ಬೆಂಗಳೂರು : ಪರಿಶಿಷ್ಟ ಜಾತಿಯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ನೀಡಲಾಗುತ್ತಿದ್ದಂತ ನೆರವನ್ನು ರಾಜ್ಯ ಸರ್ಕಾರವು 1.70 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸೋ ನಿರ್ಧಾರವನ್ನು ಕೈಗೊಳ್ಳೋ ಮೂಲಕ, ಭರ್ಜರಿ ಗುಡ್ ನ್ಯೂಸ್ ನೀಡಿದೆ.
ಈ ಕುರಿತಂತೆ ಮಾಹಿತಿ ನೀಡಿದಂತ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು, ಈಗ ಪರಿಶಿಷ್ಟ ಜಾತಿಯ ಬಡ ಕುಟುಂಬದವರಿಗೆ ಮನೆ ಕಟ್ಟೋದಕ್ಕೆ ನೀಡಲಾಗುತ್ತಿರುವಂತ ನೆರವು 1.70 ಲಕ್ಷ ಯಾವುದಕ್ಕೂ ಸಾಧ್ಯವಾಗುತ್ತಿಲ್ಲ. ಹೀಗಾಗಿ ಈ ನೆರವನ್ನು 5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ತಿಳಿಸಿದರು.
ಇನ್ನೂ ಮುಂದುವರೆದು ಮಾತನಾಡಿದಂತ ಅವರು, ಪರಿಶಿಷ್ಟ ಜಾತಿಯ ಬಡ ಕುಟುಂಬಗಳಿಗೆ ಮನೆ ಕಟ್ಟಿಕೊಳ್ಳಲು ನೆರವು 5 ಲಕ್ಷಕ್ಕೆ ಹೆಚ್ಚಿಸುವಂತ ಪ್ರಸ್ತಾವನೆಗೆ ಅನುಮತಿ ಕೋರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಶೀಘ್ರದಲ್ಲೇ ಪ್ರಸ್ತಾವನೆ ಸಲ್ಲಿಸಲಾಗುತ್ತದೆ. ಆ ಬಳಿಕ, ಮನೆ ಹೆಚ್ಚಳದ ನೆರವಿನ ಆದೇಶವನ್ನು ಪ್ರಕಟಿಸಲಾಗುತ್ತದೆ ಎಂದರು.
ಕೊರೋನಾ ಲಾಕ್ ಡೌನ್ ನಂತ್ರದ ಆರ್ಥಿಕ ಸಂಕಷ್ಟವನ್ನು ಸರಿದೂಗಿಸಲು, ರಾಜ್ಯ ಸರ್ಕಾರವು ಒಂದು ವರ್ಷಗಳ ಕಾಲ ಇಲಾಖೆಯಲ್ಲಿ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಲಾಗುತ್ತದೆ. ಅನಿವಾರ್ಯವಲ್ಲದಂತ ಯೋಜನೆಗಳನ್ನು ತಡೆ ಹಿಡಿಯಲಾಗುವುದು ಎಂದು ತಿಳಿಸಿದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…