ಬೆಂಗಳೂರು; ರಾಜ್ಯ ಸರ್ಕಾರ ಕಡಿಮೆ ದರದಲ್ಲಿ ಜಿಂದಾಲ್ ಕಂಪೆನಿಗೆ 3,666 ಎಕರೆ ಭೂಮಿ ಪರಭಾರೆ ಮಾಡಿರುವ ವಿಚಾರವನ್ನು ವಿರೋಧಿಸಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಶುಕ್ರವಾರದಿಂದ ಆರಂಭವಾಗಿರುವ ಆಹೋರಾತ್ರಿ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಮಾಧ್ಯಮ ಜತೆ ಮಾತನಾಡಿರುವ ಯಡಿಯೂರಪ್ಪ, “ಈ ಮೈತ್ರಿ ಸರ್ಕಾರದಲ್ಲಿ ಯಾವುದೂ ಸರಿಯಿಲ್ಲ. ಇದೇ ಕಾರಣಕ್ಕೆ ಒಂದೆಡೆ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ರಾಜೀನಾಮೆ ಕೊಟ್ಟ ಬೆನ್ನಿಗೆ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸಹ ರಾಜೀನಾಮೆ ನೀಡಿದ್ದಾರೆ. ಇದು ಒಂದು ರೀತಿಯ ರಾಜೀನಾಮೆ ಪರ್ವವಾಗಿದ್ದು, ಜಿಂದಾಲ್ ಕಂಪೆನಿಗೆ ಅಕ್ರಮವಾಗಿ ಭೂಮಿ ಪರಭಾರೆ ಮಾಡಲಾಗಿದೆ. ಇದರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕೈವಾಡವೂ ಇದೆ. ಈ ವಿಚಾರವಾಗಿಯೂ ಶೀಘ್ರದಲ್ಲಿ ಮತ್ತಷ್ಟು ನಾಯಕರ ತಲೆದಂಡವಾಗಲಿದೆ” ಎಂದು ತಿಳಿಸಿದ್ದಾರೆ.
ಏನಿದು ಜಿಂದಾಲ್ ಪ್ರಕರಣ?
ಬಳ್ಳಾರಿಯ ಸಂಡೂರು ತಾಲೂಕಿನ ತೋರಣಗಲ್ ಪ್ರದೇಶದಲ್ಲಿ ಒಟ್ಟಾರೆ 3,666 ಎಕರೆ ಜಮೀನನ್ನು ಜಿಂದಾಲ್ ಉಕ್ಕು ಸಂಸ್ಥೆಗೆ ತೀರಾ ಕಡಿಮೆ ಬೆಲೆಗೆ ಮಾರಾಟ ಮಾಡಲಾಗಿದೆ ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಅವರು ಕೆಲ ದಿನಗಳ ಹಿಂದೆ ಆರೋಪಿಸಿದ್ದರು.
ಸರಕಾರಕ್ಕೆ 2 ಸಾವಿರ ಕೋಟಿಯಷ್ಟು ಹಣ ಬಾಕಿ ಉಳಿಸಿಕೊಂಡಿರುವ ಜಿಂದಾಲ್ನಂತಹ ಸಂಸ್ಥೆಗೆ ಇಷ್ಟು ಕಡಿಮೆ ಬೆಲೆಗೆ ಭೂಮಿ ಮಾರಾಟ ಮಾಡುವ ಅವಶ್ಯಕತೆ ಏನು? ಹಾಗೆಯೇ, ಜಿಂದಾಲ್ ಸಂಸ್ಥೆ ವಿರುದ್ಧ ಅಕ್ರಮ ಗಣಿಗಾರಿಕೆಯ ಆರೋಪವೂ ಇದೆ. ಇಂಥ ಕಂಪನಿಗೆ ವಿನಾಯಿತಿ ನೀಡುವ ಔಚಿತ್ಯವೇನು ಎಂಬುದು ಹೆಚ್.ಕೆ. ಪಾಟೀಲ್ ಪ್ರಶ್ನಿಸಿದ್ದರು.
ಹೆಚ್.ಕೆ. ಪಾಟೀಲ್ ಪ್ರಶ್ನೆಯಿಂದಾಗಿ ಮುನ್ನಲೆಗೆ ಬಂದ ಈ ವಿಚಾರವನ್ನು ನಂತರ ಬಿಜೆಪಿ ಹೋರಾಟವಾಗಿ ರೂಪಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ “ಜಿಂದಾಲ್ ಸಂಸ್ಥೆಗೆ ಕಡಿಮೆ ಬೆಲೆಗೆ ಭೂಮಿ ಮಾರಾಟ ಮಾಡಿರುವ ಕ್ರಮ ಸರಿಯಲ್ಲ. ಸಚಿವ ಸಂಪುಟದ ಒಪ್ಪಿಗೆಯನ್ನೂ ಪಡೆಯದೆಯೇ ಮಾರಾಟವಾಗಿರುವುದು ಬೆಳಕಿಗೆ ಬಂದಿದೆ. ಸಿದ್ದರಾಮಯ್ಯ ಸಿಎಂ ಆದ ಅವಧಿಯಲ್ಲೇ ಇದು ನಡೆದಿದೆ. ಇದೇ ಕಾರಣಕ್ಕೆ ಸಿದ್ದರಾಮಯ್ಯ ಅವರು ಜಿಂದಾಲ್ ಪ್ರಕರಣದ ಬಗ್ಗೆ ಏನೂ ಮಾತನಾಡುತ್ತಿಲ್ಲ. ಸೇಡಂನಲ್ಲಿ 1,700 ಎಕರೆ ಭೂಮಿ ನೀಡುವುದರ ಹಿಂದೆ ಸಿದ್ದರಾಮಯ್ಯ ಕೈವಾಡ ಏನು ಎಂಬುದು ಗೊತ್ತಾಗಬೇಕು? ಎಂದು ಒತ್ತಾಯಿಸಿ ಆಹೋರಾತ್ರಿ ಧರಣಿಗೆ ಮುಂದಾಗಿದ್ದಾರೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]