Featured

ರಾಜ್ಯ ಸರ್ಕಾರದ ಯಾವುದೇ ನಾಯಕನೂ ಕೂಡ ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾಗಿಲ್ಲ : ಸಿ. ಎಂ ಬೊಮ್ಮಾಯಿ ಸ್ಪಷ್ಟನೆ – Vishwanews24

ರಾಜ್ಯ ಸರ್ಕಾರಯಾವುದೇ ನಾಯಕನೂ ಕೂಡ ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾಗಿಲ್ಲ : ಸಿ. ಎಂ ಬೊಮ್ಮಾಯಿ ಸ್ಪಷ್ಟನೆ – Vishwanews24

ಬೆಂಗಳೂರು: ರಾಜ್ಯ ಸರ್ಕಾರ ಯಾವುದೇ ನಾಯಕನೂ ಕೂಡ ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾಗಿಲ್ಲ. ನಾವು ಯಾರನ್ನೂ ರಕ್ಷಣೆ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುಜರಾತ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿರುವ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರ ಸನ್ಮಾನ ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಟ್ ಕಾಯಿನ್ ಹಗರಣದ ಕುರಿತು ಪ್ರಸ್ತಾಪ ಮಾಡುತ್ತಿರುವವರು ವಾಸ್ತವವಾಗಿ ಹಗರಣ ಏನೆಂದು ನಿಖರವಾಗಿ ತಿಳಿಸಲಿ. ಇದನ್ನು ಸಾಬೀತು ಪಡಿಸುವ ದಾಖಲೆಗಳನ್ನು ಈಗಾಗಲೇ ಪ್ರಕರಣ ತನಿಖೆ ನಡೆಸುತ್ತಿರುವ ತನಿಖಾ ಸಂಸ್ಥೆಗಳಿಗೆ ಹಸ್ತಾಂತರಿಸಿ, ಆರೋಪಗಳನ್ನು ಸಾಬೀತು ಪಡಿಸಲಿ. ಸರ್ಕಾರದ ಯಾವುದೇ ನಾಯಕರೂ ಕೂಡ ಹಗರಣದಲ್ಲಿ ಭಾಗಿಯಾಗಿಲ್ಲ. ನಮ್ಮ ಸರ್ಕಾರ ಯಾರನ್ನೂ ರಕ್ಷಣೆ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.

ಪ್ರತಿದಿನ ಈ ವಿಷಯದ ಕುರಿತು ಪ್ರತಿಕ್ರಿಯೆ ನೀಡಬಯಸುವುದಿಲ್ಲ. ಈ ಕುರಿತು ಆರೋಪಗಳನ್ನು ಮಾಡುತ್ತಿರುವವರು ಹಗರಣ ಏನು ಹಾಗೂ ಇದರಲ್ಲಿ ಯಾರು ಭಾಗಿಯಾಗಿದ್ದಾರೆ ಎಂದು ತಿಳಿಸಲಿ. ಈಗಾಗಲೇ 8-9 ತಿಂಗಳ ಹಿಂದೆಯೇ ಪ್ರಕರಣವನ್ನು ಇಡಿಗೆ ಹಸ್ತಾಂತರಿಸಲಾಗಿದೆ. ಅಂತರಾಷ್ಟ್ರೀಯ ವಿಷಯವಾಗಿರುವುದರಿಂದ ಸಿಬಿಐನ ಇಂಟರ್ ಪೋಲ್ ವಿಭಾಗಕ್ಕೂ ಮಾಹಿತಿ ನೀಡಲಾಗಿದೆ. ಈ ಹಗರಣದ ಮೊತ್ತದ ಬಗ್ಗೆ ವಿಭಿನ್ನ ಹೇಳಿಕೆಗಳು ಬರುತ್ತಿವೆ. ಇದಕ್ಕೆ ಯಾವುದೇ ದಾಖಲೆಗಳ ಆಧಾರವಿಲ್ಲ. ಇದರಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೂ ಇಲ್ಲ. ನಾವು ಯಾರೂ ಭಾಗಿಯಾಲ್ಲ ಎಂದರು.

ಮುಖ್ಯಮಂತ್ರಿ ಹುದ್ದೆಗೆ ಸಂಚಕಾರ ಬರಲಿದೆ ಎಂಬ ಪ್ರತಿಪಕ್ಷಗಳ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಇದು ರಾಜಕೀಯ ಪ್ರೇರಿತ ಎಂದಷ್ಟೇ ತಿಳಿಸಿದರು

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

14 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

16 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

17 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

17 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

17 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

17 hours ago