ಬೆಂಗಳೂರು: ಜ.29 ರಂದು ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ಇಲಾಖೆಯ ಎಲ್ಲ ನೌಕರರಿಗೆ ಖಾದಿ ಬಟ್ಟೆ ಕಡ್ಡಾಯ ಎಂದು ಒಮ್ಮತದಿಂದ ತೀರ್ಮಾನಿಸಲಾಯಿತು.
ಏಪ್ರಿಲ್ 21, ಸರ್ಕಾರಿ ನೌಕರರ ದಿನಾಚರಣೆಯ ದಿನದಂದೇ ಈ ನಿಯಮವನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ನಿಗಮ-ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಅನುದಾನಿತ ಸಂಸ್ಥೆಗಳ ಅಧಿಕಾರಿ-ನೌಕರರು ಸ್ವಯಂ ಪ್ರೇರಣೆಯಿಂದ ಖಾದಿ ಬಟ್ಟೆಗಳನ್ನು ಧರಿಸುವ ಸಂಬಂಧ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಯಿತು.
ಪ್ರತಿ ತಿಂಗಳ ಮೊದಲ ಶನಿವಾರದಂದು ಎಲ್ಲಾ ಅಧಿಕಾರಿ, ನೌಕರರು ಖಾದಿ ಬಟ್ಟೆಗಳನ್ನು ಧರಿಸಿ, ತಮ್ಮ ಕರ್ತವ್ಯ ನಿರ್ವಹಿಸಬೇಕು ಎನ್ನಲಾಗಿದ್ದು, ಸರ್ಕಾರಿ ಸ್ವಾಮ್ಯದ ಖಾದಿ ಗ್ರಾಮೋದ್ಯೋಗ ಮಂಡಳಿಯ ಮಳಿಗೆಗಳಲ್ಲಿ ಖಾದಿ ಬಟ್ಟೆಗಳನ್ನು ಖರೀದಿಸಲು ಸೂಚಿಸಲಾಗಿದೆ. ಖಾದಿ ಗ್ರಾಮೋದ್ಯೋಗ ಮಂಡಳಿಯು ಹಾಲಿ ನೀಡುತ್ತಿರುವ ರಿಯಾಯಿತಿಯ ಹೊರತಾಗಿ ಅಧಿಕಾರಿ ಮತ್ತು ನೌಕರರಿಗೆ ಶೇ5ರಷ್ಟು ಹೆಚ್ಚುವರಿ ರಿಯಾಯಿತಿ ನೀಡುವುದರ ಬಗ್ಗೆಯೂ ಪ್ರಸ್ತಾಪಿಸಲಾಯಿತು.
ಡ್ರೆಸ್ಕೋಡ್:
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…