Featured

ರಾಜ್ಯ ಸರ್ಕಾರದಿಂದ ಐಎಎಸ್, ಐಪಿಎಸ್ ಅಧಿಕಾರಿಗಳ ರಾತ್ರೋ ರಾತ್ರಿ ದಿಢೀರ್ ವರ್ಗಾವಣೆಗೆ ಆದೇಶ – Vishwanews24

ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಹಲವು ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳನ್ನು ರಾತ್ರೋ ರಾತ್ರಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ತುಷಾರ್ ಗಿರಿನಾಥ್  ಅವರನ್ನು ಬೆಳಗಾವಿ ವಲಯ ಪ್ರಾದೇಶಿಕ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಜತೆಗೆ  ಬಿಡಬ್ಲ್ಯುಎಸ್ಎಸ್ ಬಿ ಅಧ್ಯಕ್ಷರಾಗಿಯೂ ತುಷಾರ್ ಗಿರಿನಾಥ್ ಮುಂದುವರಿಯಲಿದ್ದಾರೆ. ಎಸ್.ಬಿ.ಶೆಟ್ಟಣ್ಣನವರ್ ಅವರನ್ನು ಮೈಸೂರು ಪೇಪರ್ ಮಿಲ್ಸ್ ಲಿಮಿಟೆಡ್ ಎಂಡಿಯಾಗಿ ನೇಮಕ ಮಾಡಲಾಗಿದೆ.

ಡಾ.ಬಗದಿ ಗೌತಮ್ – ಚಿಕ್ಕಮಗಳೂರು ಜಿಲ್ಲಾಧಿಕಾರಿ, ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಎಸ್ ಎಸ್ ನಕುಲ್- ಐಟಿ, ಬಿಟಿ ಬೆಂಗಳೂರು ನಿರ್ದೇಶಕರು, ಎಂ.ಕೆ.ಶ್ರೀರಂಗಯ್ಯ-ಆಯುಕ್ತ, ಉದ್ಯಮಶೀಲತೆ ಮತ್ತು ಜೀವನೋಪಾಯ ವಿಭಾಗ, ಜಿ.ಎನ್.ಶಿವಮೂರ್ತಿ-ದಾವಣಗೆರೆ ಜಿಲ್ಲಾಧಿಕಾರಿ, ಎಸ್.ಅಶ್ವಥಿ- ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಸಿಇಒ, ಜಿಆರ್ ಜೆ ದಿವ್ಯ ಪ್ರಭು- ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರ ಆಯುಕ್ತ, ಎಚ್.ಬಸವರಾಜೇಂದ್ರ, ದಾವಣಗೆರೆ ಜಿಲ್ಲಾ ಪಂಚಾಯತ್ ಸಿಇಒ, ಜಿಸಿ ವೃಷಭೇಂದ್ರ ಮೂರ್ತಿ- ನಿರ್ದೇಶಕರು, ಎಂಎಸ್‌ಎಂಇ- ಅತಿ ಸಣ್ಣ, ಸಣ್ಣ ಹಾಗೂ ಮಧ್ಯಮ ಕೈಗಾರಿಕೋದ್ಯಮಕ್ಕೆ ನಿರ್ದೇಶಕ, ಡಾ.ಕೆ.ಹರೀಶ್ ಕುಮಾರ್-ಉತ್ತರ ಕನ್ನಡ ಜಿಲ್ಲಾಧಿಕಾರಿ, ಪಾಟೀಲ್ ಯಲಗೌಡ-ಶಿವನಗೌಡ-ವಿಜಯಪುರ ಡಿಸಿ, ಸಿ.ಸತ್ಯಭಾಮ – ಮರಾಜನಗರ ಜಿಲ್ಲಾ ಪಂಚಾಯತ್ ಸಿಇಒ, ಡಾ.ಕೆ.ಎನ್.ವಿಜಯ್ ಪ್ರಕಾಶ್ – ಹಾಸನ ಜಿಲ್ಲಾ ಪಂಚಾಯತ್ ಸಿಇಒ, ಕೆಎಎಸ್ ಅಧಿಕಾರಿ ಜಹೀರಾ ನಸೀಮಾ – ಕಲಬುರಗಿ ಕೆಇಆರ್ ಟಿಸಿ ನಿರ್ದೇಶಕಿಯಾಗಿ ವರ್ಗಾವಣೆಗೊಂಡಿದ್ದಾರೆ.
ಬೆಂಗಳೂರು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತ, ಚಿಕ್ಕಮಗಳೂರು ಎಸ್ಪಿ ಸೇರಿದಂತೆ ಆರು ಐಪಿಎಸ್‌ ಅಧಿಕಾರಿಗಳನ್ನು ಸಹ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಅಣ್ಣಾಮಲೈ ಅವರು ಬೆಂಗಳೂರು ನಗರ ದಕ್ಷಿಣ ವಿಭಾಗಕ್ಕೆ ಬಂದಿದ್ದು, ಅವರಿಂದ ತೆರವಾದ ಹುದ್ದೆಗೆ ಸಿಐಡಿಯಲ್ಲಿದ್ದ ಪ್ರರ್ತಕರ್ತೆ ಗೌರಿ ಲಂಕೇಶ್‌ ಕೊಲೆ ಪ್ರಕರಣದ ಸಹಾಯಕ ತನಿಖಾಧಿಕಾರಿ ಹರೀಶ್‌ ಪಾಂಡೆ ವರ್ಗಾವಣೆಗೊಂಡಿದ್ದಾರೆ. ಸಿಸಿಬಿ ಡಿಸಿಪಿ ಜಿನೇಂದ್ರ ಖಣಗಾವಿ ಅವರಿಗೆ ಚನ್ನಪಟ್ಟಣ ಪೊಲೀಸ್‌ ತರಬೇತಿ ಶಾಲೆ ಪ್ರಾಂಶುಪಾಲ ಹುದ್ದೆ ನೀಡಲಾಗಿದೆ.ಹಾಸನದಿಂದ ಎತ್ತಂಗಡಿಗೊಂಡಿದ್ದ ರಾಹುಲ್‌ ಕುಮಾರ್‌ ಶಹಾಪುರವಾಡ್‌ ಅವರಿಗೆ ಬೆಂಗಳೂರು ಪೂರ್ವ ವಿಭಾಗದ ಹೊಣೆಗಾರಿಕೆ ಕೊಡಲಾಗಿದೆ. ಆ ಹುದ್ದೆಯಲ್ಲಿದ್ದ ಅಜಯ್‌ ಹಿಲೋರಿ ಕೆಎಸ್‌ಆರ್‌ಪಿ ಕಾಮಾಂಡೆಟ್‌ ಆಗಿ ನೇಮಕಗೊಂಡಿದ್ದಾರೆ.

Vishwa News 24

Recent Posts

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

2 days ago

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

2 days ago

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

2 days ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

2 days ago

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…

2 days ago

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ -Vishwanews24

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…

2 days ago