Featured

ರಾಜ್ಯ ಸರ್ಕಾರದಿಂದ ಕಂಬಳಕ್ಕೆ 1 ಕೋಟಿ ರೂ. ಸಹಾಯಧನ : ಡಿಕೆ.ಶಿವಕುಮಾರ್‌ – Vishwanews24

ರಾಜ್ಯ ಸರ್ಕಾರದಿಂದ ಕಂಬಳಕ್ಕೆ 1 ಕೋಟಿ ರೂ. ಸಹಾಯಧನ : ಡಿಕೆ.ಶಿವಕುಮಾರ್‌

ಬೆಂಗಳೂರು: 20 ಕಂಬಳಗಳಿಗೆ ತಲಾ 5 ಲಕ್ಷದಂತೆ 1 ಕೋಟಿ ರೂ ಸಹಾಯಧನವನ್ನು ಈ ಹಿಂದಿನಂತೆ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಬುಧವಾರ ಬೆಳಿಗ್ಗೆ ಬೆಂಗಳೂರು ಕಂಬಳ- ನಮ್ಮ ಕಂಬಳದ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ದೇಸಿ ಹಾಗೂ ಐತಿಹಾಸಿಕವಾದ ಕಂಬಳ ಕ್ರೀಡೆಗೆ ಹೆಚ್ಚಿನ ಸಹಕಾರ ನೀಡಲಾಗುವುದು ಎಂದರು. “ಕಂಬಳಕ್ಕೆ ಸಹಾಯಧನ ಬಿಡುಗಡೆ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಜತೆ ಚರ್ಚೆ ನಡೆಸಲಾಗುವುದು ಎಂದರು.

ನಮ್ಮ ಸಂಸ್ಕೃತಿಯನ್ನು ಉಳಿಸಿ, ಪರಿಚಯಿಸಬೇಕು ಎಂದು ಶಾಸಕ ಅಶೋಕ್ ರೈ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಜನರು ಒಂದಾಗಿರುವುದು ಸಂತೋಷದ ವಿಚಾರ ಎಂದರು.

ಉಳಿಪೆಟ್ಟು ಬೀಳದೆ ಯಾವುದೇ ಶಿಲೆ ಪ್ರತಿಮೆ ಆಗುವುದಿಲ್ಲ. ಭೂಮಿ ಉಳದೆ ಯಾವುದೇ ಬೆಳೆ ಬೆಳೆಯಲು ಆಗುವುದಿಲ್ಲ. ಅದರಂತೆ ಅರಮನೆ ಮೈದಾನದಲ್ಲಿ ಒಂದಷ್ಟು ಅಭಿವೃದ್ದಿ ಕೆಲಸಗಳನ್ನು ಈ ನೆಪದಲ್ಲಿ ಮಾಡಬೇಕು. ದಕ್ಷಿಣ ಕನ್ನಡ ಜಿಲ್ಲೆಯಿಂದ ಬಂದಂತಹ ಸದಾನಂದ ಗೌಡರು, ಹ್ಯಾರಿಸ್ ಅವರು ಬೆಂಗಳೂರಿನಲ್ಲಿ ನಾಯಕರಾಗಿ ಬೆಳೆದಿದ್ದಾರೆ ಎಂದು ಹೇಳಿದರು.

ದಕ್ಷಿಣ ಕನ್ನಡದ ಜನರು ಅವರ ಸಂಸ್ಕೃತಿ ಉಳಿಸಿಕೊಳ್ಳಲು ಬದ್ದತೆಯಿಂದ ಇಲ್ಲಿ ಸೇರಿದ್ದಾರೆ ನಮ್ಮ ಕಂಬಳ- ಬೆಂಗಳೂರು ಕಂಬಳಕ್ಕೆ ಹೆಚ್ಚಿನ ಪ್ರೋತ್ಸಾಹವನ್ನು ಸರ್ಕಾರ ನೀಡುತ್ತದೆ. ನಡೆ ಮುಂದೆ, ನಡೆ ಮುಂದೆ ನುಗ್ಗಿ ನಡೆ ಮುಂದೆ ಎಂದು ಮುನ್ನಡೆಯ ಬೇಕು. ಯಾವುದೇ ಅಡಚಣೆಗಳಿಗೆ ಕುಗ್ಗಬಾರದು ಎಂದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago