ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ಹತ್ಯೆಗಳು ನಡೆದಿದ್ದು, ಕೊಲೆಗೀಡಾದ ಯುವಕರ ತಾಯಂದಿರ ನೋವು ಒಂದೇ ಆಗಿದೆ. ಆದರೆ ರಾಜ್ಯದ ಮುಖ್ಯಮಂತ್ರಿ ಹಾಗೂ ಸರಕಾರದ ಜನಪ್ರತಿನಿಧಿಗಳು ಕೇವಲ ಒಂದು ಕುಟುಂಬವನ್ನು ಭೇಟಿ ನೀಡಿ ಸಾಂತ್ವಾನ ಹೇಳಿ ಪರಿಹಾರ ನೀಡಿದ್ದು, ಸರಕಾರದ ತಾರತಮ್ಯ ನೀತಿ ಬಗ್ಗೆ ಕಾಂಗ್ರೆಸ್ನಿಂದ ಕಾನೂನು ಹೋರಾಟ ಮಾಡುವುದಾಗಿ ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ.
ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರೋ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಕಳೆದ ಹತ್ತು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳು ಆತಂಕಕಾರಿಯಾಗಿದ್ದು, ರಾಜ್ಯ ಸರಕಾರಕ್ಕೆ ನಿಜವಾಗಿಯೂ ಕೋಮು ಸಂಘರ್ಷ ನಿಯಂತ್ರಣ ತರಬೇಕೆಂಬ ಇಚ್ಛೆಯಿದ್ದರೆ ಸುಗ್ರೀವಾಜ್ಞೆ ಮೂಲಕ ಕೋಮುಗಲಭೆ ನಿಯಂತ್ರಣ ಕಾಯಿದೆ ತರಲಿ ಎಂದು ಹೇಳಿದರು.
ರಾಜ್ಯ ಸರಕಾರ ಲವ್ ಜಿಹಾದ್, ಕೃಷಿ ಕಾಯಿದೆ ಸೇರಿದಂತೆ ನಾನಾ ಕಾಯಿದೆಗಳ ಬಗ್ಗೆ ವಿಶೇಷ ಆಸಕ್ತಿ ಹೊಂದಿದೆ. ಈ ರಾಜ್ಯದಲ್ಲಿ ಪರಸ್ಪರ ಸಾಮರಸ್ಯ ಬದುಕು ಅಗತ್ಯವಾಗಿದ್ದು, ಕೋಮು ಸಂಘರ್ಷವನ್ನು ನಿಯಂತ್ರಣ ಅನಿವಾರ್ಯತೆಯಿದೆ. ಕೋಮು ಗಲಭೆಗಳ ಆರೋಪಿಗಳಿಗೆ ಸಂಬಂಧಿಸಿ ಬುಲ್ಡೋಜರ್, ಎನ್ಕೌಂಟರ್, ಆಸ್ತಿ ಮುಟ್ಟುಗೋಲು ಎಂಬಿತ್ಯಾದಿ ಹೇಳಿಕೆಗಳನ್ನು ನೀಡುವ ಜವಾಬ್ಧಾರಿಯುತ ಸ್ಥಾನದಲ್ಲಿರುವ ಸಚಿವರು, ಶಾಸಕರು ಅದನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಿ. ಅದು ಬಿಟ್ಟು ಕೇವಲ ಹೇಳಿಕೆಗಳನ್ನು ನೀಡಿ ಜನರನ್ನು ದಿಕ್ಕು ತಪ್ಪಿಸುವುದು ಯಾಕೆ. ಈ ಕುರಿತಾದ ಕಾಯ್ದೆ ಜಾರಿಗೊಳಿಸಲಿ. ಈ ಜಿಲ್ಲೆಯ ಅಭಿವೃದ್ಧಿ, ಸುರಕ್ಷತೆ ದೃಷ್ಟಿಯಿಂದ ಆ ಕಾಯಿದೆಯ ಅಗತ್ಯವಿದೆ ಎಂದರು.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…