Featured

ರಾಜ್ಯ ಸರಕಾರ ಮೊಗವೀರ ಸಮಾಜವನ್ನು ಕಡೆಗಣಿಸಿಲ್ಲ : ಕಿರಣ್ ಕುಮಾ‌ರ್ ಉದ್ಯಾವರ – vishwanews24

ರಾಜ್ಯ ಸರಕಾರ ಮೊಗವೀರ ಸಮಾಜವನ್ನು ಕಡೆಗಣಿಸಿಲ್ಲ-ಕಿರಣ್ ಕುಮಾ‌ರ್ ಉದ್ಯಾವರ

ಕರ್ನಾಟಕ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷವು ಯಾವತ್ತೂ ಹಿಂದುಳಿದ ಶ್ರಮಜೀವಿಗಳಾದ ಮೊಗವೀರ ಸಮಾಜವನ್ನು ಕಡೆಗಣಿಸಿಲ್ಲ. ಕಾಂಗ್ರೆಸ್ ಸರಕಾರ ಇದ್ದ ಪ್ರತಿ ಸಂದರ್ಭದಲ್ಲೂ ನಮ್ಮ ಸಮಾಜದ ಅಭಿವೃದ್ಧಿಗಾಗಿ ಕೈಗೊಂಡ ಜನಪರ ಕಾರ್ಯಕ್ರಮ ನಮ್ಮ ಮುಂದೆ ಇದೆ ಎಂದು ಮೊಗವೀರ ಸಮುದಾಯದ ಯುವ ಮುಖಂಡ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಶ್ರೀ ಕಿರಣ್ ಕುಮಾರ್ ಉದ್ಯಾವರ ಹೇಳಿದ್ದಾರೆ.

ಜಿಲ್ಲೆಯಾದ್ಯಂತ ಮತ್ತು ಕಾಪು ಕ್ಷೇತ್ರದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮೊಗವೀರ ಬಾಂಧವರಿದ್ದು, ಇದೇ ಸರಕಾರದಲ್ಲಿ ಈ ಹಿಂದೆ ಕಾಪು ಶ್ರೀ ಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯು ಅಸ್ತಿತ್ವಕ್ಕೆ ಬಂದಾಗ ಮೊಗವೀರ ಸಮಾಜಕ್ಕೆ ಪ್ರಾತಿನಿಧ್ಯ ಸಿಗಬೇಕೆಂಬ ನಿಟ್ಟಿನಲ್ಲಿ ಸಮಾಜದ ಮುಖಂಡರುಗಳ ಅಭಿಪ್ರಾಯದಂತೆ ಶ್ರೀಧರ್ ಕಾಂಚನ್‌ರವರನ್ನು ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ನೇಮಕ ಮಾಡಿ, ಆದೇಶ ನೀಡಿದ್ದು ಎಲ್ಲಾ ಸಮಾಜ ಬಾಂಧವರಿಗೂ ತಿಳಿದ ವಿಚಾರವಾಗಿರುತ್ತದೆ. ತದನಂತರ ಶ್ರೀಧರ್ ಕಾಂಚನ್‌ರವರು ಅನಾರೋಗ್ಯದಿಂದ ದೈವಾಧೀನರಾಗಿದ್ದು, ಪ್ರಸ್ತುತ ತೆರವಾದ ಸ್ಥಾನಕ್ಕೆ ಮೊಗವೀರ ಸಮಾಜದ ಸದಸ್ಯರನ್ನು ನಾಮ ನಿರ್ದೇಶನ ಮಾಡಬೇಕಿತ್ತು. ಇದು ನ್ಯಾಯಸಮ್ಮತವಾದ ವಿಚಾರವಾಗಿದೆ. ಹೊಸ ಮಾರಿಗುಡಿಯ ಜೀರ್ಣೋದ್ಧಾರದ ಕಾರ್ಯಕ್ರಮದಲ್ಲಿ ನಮ್ಮ ಸಮಾಜ ಬಾಂಧವರು ಸಕ್ರಿಯವಾಗಿ ಭಾಗವಹಿಸುವುದರ ಜೊತೆಗೆ ದೊಡ್ಡ ಮೊತ್ತದ ದೇಣಿಗೆಯನ್ನು ನೀಡಿರುತ್ತೇವೆ. ಆದರೆ ಕೆಲವು ಸ್ಥಾಪಿತ ಹಿತಾಸಕ್ತಿಗಳು ತರಾತುರಿಯಲ್ಲಿ ಆಡಳಿತ ಪಕ್ಷದ ಓರ್ವ ವಿಧಾನ ಪರಿಷತ್ ಸದಸ್ಯ  ಮೊಗವೀರ ಸಮಾಜದವರಿಗೆ ಸಿಗುವ ಸದಸ್ಯತ್ವವನ್ನು ವಂಚಿಸಿದ ಬಗ್ಗೆ ಇಡೀ ಮೊಗವೀರ ಸಮಾಜವು ಖಂಡಿಸುತ್ತದೆ. ಹೊಸ ಮಾರಿಗುಡಿ ದೇವಸ್ಥಾನವು ಸರಕಾರದ ಮುಜರಾಯಿ ಇಲಾಖೆಗೆ ಒಳಪಟ್ಟಿದ್ದು ಇದು ಯಾರ ಆಸ್ತಿಯು ಅಲ್ಲ ಎನ್ನುವುದು ಸದಸ್ಯತನಕ್ಕೆ ಕುಮ್ಮಕ್ಕು ನೀಡಿದ ಜನಪ್ರತಿನಿಧಿಗೂ ಹಾಗೂ ಸದಸ್ಯತನ ಆದವರು ತಿಳಿಯುವುದು ಒಳಿತು. ಇದನ್ನು ಸರಿಪಡಿಸಿ ಮೊಗವೀರ ಸಮಾಜಕ್ಕೆ ಅವಕಾಶವನ್ನು ನೀಡಬೇಕಾದುದು ಇವರ ಕರ್ತವ್ಯ. ಅವಕಾಶ ನೀಡದಿದ್ದಲ್ಲಿ ಮುಂದಿನ ಹೋರಾಟವು ಅನಿವಾರ್ಯ ಎಂದು ತಿಳಿಸಿದ್ದಾರೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

10 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

11 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

11 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

11 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

11 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago