ಶಿವಮೊಗ್ಗ: ಇದೆ ಬರುವ ಜನವರಿ 12ರಂದು ರಾಜ್ಯ ಸರಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿಗೆ ಚಾಲನೆ ನೀಡಲಿದ್ದೇವೆ ಎಂದು ವೈದ್ಯಕೀಯ ಮತ್ತು ಕೌಶ್ಯಲಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿಕೆ ನೀಡಿದ್ದಾರೆ.
ಈ ಕುರಿತು ಶಿವಮೊಗ್ಗದಲ್ಲಿ ಮಾತನಾಡಿದ ಅವರು ರಾಜ್ಯದ ಐದನೇ ಗ್ಯಾರಂಟಿ ಯೋಜನೆಯಾದ ‘ಯುವನಿಧಿ’ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು. ಇದಕ್ಕಾಗಿ ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಸ್ಥಳ ಪರಿಶೀಲನೆ ಮಾಡಿದ್ದೇವೆ ಈ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಅಧಿಕ ಯುವಕರು ಸೇರುವ ನಿರೀಕ್ಷೆ ಇದೆ ಎಂದು ಹೇಳಿದರು.
ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ 12ರಂದು ಯೋಜನೆಗೆ ಚಾಲನೆ ನೀಡಲಾಗುವುದು ಈ ಕುರಿತು ಸ್ಥಳ ಪರಿಶೀಲನೆ ನಡೆಸಲು ಸಚಿವರಾದ ಮಧು ಬಂಗಾರಪ್ಪ, ಎಂಸಿ ಸುಧಾಕರ್, ಶಾಸಕರಾದ ಬೇಳೂರು ಗೋಪಾಲಕೃಷ್ಣ ಬಂದಿದ್ದೇವೆ. ಸಚಿವರಾದ ಮಧು ಬಂಗಾರಪ್ಪ ಕಾರ್ಯಕ್ರಮದ ನೇತೃತ್ವ ವಹಿಸಿಕೊಂಡಿದ್ದಾರೆ ಎಂದು ಹೇಳಿದರು.
ಮಂಗಳವಾರದವರೆಗೆ ಸುಮಾರು 25 ಸಾವಿರ ಮಂದಿ ನೊಂದಣಿ ಮಾಡಿದ್ದು, ಇನ್ನೂ ಮುಂದುವರೆಯಲಿದೆ ಎಂದು ಹೇಳಿದರು ಅಲ್ಲದೆ ಯೋಜನೆಯ ಚಾಲನೆಯ ದಿನದಂದೇ ಡಿಪ್ಲೊಮಾ ಹಾಗೂ ಪದವೀಧರರಿಗೆ ನೇರವಾಗಿ ಹಣ ಹಾಕುತ್ತೆವೆ ಎಂದು ಹೇಳಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…