ಶಿವಮೊಗ್ಗ: ಇದೆ ಬರುವ ಜನವರಿ 12ರಂದು ರಾಜ್ಯ ಸರಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿಗೆ ಚಾಲನೆ ನೀಡಲಿದ್ದೇವೆ ಎಂದು ವೈದ್ಯಕೀಯ ಮತ್ತು ಕೌಶ್ಯಲಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿಕೆ ನೀಡಿದ್ದಾರೆ.
ಈ ಕುರಿತು ಶಿವಮೊಗ್ಗದಲ್ಲಿ ಮಾತನಾಡಿದ ಅವರು ರಾಜ್ಯದ ಐದನೇ ಗ್ಯಾರಂಟಿ ಯೋಜನೆಯಾದ ‘ಯುವನಿಧಿ’ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು. ಇದಕ್ಕಾಗಿ ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಸ್ಥಳ ಪರಿಶೀಲನೆ ಮಾಡಿದ್ದೇವೆ ಈ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಅಧಿಕ ಯುವಕರು ಸೇರುವ ನಿರೀಕ್ಷೆ ಇದೆ ಎಂದು ಹೇಳಿದರು.
ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ 12ರಂದು ಯೋಜನೆಗೆ ಚಾಲನೆ ನೀಡಲಾಗುವುದು ಈ ಕುರಿತು ಸ್ಥಳ ಪರಿಶೀಲನೆ ನಡೆಸಲು ಸಚಿವರಾದ ಮಧು ಬಂಗಾರಪ್ಪ, ಎಂಸಿ ಸುಧಾಕರ್, ಶಾಸಕರಾದ ಬೇಳೂರು ಗೋಪಾಲಕೃಷ್ಣ ಬಂದಿದ್ದೇವೆ. ಸಚಿವರಾದ ಮಧು ಬಂಗಾರಪ್ಪ ಕಾರ್ಯಕ್ರಮದ ನೇತೃತ್ವ ವಹಿಸಿಕೊಂಡಿದ್ದಾರೆ ಎಂದು ಹೇಳಿದರು.
ಮಂಗಳವಾರದವರೆಗೆ ಸುಮಾರು 25 ಸಾವಿರ ಮಂದಿ ನೊಂದಣಿ ಮಾಡಿದ್ದು, ಇನ್ನೂ ಮುಂದುವರೆಯಲಿದೆ ಎಂದು ಹೇಳಿದರು ಅಲ್ಲದೆ ಯೋಜನೆಯ ಚಾಲನೆಯ ದಿನದಂದೇ ಡಿಪ್ಲೊಮಾ ಹಾಗೂ ಪದವೀಧರರಿಗೆ ನೇರವಾಗಿ ಹಣ ಹಾಕುತ್ತೆವೆ ಎಂದು ಹೇಳಿದರು.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…