ಉಡುಪಿ : ರಾಜ್ಯಾದ್ಯಂತ 7 ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸರಕಾರಿ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ಉಡುಪಿಯಲ್ಲಿ ಬೆಂಬಲ ವ್ಯಕ್ತವಾಗಿದೆ.
ಉಡುಪಿಯಲ್ಲಿ ಸರಕಾರಿ ಕಚೇರಿಗಳಲ್ಲಿ ಕೆಲಸ ಕಾರ್ಯಗಳು ಸ್ಥಗಿತವಾಗಿದ್ದು, ಸರಕಾರಿ ಕಾಲೆಜುಗಳಿಗೆ ರಜೆ ಘೋಷಿಸಲಾಗಿದೆ. ಇದರಿಂದ ಹಲವು ಕಾಲೇಜುಗಳಲ್ಲಿ ಇಂದು ನಡೆಯಬೇಕಿದ್ದ ಪದವಿ ಪೂರ್ವ ಮತ್ತು ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಬಗ್ಗೆ ನಿನ್ನೆಯಿಂದಲೇ ಸುದ್ದಿಗಳು ಹರಿದಾಡುತ್ತಿದ್ದಾದರೂ ಕೆಲ ವಿದ್ಯಾರ್ಥಿಗಳು ಇಂದು ಬೆಳಿಗ್ಗೆ ಪರೀಕ್ಷೆ ಇದ್ದ ಕಾರಣ ಕಾಲೇಜಿಗೆ ತೆರಳಿ ವಾಪಾಸ್ಸಾಗುತ್ತಿರುವ ದೃಶ್ಯಗಳು ಉಡುಪಿ, ಮಣಿಪಾಲದಲ್ಲಿ ಕಂಡು ಬಂದಿದೆ.
ಇನ್ನು ಸರಕಾರಿ ಕಚೇರಿಗಳಲ್ಲಿ ಕೆಲಸ ಕಾರ್ಯಗಳು ಸ್ಥಿತವಾಗಿರುವುದರಿಂದ ಕಚೇರಿಗಳಲ್ಲಿ ಸಾರ್ವಜನಿಕರ ಓಡಾಟ ಇಲ್ಲದೆ ಬಿಕೋ ಎನಿಸುತ್ತಿತ್ತು. ಅಲ್ಲದೆ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರುಗಳೂ ಸರಕಾರಿ ನೌಕರರ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದು, ತುರ್ತು ಸೇವೆ ಹೊರತು ಪಡಿಸಿ ಇತರ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದ ಇಂದು ಸರಕಾರಿ ಆಸ್ಪತ್ರೆಗೆ ತೆರಳುವ ರೋಗಿಗಳು ಪರದಾಡುವಂತಾಗಿದೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…