ರಾಜ್ಯ ಸರ್ಕಾರ ಕರ್ನಾಟಕವನ್ನು ಪಾಕಿಸ್ತಾನ ಮಾಡಲು ಹೊರಟಿದೆ: ಯಶ್ಪಾಲ್ ಸುವರ್ಣ – Vishwanews24
ರಾಜ್ಯ ಸರ್ಕಾರ ಕರ್ನಾಟಕವನ್ನು ಪಾಕಿಸ್ತಾನ ಮಾಡಲು ಹೊರಟಿದೆ: ಯಶ್ಪಾಲ್ ಸುವರ್ಣ
ಮಂಗಳೂರು: ಶಾಸಕ ತನ್ವೀರ್ ಸೇಠ್ ಅವರು ಡಿ.ಜಿ ಹಳ್ಳಿ, ಕೆ.ಜಿ ಹಳ್ಳಿ, ಶಿವಮೊಗ್ಗದಲ್ಲಿ ನಡೆದಿದ್ದಂತ ಗಲಭೆ ಪ್ರಕರಣಗಳನ್ನು ವಾಪಾಸ್ ಪಡೆಯುವಂತೆ ಗೃಹ ಸಚಿವರಿಗೆ ಪತ್ರ ಬರೆದಿದ್ದು ವೈರಲಾಗಿತ್ತು. ಈ ಬೆನ್ನಲ್ಲೇ ವಿವಾದಕ್ಕೆ ಕಾರಣ ಕಾರಣವಾಗಿದೆ. ಈಗ ತನ್ವೀರ್ ಸೇಠ್ ಕೂಡ ಒಬ್ಬ ಜಿಹಾದಿ ಸದಸ್ಯ ಎಂಬುದಾಗಿ ಶಾಸಕ ಯಶ್ಪಾಲ್ ಸುವರ್ಣ ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿರುವಂತ ಅವರು, ರಾಜ್ಯ ಸರ್ಕಾರ ಕರ್ನಾಟಕವನ್ನು ಪಾಕಿಸ್ತಾನ ಮಾಡಲು ಹೊರಟಿದೆ. ಶಾಸಕ ತನ್ವೀರ್ ಸೇಠ್ ಕೂಡ ಜೀಹಾದಿ ಸಂಘಟನೆಯ ಸದಸ್ಯ ಎಂಬುದಾಗಿ ಕಿಡಿಕಾರಿದ್ದಾರೆ.
ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಇಂತಹ ಸರ್ಕಾರದಿಂದ ಏನು ನಿರೀಕ್ಷೆ ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.
ಕಾನೂನ ಬಾಹಿರವಾಗಿ ಗೃಹ ಸಚಿವರಿಗೆ ಪತ್ರ ಬರೆದಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದಂತ ಅವರು, ಗೃಹ ಸಚಿವರು ಆರೋಪಿಗಳ ಕೇಸ್ ಹಿಂಪಡೆಯಬಾರದು ಎಂಬುದಾಗಿ ಒತ್ತಾಯಿಸಿದರು.
ಡಿ.ಜಿ ಹಳ್ಳಿ, ಕೆಜಿ ಹಳ್ಳಿ ಗಲಭೆ ಕೇಸ್ ಕೋರ್ಟ್ ನಲ್ಲಿದೆ. ಕೋರ್ಟ್ ನಲ್ಲೇ ತೀರ್ಮಾನವಾಗಲಿದೆ. ಸರ್ಕಾರ ಮಧ್ಯಪ್ರವೇಶಿಸಬಾರದು ಎಂದು ಹೇಳಿದರು.
