Featured

ರಾಜ್ಯ ಸರಕಾರ ಲವ್ ಜಿಹಾದ್, ಕೃಷಿ ಕಾಯಿದೆ ಸೇರಿದಂತೆ ನಾನಾ ಕಾಯಿದೆಗಳ ಬಗ್ಗೆ ವಿಶೇಷ ಆಸಕ್ತಿ ಹೊಂದಿದೆ.. : ಯುಟಿ ಖಾದರ್‌

ಕೊಲೆಗೀಡಾದ ಎಲ್ಲ ಯುವಕರ ತಾಯಂದಿರ ನೋವು ಒಂದೇ ಆಗಿದೆ..

ಕೋಮು ಸಂಘರ್ಷ ನಿಯಂತ್ರಣ ತರಬೇಕೆಂಬ ಇಚ್ಛೆಯಿದ್ದರೆ ಸುಗ್ರೀವಾಜ್ಞೆ ಮೂಲಕ ಕಾಯಿದೆ ತರಲಿ..

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ಹತ್ಯೆಗಳು ನಡೆದಿದ್ದು, ಕೊಲೆಗೀಡಾದ ಯುವಕರ ತಾಯಂದಿರ ನೋವು ಒಂದೇ ಆಗಿದೆ. ಆದರೆ ರಾಜ್ಯದ ಮುಖ್ಯಮಂತ್ರಿ ಹಾಗೂ ಸರಕಾರದ ಜನಪ್ರತಿನಿಧಿಗಳು ಕೇವಲ ಒಂದು ಕುಟುಂಬವನ್ನು ಭೇಟಿ ನೀಡಿ ಸಾಂತ್ವಾನ ಹೇಳಿ ಪರಿಹಾರ ನೀಡಿದ್ದು, ಸರಕಾರದ ತಾರತಮ್ಯ ನೀತಿ ಬಗ್ಗೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಮಾಡುವುದಾಗಿ ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ.

ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರೋ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಕಳೆದ ಹತ್ತು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳು ಆತಂಕಕಾರಿಯಾಗಿದ್ದು, ರಾಜ್ಯ ಸರಕಾರಕ್ಕೆ ನಿಜವಾಗಿಯೂ ಕೋಮು ಸಂಘರ್ಷ ನಿಯಂತ್ರಣ ತರಬೇಕೆಂಬ ಇಚ್ಛೆಯಿದ್ದರೆ ಸುಗ್ರೀವಾಜ್ಞೆ ಮೂಲಕ ಕೋಮುಗಲಭೆ ನಿಯಂತ್ರಣ ಕಾಯಿದೆ ತರಲಿ ಎಂದು ಹೇಳಿದರು.

ರಾಜ್ಯ ಸರಕಾರ ಲವ್ ಜಿಹಾದ್, ಕೃಷಿ ಕಾಯಿದೆ ಸೇರಿದಂತೆ ನಾನಾ ಕಾಯಿದೆಗಳ ಬಗ್ಗೆ ವಿಶೇಷ ಆಸಕ್ತಿ ಹೊಂದಿದೆ. ಈ ರಾಜ್ಯದಲ್ಲಿ ಪರಸ್ಪರ ಸಾಮರಸ್ಯ ಬದುಕು ಅಗತ್ಯವಾಗಿದ್ದು, ಕೋಮು ಸಂಘರ್ಷವನ್ನು ನಿಯಂತ್ರಣ ಅನಿವಾರ್ಯತೆಯಿದೆ. ಕೋಮು ಗಲಭೆಗಳ ಆರೋಪಿಗಳಿಗೆ ಸಂಬಂಧಿಸಿ ಬುಲ್ಡೋಜರ್, ಎನ್‌ಕೌಂಟರ್, ಆಸ್ತಿ ಮುಟ್ಟುಗೋಲು ಎಂಬಿತ್ಯಾದಿ ಹೇಳಿಕೆಗಳನ್ನು ನೀಡುವ ಜವಾಬ್ಧಾರಿಯುತ ಸ್ಥಾನದಲ್ಲಿರುವ ಸಚಿವರು, ಶಾಸಕರು ಅದನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಿ. ಅದು ಬಿಟ್ಟು ಕೇವಲ ಹೇಳಿಕೆಗಳನ್ನು ನೀಡಿ ಜನರನ್ನು ದಿಕ್ಕು ತಪ್ಪಿಸುವುದು ಯಾಕೆ. ಈ ಕುರಿತಾದ ಕಾಯ್ದೆ ಜಾರಿಗೊಳಿಸಲಿ. ಈ ಜಿಲ್ಲೆಯ ಅಭಿವೃದ್ಧಿ, ಸುರಕ್ಷತೆ ದೃಷ್ಟಿಯಿಂದ ಆ ಕಾಯಿದೆಯ ಅಗತ್ಯವಿದೆ ಎಂದರು.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

54 minutes ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

1 hour ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

1 hour ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

4 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

5 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

5 hours ago