Featured

ರಾಜ್ಯ ಸರಕಾರ ಮೊಗವೀರ ಸಮಾಜವನ್ನು ಕಡೆಗಣಿಸಿಲ್ಲ : ಕಿರಣ್ ಕುಮಾ‌ರ್ ಉದ್ಯಾವರ – vishwanews24

ರಾಜ್ಯ ಸರಕಾರ ಮೊಗವೀರ ಸಮಾಜವನ್ನು ಕಡೆಗಣಿಸಿಲ್ಲ-ಕಿರಣ್ ಕುಮಾ‌ರ್ ಉದ್ಯಾವರ

ಕರ್ನಾಟಕ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷವು ಯಾವತ್ತೂ ಹಿಂದುಳಿದ ಶ್ರಮಜೀವಿಗಳಾದ ಮೊಗವೀರ ಸಮಾಜವನ್ನು ಕಡೆಗಣಿಸಿಲ್ಲ. ಕಾಂಗ್ರೆಸ್ ಸರಕಾರ ಇದ್ದ ಪ್ರತಿ ಸಂದರ್ಭದಲ್ಲೂ ನಮ್ಮ ಸಮಾಜದ ಅಭಿವೃದ್ಧಿಗಾಗಿ ಕೈಗೊಂಡ ಜನಪರ ಕಾರ್ಯಕ್ರಮ ನಮ್ಮ ಮುಂದೆ ಇದೆ ಎಂದು ಮೊಗವೀರ ಸಮುದಾಯದ ಯುವ ಮುಖಂಡ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಶ್ರೀ ಕಿರಣ್ ಕುಮಾರ್ ಉದ್ಯಾವರ ಹೇಳಿದ್ದಾರೆ.

ಜಿಲ್ಲೆಯಾದ್ಯಂತ ಮತ್ತು ಕಾಪು ಕ್ಷೇತ್ರದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮೊಗವೀರ ಬಾಂಧವರಿದ್ದು, ಇದೇ ಸರಕಾರದಲ್ಲಿ ಈ ಹಿಂದೆ ಕಾಪು ಶ್ರೀ ಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯು ಅಸ್ತಿತ್ವಕ್ಕೆ ಬಂದಾಗ ಮೊಗವೀರ ಸಮಾಜಕ್ಕೆ ಪ್ರಾತಿನಿಧ್ಯ ಸಿಗಬೇಕೆಂಬ ನಿಟ್ಟಿನಲ್ಲಿ ಸಮಾಜದ ಮುಖಂಡರುಗಳ ಅಭಿಪ್ರಾಯದಂತೆ ಶ್ರೀಧರ್ ಕಾಂಚನ್‌ರವರನ್ನು ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ನೇಮಕ ಮಾಡಿ, ಆದೇಶ ನೀಡಿದ್ದು ಎಲ್ಲಾ ಸಮಾಜ ಬಾಂಧವರಿಗೂ ತಿಳಿದ ವಿಚಾರವಾಗಿರುತ್ತದೆ. ತದನಂತರ ಶ್ರೀಧರ್ ಕಾಂಚನ್‌ರವರು ಅನಾರೋಗ್ಯದಿಂದ ದೈವಾಧೀನರಾಗಿದ್ದು, ಪ್ರಸ್ತುತ ತೆರವಾದ ಸ್ಥಾನಕ್ಕೆ ಮೊಗವೀರ ಸಮಾಜದ ಸದಸ್ಯರನ್ನು ನಾಮ ನಿರ್ದೇಶನ ಮಾಡಬೇಕಿತ್ತು. ಇದು ನ್ಯಾಯಸಮ್ಮತವಾದ ವಿಚಾರವಾಗಿದೆ. ಹೊಸ ಮಾರಿಗುಡಿಯ ಜೀರ್ಣೋದ್ಧಾರದ ಕಾರ್ಯಕ್ರಮದಲ್ಲಿ ನಮ್ಮ ಸಮಾಜ ಬಾಂಧವರು ಸಕ್ರಿಯವಾಗಿ ಭಾಗವಹಿಸುವುದರ ಜೊತೆಗೆ ದೊಡ್ಡ ಮೊತ್ತದ ದೇಣಿಗೆಯನ್ನು ನೀಡಿರುತ್ತೇವೆ. ಆದರೆ ಕೆಲವು ಸ್ಥಾಪಿತ ಹಿತಾಸಕ್ತಿಗಳು ತರಾತುರಿಯಲ್ಲಿ ಆಡಳಿತ ಪಕ್ಷದ ಓರ್ವ ವಿಧಾನ ಪರಿಷತ್ ಸದಸ್ಯ  ಮೊಗವೀರ ಸಮಾಜದವರಿಗೆ ಸಿಗುವ ಸದಸ್ಯತ್ವವನ್ನು ವಂಚಿಸಿದ ಬಗ್ಗೆ ಇಡೀ ಮೊಗವೀರ ಸಮಾಜವು ಖಂಡಿಸುತ್ತದೆ. ಹೊಸ ಮಾರಿಗುಡಿ ದೇವಸ್ಥಾನವು ಸರಕಾರದ ಮುಜರಾಯಿ ಇಲಾಖೆಗೆ ಒಳಪಟ್ಟಿದ್ದು ಇದು ಯಾರ ಆಸ್ತಿಯು ಅಲ್ಲ ಎನ್ನುವುದು ಸದಸ್ಯತನಕ್ಕೆ ಕುಮ್ಮಕ್ಕು ನೀಡಿದ ಜನಪ್ರತಿನಿಧಿಗೂ ಹಾಗೂ ಸದಸ್ಯತನ ಆದವರು ತಿಳಿಯುವುದು ಒಳಿತು. ಇದನ್ನು ಸರಿಪಡಿಸಿ ಮೊಗವೀರ ಸಮಾಜಕ್ಕೆ ಅವಕಾಶವನ್ನು ನೀಡಬೇಕಾದುದು ಇವರ ಕರ್ತವ್ಯ. ಅವಕಾಶ ನೀಡದಿದ್ದಲ್ಲಿ ಮುಂದಿನ ಹೋರಾಟವು ಅನಿವಾರ್ಯ ಎಂದು ತಿಳಿಸಿದ್ದಾರೆ.

Vishwa News 24

Recent Posts

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

3 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

3 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

3 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

3 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

4 hours ago

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ – vishwanews24

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…

4 hours ago