಿಂದಾಗಿ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲವಾಗಲಿದ್ದು, ಎಚ್.ಡಿ.ರೇವಣ್ಣನವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನುವ ಅರ್ಥವಿರುವ ಭವಿಷ್ಯವನ್ನು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ನುಡಿದಿದ್ದಾರೆ.
ತಾಳೆಗರಿ ನೋಡಿ ಭವಿಷ್ಯ ಹೇಳುವ ಶ್ರೀಗಳು `ಅರಸನ ಆಯಸ್ಸು ಉಸಿರಲ್ಲಿ ನಿಂತೀತು, ಪರಸಕ್ಕೆ ಭಂಗ ಪ್ರಸಂಗಕ್ಕೆ ಹಾನಿ, ಭಾತೃ ಬೆಂಕಿ ಹಿಡಿದಾನು’ ಎಂದು ಒಗಟಾಗಿ ತಿಳಿಸಿದ್ದಾರೆ. ಅಂದರೆ `ಸಹೋದರ ಬೆಂಕಿ ಹಿಡಿದಾನು ಎಂದರೆ ಸಿಎಂ ಎಚ್.ಡಿ.ಕುಮಾರಸ್ವಾಮಿಯವರ ಸಹೋದರ ಎಚ್.ಡಿ.ರೇವಣ್ಣ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಈ ಭವಿಷ್ಯ ಅರ್ಥ ಮೂಡಿಸುತ್ತದೆ.
ಪ್ರಾಕೃತಿಕ ಸಂಪನ್ಮೂಲಗಳು ನಾಶವಾಗಲಿದ್ದು, ಮುಂದಿನ ದಿನಗಳಲ್ಲಿ ಭೂಕಂಪನವಾಗಲಿದೆ. ಇನ್ನೂ ಹೆಚ್ಚು ಮಳೆಯಾಗಲಿದ್ದು, ಬರುವ ವಿಶೇಷ ದಿನಗಳು ಕಷ್ಟಕರವಾಗಲಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದ್ದಾರೆ.
ವಿಧಾನಸಭಾ ಚುನಾವಣೆಗೂ ಮುನ್ನ “ಬಿತ್ತಿದ ಬೆಳಸು ಪೈರು ಕುಯ್ದಾರು, ಬಿತ್ತಿದ ಬೀಜ ಒಂದು ಬೆಳೆದ ಪೈರೋಂದು” ಎಂದು ಭವಿಷ್ಯ ನುಡಿದಿದ್ದರು. ಅಂದರೆ ಮುಂದಿನ ಚುನಾವಣೆ ಫಲಿತಾಂಶದಲ್ಲಿ ಅನಿರೀಕ್ಷಿತ ಬದಲಾವಣೆಗಳಾಗುವ ಸಾಧ್ಯತೆ ಇದೆ. ಯಾರೋ ಹಾಕಿದ ಶ್ರಮದ ಫಲವನ್ನ ಇನ್ನೊಬರು ಅನುಭವಿಸಲಿದ್ದಾರೆ. ಹಾಗೇ ಅನಿರೀಕ್ಷಿತ ಅಧಿಕಾರ ಚುಕ್ಕಾಣಿ ಹಿಡಿಯುವ ಸನ್ನಿವೇಶಗಳಿವೆ ಅನ್ನೊದನ್ನ ಹೇಳಿದ್ದಾರೆ.
ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…
ಸುಳ್ಯ: ಮನೆಯ ಅಂಗಳಕ್ಕೆ ಮುರಿದು ಬಿದ್ದ ತೆಂಗಿನ ಮರ; ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ ಸುಳ್ಯ: ಮನೆಯ ಮುಂಭಾಗದಲ್ಲಿದ್ದ ತೆಂಗಿನ…
ಮಂಗಳೂರು: ಸೋಮೇಶ್ವರದಲ್ಲಿ 16 ವರ್ಷದ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಂಗಳೂರು : 16 ವರ್ಷದ ಪ್ರಥಮ ವರ್ಷದ ಪಿಯುಸಿ (ಪಿಯುಸಿ)…
ಮೆಡಿಕಲ್ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ: ಕೇಂದ್ರ ಆದೇಶ ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ…
ಪಟ್ಲ ರೂರಲ್ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವಕ್ಕೆ ಚಾಲನೆ; ವನ ಮಹೋತ್ಸವ ಕಾರ್ಯಕ್ರಮ ಪಟ್ಲ: ರೂರಲ್ ಎಜುಕೇಶನ್ ಸೊಸೈಟಿ (ರಿ.),…
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…