Featured

ರಾಜ್ಯ ಸರ್ಕಾರ ಗೋ ಹತ್ಯ ನಿಷೇಧ ವಿಧೇಯಕ ಮಂಡಿಸಿರುವುದನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ : ಕ್ಯಾಪ್ಟನ್ ಗಣೇಶ್ ಕಾರ್ಣಿಕ್ -Vishwanews24

ರಾಜ್ಯ ಸರ್ಕಾರ ಗೋ ಹತ್ಯ ನಿಷೇಧ ವಿಧೇಯಕ ಮಂಡಿಸಿರುವುದನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ : ಕ್ಯಾಪ್ಟನ್ ಗಣೇಶ್ ಕಾರ್ಣಿಕ್ -Vishwanews24

ಮಂಗಳೂರು,: ನಾಡಿನ ರೈತ ಸಮುದಾಯ ಸೇರಿದಂತೆ ಹೈನುಗಾರರು, ಸಾರ್ವಜನಿ ಕರು ಮತ್ತು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ರೂಪಿತವಾದ ಜನಾಭಿಪ್ರಾಯವನ್ನು ಪರಿಗಣಿಸಿ ಭಾಜಪಾ ದ ರಾಜ್ಯ ಕಾರ್ಯಕಾರಿಣಿಯ ನಿರ್ಣಯದಂತೆ ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿ ಗಳಾದ ಬಿ.ಎಸ್. ಯಡಿಯೂರಪ್ಪರವರ ನೇತೃತ್ವದ ರಾಜ್ಯ ಸರ್ಕಾರ ಗೋ ಹತ್ಯ ನಿಷೇಧ ವಿಧೇಯಕ ಮಂಡಿಸಿರುವುದನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ ಎಂದು ವಿಧಾನಪರಿಷತ್‌ನ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ.

ಈ ಕಾಯ್ದೆಯಿಂದಾಗಿ ಗೋವು ಕಳ್ಳತನ, ಗೋವಿನ ಅನಧಿಕೃತ ಸಾಗಟ ಹಾಗೂ ಅನಧಿಕೃತ ಕಸಾಯಿಖಾನೆ ಚಟುವಟಿಕೆಗಳಿಗೆ ಕಡಿವಾಣ ಬೀಳಲಿದೆ ಮತ್ತು ಸಮಾಜದ ಸಾಮರಸ್ಯ ಕಾಪಾಡುವಲ್ಲಿ ಈ ಮಸೂದೆಯು ಪರಿಣಮಕಾರಿಯಾಗಿ ಕಾರ್ಯನಿರ್ವಹಿಸಲಿದೆ. ಗೋ ಹತ್ಯ ನಿಷೇಧ ಮತ್ತು ಗೋ ಕಳ್ಳ ಸಾಗಣಿಕೆಯ ವಿರುದ್ಧ ಪೊಲೀಸ್ ಇಲಾಖೆಯ ಪ್ರಯತ್ನಗಳಿಗೂ ಈ ಕಾಯ್ದೆ ಇನ್ನಷ್ಟು ಶಕ್ತಿ ತುಂಬಲಿದೆ.

ಭಾರತೀಯ ಜನತಾ ಪಾರ್ಟಿಯ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಗೋ ಹತ್ಯ ನಿಷೇಧ ವಿಧೇಯಕವನ್ನು ಮಂಡಿಸಿದ ರಾಜ್ಯ ಸರ್ಕಾರವನ್ನು, ಹೈನುಗಾರಿಕಾ ಮಂತ್ರಿಗಳಾದ ಶ್ರೀ ಪ್ರಭು ಚಹ್ಹಾನ್‌ರವರನ್ನು ಹಾಗೂ ಕೆಳಮನೆಯಲ್ಲಿ ವಿಧೇಯಕಕ್ಕೆ ಅಂಗೀಕಾರ ನೀಡಿದ ಶಾಸಕರನ್ನು ನಾಡಿನ ಜನತೆಯ ಪರವಾಗಿ ಕೃತಜ್ಞತಾ ಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದು ಕ್ಯಾಪ್ಟನ್ ಕಾರ್ಣಿಕ್ ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

15 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

16 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

16 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

16 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

16 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago