Featured

ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯುವನಿಧಿಗೆ ಅರ್ಜಿ ಸಲ್ಲಿಕೆ ಆರಂಭ – ಸಲ್ಲಿಸುವ ವಿಧಾನ ಇಲ್ಲಿದೆ – vishwanews24

ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯುವನಿಧಿಗೆ ಅರ್ಜಿ ಸಲ್ಲಿಕೆ ಆರಂಭ – ಸಲ್ಲಿಸುವ ವಿಧಾನ ಇಲ್ಲಿದೆ

ಮಂಗಳೂರು/ಉಡುಪಿ: ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಭರವಸೆಗೆ ನೋಂದಣಿ ಡಿಸೆಂಬರ್ 26 ರಿಂದ ಆರಂಭವಾಗಿದೆ. 2023-24ನೇ ಸಾಲಿನ ಯಾವುದೇ ವೃತ್ತಿಪರ ಕೋರ್ಸ್, ಪದವಿ, ಡಿಪ್ಲೋಮಾ ಉತ್ತೀರ್ಣರಾಗಿ ಆರು ತಿಂಗಳಲ್ಲಿ ಉದ್ಯೋಗ ಸಿಗದವರಿಗೆ ಈ ಯೋಜನೆ ಅನ್ವಯವಾಗಲಿದೆ.

ಮುಂದಿನ 2 ವರ್ಷ ಪದವೀಧರರಿಗೆ ಮಾಸಿಕ ರೂಪಾಯಿ 3000 ಮತ್ತು ಡಿಪ್ಲೋಮಾ ಮುಗಿಸಿದವರಿಗೆ ಮಾಸಿಕ ರೂ. 1500/ ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ ಉದ್ಯೋಗ ಸಿಕ್ಕಿದ ಕೂಡಲೇ ಈ ಸೌಲಭ್ಯ ಸ್ಥಗಿತಗೊಳ್ಳಲಿದೆ.

ಮಾನದಂಡಗಳು

ಕರ್ನಾಟಕದಲ್ಲಿ ವಾಸಿಸುವ ಕನ್ನಡಿಗ ಅಭ್ಯರ್ಥಿಗಳಿಗೆ ಮಾತ್ರ ಇದು ಲಭ್ಯ. ಕರ್ನಾಟಕದಲ್ಲಿ ಕನಿಷ್ಠ ಆರು ವರ್ಷಗಳವರೆಗೆ ವಾಸಿಸಿ, ಪದವಿ ಅಥವಾ ಡಿಪ್ಲೋಮಾದವರೆಗೆ ಅಧ್ಯಯನ ಮಾಡಿದವರು ಅರ್ಜಿ ಸಲ್ಲಿಸಬಹುದು. ಆರು ವರ್ಷಗಳ ವಾಸವಿರುವುದನ್ನು ಈ ಕೆಳಗಿನಂತೆ ಪರಿಶೀಲಿಸಲಾಗುತ್ತದೆ.

ಎಸ್ ಎಸ್ ಎಲ್ ಸಿ ಅಂಕಪಟ್ಟಿ ಪಿಯುಸಿ ಅಂಕಪಟ್ಟಿ ಮತ್ತು ಪದವಿ ಪ್ರಮಾಣ ಪತ್ರ ಅಂಕಪಟ್ಟಿಗಳು ಅಥವಾ ಎಸ್ ಎಸ್ ಎಲ್ ಸಿ ಅಂಕಪಟ್ಟಿ ಪಿಯುಸಿ ಅಂಕಪಟ್ಟಿ ಡಿಪ್ಲೋಮಾ ಪ್ರಮಾಣ ಪತ್ರ ಅಥವಾ ಅಂಕಪಟ್ಟಿ.

ಸಾಮಾನ್ಯ ಪ್ರವೇಶ ಪರೀಕ್ಷೆ, ಸಿಇಟಿ ನೋಂದಣಿ ಸಂಖ್ಯೆ ಮತ್ತು ಪದವಿ ಪ್ರಮಾಣ ಪತ್ರ ಅಥವಾ ಪಡಿತರ ಚೀಟಿ ನೀಡಿದ ದಿನಾಂಕ ಮತ್ತು ಪದವಿ ಪ್ರಮಾಣ ಪತ್ರ.

ಎನ್.ಐ.ಒ.ಎಸ್ ( ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ) ನೀಡಿದ ಎಸ್ ಎಸ್ ಎಲ್ ಸಿ ಅಂಕಪಟ್ಟಿಯನ್ನು ಸಹ ವಾಸಸ್ಥಳ ಪರಿಶೀಲನೆಗಾಗಿ ಪರಿಗಣಿಸುವುದು.

ಅಭ್ಯರ್ಥಿಯ ಪದವಿ ಡಿಪ್ಲೋಮಾ ಹೊಂದಿರುವ ಸ್ಥಿತಿಯ ಬಗ್ಗೆ ಪರಿಶೀಲಿಸಲು ನ್ಯಾಷನಲ್ ಅಕಾಡೆಮಿ ಡಿಪೋಸಿಟ್ರಿ ಅಲ್ಲಿ ಅಪ್ಲೋಡ್ ಮಾಡಲಾದ ಅಭ್ಯರ್ಥಿಗಳ ಪದವಿ ಡಿಪ್ಲೋಮಾ ಪ್ರಮಾಣ ಪತ್ರ ಅಥವಾ ತಾತ್ಕಾಲಿಕ ಪದವಿ ಡಿಪ್ಲೋಮಾ ಪ್ರಮಾಣ ಪತ್ರಗಳನ್ನು ಪರಿಗಣಿಸಲಾಗುವುದು.

ಅಭ್ಯರ್ಥಿಗಳು ನೊಂದಣಿ ಮಾಡಿಕೊಳ್ಳುವ ಮೊದಲು ಡಿಜಿ ಲಾಕರ್ ನಲ್ಲಿ ಡಿ ಜಿ ಲೋಕಲ್ ಖಾತೆಯನ್ನು ಸೃಜಿಸುವ ಮೂಲಕ ತಮ್ಮ ನ್ಯಾಷನಲ್ ಅಕಾಡಮಿಕ್ ಡಿಪೋಸಿಟ್ರಿ ಪ್ರಮಾಣ ಪತ್ರವನ್ನು ಪಡೆದಿರುವುದು ಖಚಿತಪಡಿಸಿಕೊಳ್ಳುತಕ್ಕದ್ದು.

2023ರ ವರ್ಷದಲ್ಲಿ ತೇರ್ಗಡೆಯಾಗಿದ್ದು, ಉತ್ತೀರ್ಣರಾಗಿ 180 ದಿನಗಳು ಕಳೆದರೂ ಉದ್ಯೋಗ ಲಭಿಸಿದವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಿದ ದಿನದಿಂದ ಉದ್ಯೋಗ ಸಿಗುವರಿಗೆ ಮಾತ್ರ ಅಥವಾ ಎರಡು ವರ್ಷ ಗರಿಷ್ಠ ಅವಧಿವರೆಗೆ ಮಾತ್ರ ಈ ಭತ್ಯೆ ಸಿಗಲಿದೆ.

ಅರ್ಜಿ ಸಲ್ಲಿಸುವ ವಿಧಾನ.

ಸೇವಾ ಸಿಂಧು ಜಾಲತಾಣ sevasindhugs.karnataka.gove.in ದಲ್ಲಿ ಲಾಗಿನ್ ಆಗಿ ಸ್ವತಃ ಅರ್ಜಿ ಸಲ್ಲಿಸಬಹುದು ಅಥವಾ ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನೇರ ನಗದು ವರ್ಗಾವಣೆಗಳನ್ನು ಡಿಬಿಟಿ ಸ್ವೀಕರಿಸಲು ಮೊಬೈಲ್ ಸಂಖ್ಯೆಗೆ ಲಿಂಕ್ ಆದ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯನ್ನು ಹೊಂದಿರತಕ್ಕದ್ದು.

ನಿರುದ್ಯೋಗ ಸ್ಥಿತಿ ಬಗ್ಗೆ ಸ್ವಯಂ ಘೋಷಿಸಬೇಕು, ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.

ಅಭ್ಯರ್ಥಿಗಳು ಅರ್ಜಿ ಹಾಕುವಾಗ ತಾವು ಉತ್ತೀರ್ಣರಾದ ದಿನದಂದು ಆರು ತಿಂಗಳವರೆಗಿನ ತಮ್ಮ ಬ್ಯಾಂಕ್ ಖಾತೆ ವಹಿವಾಟು ಸ್ಟೇಟ್‍ಮೆಂಟ್ ಪ್ರತಿ ನೀಡಬೇಕು.

ಪದವಿ, ಡಿಪ್ಲೋಮಾ ಬಳಿಕ ಉನ್ನತ ಶಿಕ್ಷಣ ಮುಂದುವರಿಸಿದರೆ ಈ ಭತ್ಯೆಗೆ ಅರ್ಹರಾಗುವುದಿಲ್ಲ.

ಅರ್ಜಿ ಸಲ್ಲಿಸಲು ಮತದಾರರ ಗುರುತಿನ ಚೀಟಿ ಪದವಿ ಪ್ರಮಾಣ ಪತ್ರ ಡಿಪ್ಲೋಮಾ ಹೊಂದಿದ್ದರೆ ಸಂಬಂಧಿಸಿದ ಶಿಕ್ಷಣ ಇಲಾಖೆಯಿಂದ ನೀಡಿದ ಅಂಕಪಟ್ಟಿ ಮತ್ತು ಪ್ರಮಾಣ ಪತ್ರ ಆಧಾರ್ ಕಾರ್ಡ್ ಬ್ಯಾಂಕ್ ಖಾತೆ ಮತ್ತು ಅದರ ಮಾಹಿತಿ ಅಗತ್ಯವಿದೆ. ಯಾವುದೇ ಅಪ್ರೆಂಟಿಸ್ ತರಭೇತಿಯನ್ನು ವೇತನದೊಂದಿಗೆ ಪಡೆಯುತ್ತಿರುವವರು, ಸರ್ಕಾರಿ ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವರು, ಸರ್ಕಾರದ ನಾನಾ ಯೋಜನೆಗಳ ಅಡಿ ಬ್ಯಾಂಕ್ ಸಾಲ ಪಡೆದು ಸ್ವಉದ್ಯೋಗ ಆರಂಭಿಸಿದವರು ಈ ಯೋಜನೆಗೆ ಅರ್ಹರಾಗುವುದಿಲ್ಲ. ಎಂದು ಜಿಲ್ಲಾಧಿಕಾರಿಗಳು ಕಚೇರಿ ಪ್ರಕಟಣೆ ತಿಳಿಸಿದೆ.

ಈ ಮೇಲಿನ ಎಲ್ಲಾ ಅಂಶಗಳಲ್ಲಿ ತಿಳಿಸಿರುವಂತೆ ಅರ್ಹರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

2 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

2 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

3 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

3 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

3 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

3 days ago