ರಾಜ್ಯ ಸರ್ಕಾರದಿಂದ ಕಂಬಳಕ್ಕೆ 1 ಕೋಟಿ ರೂ. ಸಹಾಯಧನ : ಡಿಕೆ.ಶಿವಕುಮಾರ್‌ – Vishwanews24

Featured, ರಾಜ್ಯ ನ್ಯೂಸ್

ರಾಜ್ಯ ಸರ್ಕಾರದಿಂದ ಕಂಬಳಕ್ಕೆ 1 ಕೋಟಿ ರೂ. ಸಹಾಯಧನ : ಡಿಕೆ.ಶಿವಕುಮಾರ್‌

ಬೆಂಗಳೂರು: 20 ಕಂಬಳಗಳಿಗೆ ತಲಾ 5 ಲಕ್ಷದಂತೆ 1 ಕೋಟಿ ರೂ ಸಹಾಯಧನವನ್ನು ಈ ಹಿಂದಿನಂತೆ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಬುಧವಾರ ಬೆಳಿಗ್ಗೆ ಬೆಂಗಳೂರು ಕಂಬಳ- ನಮ್ಮ ಕಂಬಳದ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ದೇಸಿ ಹಾಗೂ ಐತಿಹಾಸಿಕವಾದ ಕಂಬಳ ಕ್ರೀಡೆಗೆ ಹೆಚ್ಚಿನ ಸಹಕಾರ ನೀಡಲಾಗುವುದು ಎಂದರು. “ಕಂಬಳಕ್ಕೆ ಸಹಾಯಧನ ಬಿಡುಗಡೆ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಜತೆ ಚರ್ಚೆ ನಡೆಸಲಾಗುವುದು ಎಂದರು.

ನಮ್ಮ ಸಂಸ್ಕೃತಿಯನ್ನು ಉಳಿಸಿ, ಪರಿಚಯಿಸಬೇಕು ಎಂದು ಶಾಸಕ ಅಶೋಕ್ ರೈ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಜನರು ಒಂದಾಗಿರುವುದು ಸಂತೋಷದ ವಿಚಾರ ಎಂದರು.

ಅ.12ರಂದು(ನಾಳೆ) ಧ್ವನಿ ಮತ್ತು ಕಂಪನದೊಂದಿಗೆ ಕಂಪಿಸಲಿದೆ ನಿಮ್ಮ ಮೊಬೈಲ್, ಆತಂಕ ಪಡಬೇಕಾದ ಅಗತ್ಯವಿಲ್ಲ- Vishwanews24

ಉಳಿಪೆಟ್ಟು ಬೀಳದೆ ಯಾವುದೇ ಶಿಲೆ ಪ್ರತಿಮೆ ಆಗುವುದಿಲ್ಲ. ಭೂಮಿ ಉಳದೆ ಯಾವುದೇ ಬೆಳೆ ಬೆಳೆಯಲು ಆಗುವುದಿಲ್ಲ. ಅದರಂತೆ ಅರಮನೆ ಮೈದಾನದಲ್ಲಿ ಒಂದಷ್ಟು ಅಭಿವೃದ್ದಿ ಕೆಲಸಗಳನ್ನು ಈ ನೆಪದಲ್ಲಿ ಮಾಡಬೇಕು. ದಕ್ಷಿಣ ಕನ್ನಡ ಜಿಲ್ಲೆಯಿಂದ ಬಂದಂತಹ ಸದಾನಂದ ಗೌಡರು, ಹ್ಯಾರಿಸ್ ಅವರು ಬೆಂಗಳೂರಿನಲ್ಲಿ ನಾಯಕರಾಗಿ ಬೆಳೆದಿದ್ದಾರೆ ಎಂದು ಹೇಳಿದರು.

ದಕ್ಷಿಣ ಕನ್ನಡದ ಜನರು ಅವರ ಸಂಸ್ಕೃತಿ ಉಳಿಸಿಕೊಳ್ಳಲು ಬದ್ದತೆಯಿಂದ ಇಲ್ಲಿ ಸೇರಿದ್ದಾರೆ ನಮ್ಮ ಕಂಬಳ- ಬೆಂಗಳೂರು ಕಂಬಳಕ್ಕೆ ಹೆಚ್ಚಿನ ಪ್ರೋತ್ಸಾಹವನ್ನು ಸರ್ಕಾರ ನೀಡುತ್ತದೆ. ನಡೆ ಮುಂದೆ, ನಡೆ ಮುಂದೆ ನುಗ್ಗಿ ನಡೆ ಮುಂದೆ ಎಂದು ಮುನ್ನಡೆಯ ಬೇಕು. ಯಾವುದೇ ಅಡಚಣೆಗಳಿಗೆ ಕುಗ್ಗಬಾರದು ಎಂದರು.

ಉಡುಪಿ : ಮಹಿಷಾ ದಸರಾದಿಂದ ಹಿಂದುಗಳ ಭಾವನೆಗೆ ಧಕ್ಕೆಯಾಗುತ್ತದೆ : ಶೋಭಾ ಕರಂದ್ಲಾಜೆ – Vishwanews24

Leave a Reply