ರಾಜ್ಯ ವಿಧಾನಪರಿಷತ್ ಚುನಾವಣೆ ಹಿನ್ನಲೆ : ದ.ಕ, ಉಡುಪಿಯಲ್ಲಿ ಮತದಾನ ಪ್ರಕ್ರಿಯೆ ಆರಂಭ – Vishwanews24
ರಾಜ್ಯ ವಿಧಾನಪರಿಷತ್ ಚುನಾವಣೆ ಹಿನ್ನಲೆ : ದ.ಕ, ಉಡುಪಿಯಲ್ಲಿ ಮತದಾನ ಪ್ರಕ್ರಿಯೆ ಆರಂಭ – Vishwanews24
ಮಂಗಳೂರು: ರಾಜ್ಯ ವಿಧಾನಪರಿಷತ್ ಚುನಾವಣೆ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯಾಡಳಿತ ಕ್ಷೇತ್ರದ ಚುನಾವಣಾ ಪ್ರಕ್ರಿಯೆ ಆರಂಭಗೊಂಡಿದೆ.
ಸಂಸದ ನಳಿನ್ ಕುಮಾರ್, ಶಾಸಕ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ಮನಪಾ ಸದಸ್ಯರು ಇಂದು ಬೆಳಗ್ಗೆ 9.30ರ ಸುಮಾರಿಗೆ ಮನಪಾ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯಲ್ಲೂ ಮತದಾನ ಪ್ರಗತಿಯಲ್ಲಿದ್ದು, ಮತದಾನ ಕೇಂದ್ರದಲ್ಲಿ ಎಲ್ಲ ಮತದಾರರು ಸಾಮಾಜಿಕ ಅಂತರ ಮಾರ್ಗಸೂಚಿಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಮಹಾನಗರ ಪಾಲಿಕೆಯ ಮತಗಟ್ಟೆಯಲ್ಲಿ ಮತದಾನಕ್ಕೆ ಸರತಿ ಸಾಲಿನಲ್ಲಿ ಮತದಾರರು ನಿಂತಿದ್ದಾರೆ. ಮನಪಾದಲ್ಲಿ 68 ಮತದಾರರಿದ್ದು, ನಾಲ್ಕು ಮಂದಿ ನಾಮನಿರ್ದೇಶಿತ ಸದಸ್ಯರು, ಇಬ್ಬರು ಶಾಸಕರು, ಓರ್ವ ಸಂಸದ ಕೂಡ ಸೇರಿದ್ದಾರೆ.
