Featured

ರಾಜ್ಯ ಸರ್ಕಾರ ಸಹಕರಿಸಿದರೆ ಪಡುಬಿದ್ರಿ ಎರ್ಮಾಳಿನಲ್ಲಿ ವಿಮಾನ ನಿಲ್ದಾಣ : ಸಂಸದ ಕೋಟ ಮನವಿಗೆ ಸ್ಪಂದಿಸಿ ಕೇಂದ್ರ ವಿಮಾನಯಾನ ಸಚಿವರಿಂದ ಪತ್ರ – vishwanews24

ರಾಜ್ಯ ಸರ್ಕಾರ ಸಹಕರಿಸಿದರೆ ಪಡುಬಿದ್ರಿ ಎರ್ಮಾಳಿನಲ್ಲಿ ವಿಮಾನ ನಿಲ್ದಾಣ : ಸಂಸದ ಕೋಟ ಮನವಿಗೆ ಸ್ಪಂದಿಸಿ ಕೇಂದ್ರ ವಿಮಾನಯಾನ ಸಚಿವರಿಂದ ಪತ್ರ

ಉಡುಪಿ  ಕರ್ನಾಟಕ ರಾಜ್ಯ ಸರ್ಕಾರ ಸೂಕ್ತ ನೆರವು ನೀಡಿದರೆ ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯ, ಪಡುಬಿದ್ರೆ ಬಳಿಯ ಎರ್ಮಾಳಿನ ವಿಮಾನ ನಿಲ್ದಾಣ ಯೋಜನೆಯನ್ನು ಕೈಗೆತ್ತಿಕೊಳ್ಳಬಹುದಾಗಿದೆ ಎಂದು ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಸಂಸದ ಕೋಟ ಅವರ ಮನವಿಗೆ ಸ್ಪಂದಿಸಿ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕೋರಿಕೆಯ ಮೇರೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಎರ್ಮಾಳಿನಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ್ದರು. ಈ ಬಗ್ಗೆ ಸಚಿವರು ಕೋಟ ಶ್ರೀನಿವಾಸ ಪೂಜಾರಿಗೆ ಬರೆದ ಪತ್ರದಲ್ಲಿ ಉಡಾನ್ ಯೋಜನೆಯಾದ ವಿಮಾನ ನಿಲ್ದಾಣ ಅಭಿವೃದ್ಧಿ ಮತ್ತು ಸುಧಾರಣೆಗಾಗಿ ಕೇಂದ್ರದ ಸಹಕಾರ ನೀಡಲು ಸಮ್ಮತಿ ಇದ್ದು ಸೂಕ್ತವಾದ ಸ್ಥಳವನ್ನು ಗುರುತಿಸಿ, ಯೋಜನೆಯ ಕಾರ್ಯ ಸಾಧ್ಯತೆಯ ಅಧ್ಯಯನ ನಡೆಸಿ, ಕೇಂದ್ರ ಸರಕಾರಕ್ಕೆ ಪ್ರಸ್ತಾಪನೆ ಸಲ್ಲಿಸುವಂತೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: 

ಭಾರತ ಸರಕಾರದ ಗ್ರೀನ್ ಫೀಲ್ಡ್ ನೀತಿಯಂತೆ ಕೇಂದ್ರ ಸರಕಾರ ನೆರವು ನೀಡಲಿದೆ ಎಂದು ಕೇಂದ್ರ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ನನ್ನ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಗೌರವಾನ್ವಿತ ಸಚಿವರಿಗೆ ಧನ್ಯವಾದಗಳು. ಈ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಕೋಟ ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

32 minutes ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

44 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

1 hour ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

1 hour ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

2 hours ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

2 hours ago