ಬೆಂಗಳೂರು : ವಸತಿ ರಹಿತರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ 10 ಸಾವಿರಕ್ಕೂ ಹೆಚ್ಚು ಮನೆಗಳನ್ನು ಮಾ.21 ರಂದು ಸಿಎಂ ಬಸವರಾಜ ಬೊಮ್ಮಾಯಿ ಅರ್ಹ ಫಲಾನುಭವಿಗಳಿಗೆ ಹಸ್ತಾಂತರ ಮಾಡಲಿದ್ದಾರೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ಅವಾಸ್ ಯೋಜನೆಯಿಂದ 5,24,426 ಮನೆಗಳನ್ನು ನಿರ್ಮಿಸಿ ಅರ್ಹರಿಗೆ ನೀಡಲಾಗುತ್ತಿದೆ. ಇದಕ್ಕಾಗಿ 8,381 ಕೋಟಿ ರೂ. ವೆಚ್ಚ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ 2,360 ಮನೆಗಳು ಮತ್ತು ರಾಜ್ಯದ ವಿವಿಧೆಡೆ 7746 ಮನೆಗಳನ್ನು ಹಸ್ತಾಂತರಿಸಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಯಲಹಂಕ, ಗೋವಿಂದರಾಜ ನಗರ, ಮುದ್ದಯ್ಯನಪಾಳ್ಯ, ಆನೇಕಲ್, ಕೆ.ಆರ್.ಪುರದಲ್ಲಿನ ಮನೆಗಳ ಹಸ್ತಾಂತರ ಮಾಡಿದರೆ, ಶಹಾಫುರ, ಚಿತ್ತಾಪುರ, ಹುಬ್ಬಳ್ಳಿ, ಉಡುಪಿ, ಶಿರಾ ಬಂಗಾರಪೇಟೆ, ಮಂಡ್ಯ ಸೇರಿದಂತೆ ಮೊದಲಾದ ಕಡೆಗಳಲ್ಲಿ ಮನೆಗಳು ಹಸ್ತಾಂತರ ಮಾಡಲಾಗುವುದು ಎಂದು ಹೇಳಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…