ರಾಜ್ಯ ಸರಕಾರದಿಂದ ಸುವರ್ಣ ತ್ರಿಭುಜ ದೋಣಿ ದುರಂತದ ಮೀನುಗಾರರಿಗೆ ರಾಜ್ಯ ಸರಕಾರದಿಂದ 10 ಲಕ್ಷ ಹೆಚ್ಚುವರಿ ಪರಿಹಾರ : ಯಶ್‍ಪಾಲ್ ಸುವರ್ಣ ಸ್ವಾಗತ -Vishwanews24

ರಾಜ್ಯ ಸರಕಾರದಿಂದ ಸುವರ್ಣ ತ್ರಿಭುಜ ದೋಣಿ ದುರಂತದ ಮೀನುಗಾರರಿಗೆ ರಾಜ್ಯ ಸರಕಾರದಿಂದ 10 ಲಕ್ಷ ಹೆಚ್ಚುವರಿ ಪರಿಹಾರ : ಯಶ್‍ಪಾಲ್ ಸುವರ್ಣ ಸ್ವಾಗತ -Vishwanews24

ಉಡುಪಿ :ಸುವರ್ಣ ತ್ರಿಭುಜ ಬೋಟ್ ದುರಂತದಲ್ಲಿ ಮೃತಪಟ್ಟ 7 ಮೀನುಗಾರರ ಕುಟುಂಬಗಳಿಗೆ ವಿಶೇಷ ಪ್ರಕರಣದಡಿಯಲ್ಲಿ ಹೆಚ್ಚುವರಿ ಪರಿಹಾರವಾಗಿ ತಲಾ 10 ಲಕ್ಷ ರೂಪಾಯಿಗಳನ್ನು ಮಂಜೂರು ಮಾಡಿದ ಕರ್ನಾಟಕ ಸರಕಾರದ ನಿರ್ಧಾರವನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್‍ಪಾಲ್ ಸುವರ್ಣ ಸ್ವಾಗತಿಸಿದ್ದಾರೆ.

ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಮುಳುಗಡೆಯಾಗಿ ಕಣ್ಮರೆಯಾದ 7 ಮಂದಿ ಮೀನುಗಾರರ ಕುಟುಂಬಸ್ಥರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಮಾಡಿದ ಮನವಿಗೆ ಸ್ಪಂದಿಸಿ, ಮೀನುಗಾರರ ಬಗ್ಗೆ ತಮ್ಮ ಕಾಳಜಿಯನ್ನು ಪ್ರದರ್ಶಿಸಿದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಹಾಗೂ ಪರಿಹಾರ ಮಂಜೂರಾತಿಗೆ ವಿಶೇಷ ಮುತುವರ್ಜಿ ವಹಿಸಿದ ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರರ ಮುಖಂಡರಾದ ನಾಡೋಜ ಡಾ ಜಿ ಶಂಕರ್ ದಕ್ಷಿಣ ಕನ್ನಡ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲು, ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದರಾದ ಶೋಭಾ ಕರಂದ್ಲಾಜೆ, ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಕೆ ರಘುಪತಿ ಭಟ್ ಹಾಗೂ ಕರಾವಳಿಯ ಎಲ್ಲಾ ಶಾಸಕರಿಗೆ ಸಮಸ್ತ ಮೀನುಗಾರರ ಪರವಾಗಿ ಧನ್ಯವಾಗಳನ್ನು ಸಲ್ಲಿಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

5 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

5 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

6 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

7 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

7 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

7 hours ago