ಉಡುಪಿ : ರಾಜ್ಯಾದ್ಯಂತ 7 ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸರಕಾರಿ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ಉಡುಪಿಯಲ್ಲಿ ಬೆಂಬಲ ವ್ಯಕ್ತವಾಗಿದೆ.
ಉಡುಪಿಯಲ್ಲಿ ಸರಕಾರಿ ಕಚೇರಿಗಳಲ್ಲಿ ಕೆಲಸ ಕಾರ್ಯಗಳು ಸ್ಥಗಿತವಾಗಿದ್ದು, ಸರಕಾರಿ ಕಾಲೆಜುಗಳಿಗೆ ರಜೆ ಘೋಷಿಸಲಾಗಿದೆ. ಇದರಿಂದ ಹಲವು ಕಾಲೇಜುಗಳಲ್ಲಿ ಇಂದು ನಡೆಯಬೇಕಿದ್ದ ಪದವಿ ಪೂರ್ವ ಮತ್ತು ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಬಗ್ಗೆ ನಿನ್ನೆಯಿಂದಲೇ ಸುದ್ದಿಗಳು ಹರಿದಾಡುತ್ತಿದ್ದಾದರೂ ಕೆಲ ವಿದ್ಯಾರ್ಥಿಗಳು ಇಂದು ಬೆಳಿಗ್ಗೆ ಪರೀಕ್ಷೆ ಇದ್ದ ಕಾರಣ ಕಾಲೇಜಿಗೆ ತೆರಳಿ ವಾಪಾಸ್ಸಾಗುತ್ತಿರುವ ದೃಶ್ಯಗಳು ಉಡುಪಿ, ಮಣಿಪಾಲದಲ್ಲಿ ಕಂಡು ಬಂದಿದೆ.
ಇನ್ನು ಸರಕಾರಿ ಕಚೇರಿಗಳಲ್ಲಿ ಕೆಲಸ ಕಾರ್ಯಗಳು ಸ್ಥಿತವಾಗಿರುವುದರಿಂದ ಕಚೇರಿಗಳಲ್ಲಿ ಸಾರ್ವಜನಿಕರ ಓಡಾಟ ಇಲ್ಲದೆ ಬಿಕೋ ಎನಿಸುತ್ತಿತ್ತು. ಅಲ್ಲದೆ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರುಗಳೂ ಸರಕಾರಿ ನೌಕರರ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದು, ತುರ್ತು ಸೇವೆ ಹೊರತು ಪಡಿಸಿ ಇತರ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದ ಇಂದು ಸರಕಾರಿ ಆಸ್ಪತ್ರೆಗೆ ತೆರಳುವ ರೋಗಿಗಳು ಪರದಾಡುವಂತಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…