ಉಡುಪಿ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕುಮ್ಕಿ ಜಮೀನಿನಲ್ಲಿ ಕೃಷಿ ಮಾಡಲು 30 ವರ್ಷ ಗುತ್ತಿಗೆ ನೀಡಲು ಸರಕಾರ ನಿರ್ಧರಿಸಿದೆ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ.
ಮಾಡಾವು-ಸುಳ್ಯ ವಿದ್ಯುತ್ ಪ್ರಸರಣ ಮಾರ್ಗದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಚಿವರು,ಡೀಮ್ಡ್ ಫಾರೆಸ್ಟ್ ಸಮಸ್ಯೆ ಪರಿಹಾರವಾಗಿದೆ. ಅಲ್ಲದೆ ಕುಮ್ಕಿ ಜಮೀನಿನಲ್ಲಿ ಕೃಷಿ ಮಾಡಲು 30 ವರ್ಷ ಗುತ್ತಿಗೆ ನೀಡಲು ಸರ್ಕಾರ ನಿರ್ಧರಿಸಿದೆ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಮುಂದಿನ ಹತ್ತು ವರ್ಷಗಳ ವಿದ್ಯುತ್ ಬೇಡಿಕೆ ಮುಂದಿರಿಸಿ ಜಿಲ್ಲೆಯಲ್ಲಿ ಪ್ರಸ್ತಾವನೆಯಲ್ಲಿದ್ದ ಹನ್ನೊಂದು 110 ಕೆವಿ ಸಬ್ಸ್ಟೇಷನ್ಗಳಿಗೆ ಮಂಜೂರಾತಿ ನೀಡಲಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿದ್ದ ಹಲವಾರು ವಿದ್ಯುತ್ ಯೋಜನೆಗಳಿಗೆ ಕಳೆದ ಒಂದೂವರೆ ವರ್ಷದಲ್ಲಿ ಮಂಜೂರಾತಿ ನೀಡಲಾಗಿದೆ. ಕಳೆದ ಒಂದೂವರೆ ವರ್ಷದಲ್ಲಿ ರಾಜ್ಯದಲ್ಲಿ 200 ಸಬ್ಸ್ಟೇಷನ್ ನಿರ್ಮಿಸಲಾಗಿದೆ ಎಂದು ಹೇಳಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…