ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಹಲವು ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳನ್ನು ರಾತ್ರೋ ರಾತ್ರಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ತುಷಾರ್ ಗಿರಿನಾಥ್ ಅವರನ್ನು ಬೆಳಗಾವಿ ವಲಯ ಪ್ರಾದೇಶಿಕ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಜತೆಗೆ ಬಿಡಬ್ಲ್ಯುಎಸ್ಎಸ್ ಬಿ ಅಧ್ಯಕ್ಷರಾಗಿಯೂ ತುಷಾರ್ ಗಿರಿನಾಥ್ ಮುಂದುವರಿಯಲಿದ್ದಾರೆ. ಎಸ್.ಬಿ.ಶೆಟ್ಟಣ್ಣನವರ್ ಅವರನ್ನು ಮೈಸೂರು ಪೇಪರ್ ಮಿಲ್ಸ್ ಲಿಮಿಟೆಡ್ ಎಂಡಿಯಾಗಿ ನೇಮಕ ಮಾಡಲಾಗಿದೆ.
ಡಾ.ಬಗದಿ ಗೌತಮ್ – ಚಿಕ್ಕಮಗಳೂರು ಜಿಲ್ಲಾಧಿಕಾರಿ, ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಎಸ್ ಎಸ್ ನಕುಲ್- ಐಟಿ, ಬಿಟಿ ಬೆಂಗಳೂರು ನಿರ್ದೇಶಕರು, ಎಂ.ಕೆ.ಶ್ರೀರಂಗಯ್ಯ-ಆಯುಕ್ತ, ಉದ್ಯಮಶೀಲತೆ ಮತ್ತು ಜೀವನೋಪಾಯ ವಿಭಾಗ, ಜಿ.ಎನ್.ಶಿವಮೂರ್ತಿ-ದಾವಣಗೆರೆ ಜಿಲ್ಲಾಧಿಕಾರಿ, ಎಸ್.ಅಶ್ವಥಿ- ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಸಿಇಒ, ಜಿಆರ್ ಜೆ ದಿವ್ಯ ಪ್ರಭು- ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರ ಆಯುಕ್ತ, ಎಚ್.ಬಸವರಾಜೇಂದ್ರ, ದಾವಣಗೆರೆ ಜಿಲ್ಲಾ ಪಂಚಾಯತ್ ಸಿಇಒ, ಜಿಸಿ ವೃಷಭೇಂದ್ರ ಮೂರ್ತಿ- ನಿರ್ದೇಶಕರು, ಎಂಎಸ್ಎಂಇ- ಅತಿ ಸಣ್ಣ, ಸಣ್ಣ ಹಾಗೂ ಮಧ್ಯಮ ಕೈಗಾರಿಕೋದ್ಯಮಕ್ಕೆ ನಿರ್ದೇಶಕ, ಡಾ.ಕೆ.ಹರೀಶ್ ಕುಮಾರ್-ಉತ್ತರ ಕನ್ನಡ ಜಿಲ್ಲಾಧಿಕಾರಿ, ಪಾಟೀಲ್ ಯಲಗೌಡ-ಶಿವನಗೌಡ-ವಿಜಯಪುರ ಡಿಸಿ, ಸಿ.ಸತ್ಯಭಾಮ – ಮರಾಜನಗರ ಜಿಲ್ಲಾ ಪಂಚಾಯತ್ ಸಿಇಒ, ಡಾ.ಕೆ.ಎನ್.ವಿಜಯ್ ಪ್ರಕಾಶ್ – ಹಾಸನ ಜಿಲ್ಲಾ ಪಂಚಾಯತ್ ಸಿಇಒ, ಕೆಎಎಸ್ ಅಧಿಕಾರಿ ಜಹೀರಾ ನಸೀಮಾ – ಕಲಬುರಗಿ ಕೆಇಆರ್ ಟಿಸಿ ನಿರ್ದೇಶಕಿಯಾಗಿ ವರ್ಗಾವಣೆಗೊಂಡಿದ್ದಾರೆ.
ಬೆಂಗಳೂರು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ, ಚಿಕ್ಕಮಗಳೂರು ಎಸ್ಪಿ ಸೇರಿದಂತೆ ಆರು ಐಪಿಎಸ್ ಅಧಿಕಾರಿಗಳನ್ನು ಸಹ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಅಣ್ಣಾಮಲೈ ಅವರು ಬೆಂಗಳೂರು ನಗರ ದಕ್ಷಿಣ ವಿಭಾಗಕ್ಕೆ ಬಂದಿದ್ದು, ಅವರಿಂದ ತೆರವಾದ ಹುದ್ದೆಗೆ ಸಿಐಡಿಯಲ್ಲಿದ್ದ ಪ್ರರ್ತಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದ ಸಹಾಯಕ ತನಿಖಾಧಿಕಾರಿ ಹರೀಶ್ ಪಾಂಡೆ ವರ್ಗಾವಣೆಗೊಂಡಿದ್ದಾರೆ. ಸಿಸಿಬಿ ಡಿಸಿಪಿ ಜಿನೇಂದ್ರ ಖಣಗಾವಿ ಅವರಿಗೆ ಚನ್ನಪಟ್ಟಣ ಪೊಲೀಸ್ ತರಬೇತಿ ಶಾಲೆ ಪ್ರಾಂಶುಪಾಲ ಹುದ್ದೆ ನೀಡಲಾಗಿದೆ.ಹಾಸನದಿಂದ ಎತ್ತಂಗಡಿಗೊಂಡಿದ್ದ ರಾಹುಲ್ ಕುಮಾರ್ ಶಹಾಪುರವಾಡ್ ಅವರಿಗೆ ಬೆಂಗಳೂರು ಪೂರ್ವ ವಿಭಾಗದ ಹೊಣೆಗಾರಿಕೆ ಕೊಡಲಾಗಿದೆ. ಆ ಹುದ್ದೆಯಲ್ಲಿದ್ದ ಅಜಯ್ ಹಿಲೋರಿ ಕೆಎಸ್ಆರ್ಪಿ ಕಾಮಾಂಡೆಟ್ ಆಗಿ ನೇಮಕಗೊಂಡಿದ್ದಾರೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…