Featured

ರಾಜ್ಯ ಸರ್ಕಾರ ಮುಸ್ಲಿಮರ ನಿಯಂತ್ರಣದಲ್ಲಿದೆ : ಚಕ್ರವರ್ತಿ ಸೂಲಿಬೆಲೆ – vishwanews24

ಕಾಂಗ್ರೆಸ್ ಸರ್ಕಾರ ಬಂದಿರುವುದೇ ಅಲ್ಲಾಹುವಿನ ಕೃಪೆಯಿಂದ ; ಅವರಿಂದ ಇನ್ನೂ ಏನನ್ನು ನಿರೀಕ್ಷಿಸಲು ಸಾಧ್ಯ ..? : ಚಕ್ರವರ್ತಿ ಸೂಲಿಬೆಲೆ

ರಾಯಚೂರು: ರಾಜ್ಯ ಸರ್ಕಾರ ಮುಸ್ಲಿಮರ ನಿಯಂತ್ರಣದಲ್ಲಿದೆ. ಕಾಂಗ್ರೆಸ್ ಸರ್ಕಾರ ಬಂದಿರುವುದೇ ಅಲ್ಲಾಹುವಿನ ಕೃಪೆಯಿಂದ ಎಂದು ಹೇಳುವಾಗ ಇನ್ನೂ ಏನನ್ನು ನಿರೀಕ್ಷಿಸಲು ಸಾಧ್ಯ ಎಂದು ಚಿಂತಕ, ಯುವ ಬ್ರಿಗೆಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ಟೀಕಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾವೆಲ್ಲ ಪೂಜಿಸುವ ಗೋವಿನ ಕೆಚ್ಚಲು ಕತ್ತರಿಸಿದವನಿಗೆ ಹುಚ್ಚ ಎನ್ನುವ ಪಟ್ಟ ಕಟ್ಟಲಾಗುತ್ತಿದೆ. ಆ ಹುಚ್ಚನಿಗೆ ಗೋವಿನ ಕೆಚ್ಚಲನ್ನೆ ಯಾಕೆ ಕಡಿಯಬೇಕು ಎನಿಸಿತು. ನಾಯಿಯದ್ದೊ ಮತ್ಯಾವುದೋ ಪ್ರಾಣಿಯದ್ದು ಯಾಕೆ ಕಡಿಯಬೇಕು ಎನಿಸಿಲಿಲ್ಲ. ಆತನಿಗೆ ಈ ಆಲೋಚನೆ ಬಂದಿದ್ದು ಯಾವ ಪ್ರಾರ್ಥನಾ ಮಂದಿರದಿಂದ ಎನ್ನುವುದನ್ನು ಸರ್ಕಾರ ತಿಳಿಸಬೇಕು ಎಂದು ತಾಕೀತು ಮಾಡಿದರು.

ಮುಸ್ಲಿಮರು ತಪ್ಪು ಮಾಡಿದರೆ ಅವರು ಹುಚ್ಚರು, ದಡ್ಡರಾಗಿರುತ್ತಾರೆ. ಅದೆ ಬೇರೆ ಧರ್ಮಿಯರು ಮಾಡಿದಾಗ ವ್ಯವಸ್ಥಿತವಾಗಿ ಮಾಡಿರುತ್ತಾರೆ ಎಂದು ಬಿಂಬಿಸಲಾಗುತ್ತಿದೆ. ಹಿಂದು ಧರ್ಮದ ಆರಾಧನೆಗಳಿಗೆ ಅಪಮಾನ ಮಾಡಿದವರಿಗೆ ಹುಚ್ಚರೆಂಬ ಸಮಜಾಯಿಷಿ ಕೊಡುತ್ತೀರಿ ಎಂದರೆ ಸರ್ಕಾರ ಯಾವ ಮನಸ್ಥಿತಿಯಲ್ಲಿದೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದರು.

ಮುಸ್ಲಿಮರು ತಮ್ಮ ಸಂಖ್ಯೆ ಹೆಚ್ಚಿಸಿಕೊಳ್ಳಬೇಕು ಎನ್ನುವ ಪ್ರಮುಖ ಅಜೆಂಡಾದಲ್ಲಿದ್ದಾರೆ. ಅವರಲ್ಲಿ ತಮ್ಮಿಂದ ಸಮಾಜಕ್ಕೆ ತೊಂದರೆಯಾಗುತ್ತದೆ ಎನ್ನುವ ಕಾಳಜಿ ಕಾಣುವುದಿಲ್ಲ. ಕೊರೊನಾ ವೇಳೆ ಎಲ್ಲರೂ ಮನೆಯಲ್ಲಿದ್ದರೆ ಅವರು ಮಾತ್ರ ನಾವು ಸಾಮೂಹಿಕ ಪ್ರಾರ್ಥನೆ ಮಾಡಿಯೇ ಸಿದ್ಧ ಎನ್ನುತ್ತಿದ್ದರು. ಮತಾಂತರ ಮಾಡುವುದು, ಅನ್ಯಧರ್ಮಿಯರ ಮಹಿಳೆಯರನ್ನು ಮದುವೆಯಾಗಿ ಜನಸಂಖ್ಯೆ ವೃದ್ಧಿಸಿಕೊಳ್ಳುವ ಕೆಲಸದಲ್ಲಿದ್ದಾರೆ. ದೇಶದಲ್ಲಿ 8-10 ಕೋಟಿ ಬಾಂಗ್ಲಾ ಮುಸ್ಲಿಮರಿದ್ದಾರೆ ಎಂದು ಆ ದೇಶದವರೇ ಹೇಳುತ್ತಿದ್ದಾರೆ ಎಂದರು.

 

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೇಶದ ವ್ಯವಸ್ಥೆ ವಿರುದ್ಧವೇ ಹೋರಾಡುತ್ತಾರೆ. ವಿರೋಧಿ ದೇಶದ ನಾಯಕರು ನೀಡಬೇಕಾದ ಹೇಳಿಕೆಯನ್ನು ರಾಹುಲ್ ಗಾಂಧಿ ನೀಡುತ್ತಾರೆ. ಅವರ ಅಂತರಂಗದ ಹೇಳಿಕೆ ಹೊರಬಿದ್ದಂತಾಗಿದೆ. ಚೀನಾದ ಫಂಡ್ ಪಡೆದು ಫೌಂಡೇಶನ್ ನಡೆಸುವವರ ಬಗ್ಗೆ ನಾವು ಹೆಚ್ಚಿಗೆ ಏನು ಹೇಳಲಾಗದು ಎಂದರು.

ಡಾ.ಅಂಬೇಡ್ಕರ್ ವಿಚಾರಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಬೆಳಕು ಹೊಳಪು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಿಂದು ಧರ್ಮದ ಬುಡ ಅಲ್ಲಾಡಿಸಿದವರು ಡಾ.ಅಂಬೇಡ್ಕರ್ ಅವರು. ಅದನ್ನು ಸ್ವೀಕರಿಸಿ ತಪ್ಪುಗಳನ್ನು ತಿದ್ದಿಕೊಂಡು ಮುನ್ನಡೆಯಲಾಗುತ್ತದೆ. ಅವರು ಕೇವಲ ಹಿಂದು ಧರ್ಮವನ್ನು ಮಾತ್ರವಲ್ಲದೇ ಕಾಂಗ್ರೆಸ್ ಬಗ್ಗೆಯೂ ಕಟು ಟೀಕೆ ಮಾಡಿದರು. ಸ್ವಾಭಿಮಾನ ಕಳೆದುಕೊಳ್ಳಕಾದರೆ ಕಾಂಗ್ರೆಸ್ ಸೇರಿರಿ ಎಂದಿದ್ದರು. ಕಮ್ಯುನಿಸ್ಟರ್ ಬಗ್ಗೆಯೂ ಬಹಳ ಕಟುವಾಗಿ ಟೀಕಿಸಿದ್ದರು. ಡಾ.ಅಂಬೇಡ್ಕರ್ ಮಹಾಮಾನವತಾವಾದಿ. ಅವರ ವಿಚಾರಗಳನ್ನು ಜನರಿಗೆ ತಲುಪಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

16 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

19 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

19 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

19 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

19 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

20 hours ago